“ಅಂಚೆ ಚೀಟಿ, ನಾಣ್ಯ ಸಂಗ್ರಹ ಉತ್ತಮ ಹವ್ಯಾಸ’

ಮಟ್ಟುಗುಳ್ಳ, ಶಂಕರಪುರ ಮಲ್ಲಿಗೆ, ಯುಪ್ಲಿಕ್ಟಿಸ್‌ ಅಲೋಸಿ ಕಪ್ಪೆಗೆ ಅಂಚೆ ಗೌರವ

Team Udayavani, Oct 15, 2019, 5:52 AM IST

1310MLR32

ಮಂಗಳೂರು: ಅಂಚೆ ಚೀಟಿ ಮತ್ತು ನಾಣ್ಯಗಳಿಗೆ ತಮ್ಮದೇ ಆದ ಇತಿಹಾಸವಿದ್ದು, ಅವು ಸಂಶೋಧನೆಯ ಆಕರಗಳಾಗಿವೆ. ಆದ್ದರಿಂದ ಬಾಲ್ಯದಿಂದಲೇ ಇವುಗಳನ್ನು ಸಂಗ್ರಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಹೇಳಿದರು.

ಕರ್ನಾಟಕ ಅಂಚೆ ವೃತ್ತದ ವತಿಯಿಂದ ನಗರದಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ “ಕರ್ನಾಪೆಕ್ಸ್‌- 2019’ನಲ್ಲಿ ರವಿವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.

ಅಂಚೆಚೀಟಿ ಮತ್ತು ನಾಣ್ಯಗಳ ಅಧ್ಯಯನ ಕುತೂಹಲ ಕೆರಳಿಸುತ್ತದೆ. ಆದ್ದರಿಂದ ಮಕ್ಕಳನ್ನು ಇಂತಹ ಪ್ರದರ್ಶನಗಳಿಗೆ ಕರೆದೊಯ್ಯಬೇಕು ಎಂದವರು ಹೇಳಿದರು.

ಅಂಚೆ ಚೀಟಿಯಲ್ಲಿ ಕನ್ನಡ ಅಕ್ಷರ ಮಾಲೆ
ಅಂಚೆ ಇಲಾಖೆ ಹೊರತಂದ “ಅಂಚೆ ಚೀಟಿಯಲ್ಲಿ ಕನ್ನಡ ಅಕ್ಷರ ಮಾಲೆ’ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ, ಈ ಪುಸ್ತಕವನ್ನು ಎಲ್ಲ ಶಾಲೆಗಳಿಗೆ ಒದಗಿಸಬೇಕು ಎಂದು ಸಲಹೆ ಮಾಡಿದರು.

ಸಮ್ಮಾನ
ಹಿರಿಯ ಅಂಚೆ ಚೀಟಿ ಸಂಗ್ರಾಹಕರಾದ ಎಂ.ಕೆ. ಕೃಷ್ಣಯ್ಯ, ಡಾ| ಕೆ.ಎಸ್‌. ಪ್ರಭಾಕರ ರಾವ್‌, ಎಸ್‌. ನಾರಾಯಣ ರಾವ್‌ ಮತ್ತು ಎಂ.ಆರ್‌. ಪಾವಂಜೆ ಅವರನ್ನು ಸಮ್ಮಾನಿಸಲಾಯಿತು.

ಬೆಂಗಳೂರಿನ ಪೋಸ್ಟ್‌ಮಾಸ್ಟರ್‌ ಜನರಲ್‌ ಕ| ಅರವಿಂದ ವರ್ಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರ್‌.ಎಂ.ಎಸ್‌. ಸೀನಿಯರ್‌ ಸೂಪರಿಂಟೆಂಡೆಂಟ್‌ ಸಂದೇಶ್‌ ಮಹಾದೇವಪ್ಪ ಸ್ವಾಗತಿಸಿ, ಅಂಚೆ ಇಲಾಖೆಯ ಬೆಂಗಳೂರು ದಕ್ಷಿಣ ವಿಭಾಗದ ಸೀನಿಯರ್‌ ಸೂಪರಿಂಟೆಂಡೆಂಟ್‌ ಟಿ.ಎಸ್‌. ಅಶ್ವತ್ಥ ನಾರಾಯಣ ವಂದಿಸಿದರು. ಪೂರ್ಣಿಮಾ ಜನಾರ್ದನ್‌ ಕಾರ್ಯಕ್ರಮ ನಿರ್ವಹಿಸಿದರು.

ಕರಾವಳಿಯ ಅನನ್ಯತೆಗಳಿಗೆ ಅಂಚೆ ಗೌರವ
ಉಡುಪಿ ಜಿಲ್ಲೆಯ ಕಟಪಾಡಿ ಬಳಿಯ ಮಟ್ಟು ಗ್ರಾಮ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿ ಬೆಳೆಯುವ ಮಟ್ಟುಗುಳ್ಳ, ಶಂಕರಪುರದಲ್ಲಿ ಬೆಳೆಯುವ ಶಂಕರಪುರ ಮಲ್ಲಿಗೆಗಳನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅನನ್ಯತೆಗಳು ಎಂದು ಪರಿಗಣಿಸಿ ಅಂಚೆ ಇಲಾಖೆಯು ಅವುಗಳಿಗೆ ವಿಶೇಷ ಅಂಚೆ ಲಕೋಟೆಯ ಗೌರವ ನೀಡಿದೆ. ಇದೇ ರೀತಿ ಅಡ್ಯಾರ್‌ ಪರಿಸರದಲ್ಲಿ ಕಂಡುಹಿಡಿಯಲಾದ ಹೊಸ ಪ್ರಭೇದ ಕಪ್ಪೆಗೂ ವಿಶೇಷ ಅಂಚೆ ಲಕೋಟೆಯ ಗೌರವ ನೀಡಲಾಗಿದೆ.

3 ವಿಶೇಷ ಅಂಚೆ ಲಕೋಟೆ ಬಿಡುಗಡೆ
ಪರಿಸರ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸುವುದಕ್ಕಾಗಿ ಕರಾವಳಿಯ ಅನನ್ಯತೆಗಳಾದ ಮಟ್ಟು ಗುಳ್ಳ, ಶಂಕರಪುರ ಮಲ್ಲಿಗೆ ಮತ್ತು “ಯುಪ್ಲಿಕ್ಟಿಸ್‌ ಅಲೋಸಿ’ ಎಂಬ ಪ್ರಭೇದದ ಕಪ್ಪೆಯ ಚಿತ್ರಗಳನ್ನು ಹೊಂದಿರುವ ವಿಶೇಷ ಅಂಚೆ ಲಕೋಟೆಗಳನ್ನು ಅನಾವರಣ ಮಾಡಲಾಯಿತು. ಶಿವಮೊಗ್ಗ ಜಿಲ್ಲೆ ಹುಂಚ ಅಂಚೆ ಕಚೇರಿಯ ಶಾಶ್ವತ ಚಿತ್ರ ಸಹಿತ ಅಂಚೆ ಮೊಹರನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಗೌರವ ಅತಿಥಿ, ಸಂತ ಅಲೋಶಿಯಸ್‌ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ನಿವೃತ್ತ ಪ್ರೊಫೆಸರ್‌ ಡಾ| ಹರೀಶ್‌ ಜೋಶಿ ಅವರು ತಾನು ಜಪಾನಿ ವಿಜ್ಞಾನಿಗಳ ಸಹಕಾರದಲ್ಲಿ ನಗರದ ಅಡ್ಯಾರ್‌ನಲ್ಲಿ ಕಂಡುಹಿಡಿದ ಹೊಸ ಪ್ರಬೇಧದ ಕಪ್ಪೆ ಯುಪ್ಲಿಕ್ಟಿಸ್‌ ಅಲೋಸಿ ಮತ್ತು ಪರಿಸರ ಸಂರಕ್ಷಣೆಯಲ್ಲಿ ಕಪ್ಪೆಗಳು ವಹಿಸುತ್ತಿರುವ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.