ಜೇವರ್ಗಿಯಲ್ಲಿ ಹೆಚ್ಚುತ್ತಿದೆ ಹಂದಿಗಳ ಉಪಟಳ


Team Udayavani, Oct 14, 2019, 11:08 AM IST

14-October-2

ವಿಜಯಕುಮಾರ ಎಸ್‌.ಕಲ್ಲಾ
ಜೇವರ್ಗಿ: ದಿನದಿಂದ ದಿನಕ್ಕೆ ಪಟ್ಟಣದಲ್ಲಿ ಹಂದಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರು ಕಂಗಾಲಾಗಿದ್ದು, ದ್ವಿಚಕ್ರವಾಹನ ಸವಾರರು ರಸ್ತೆಗಿಳಿಯಲು ಆತಂಕ ಪಡುತ್ತಿದ್ದಾರೆ.

ಪಟ್ಟಣದ ದತ್ತನಗರ, ಶಿಕ್ಷಕರ ಕಾಲೋನಿ, ಬಸವೇಶ್ವರ ನಗರ, ಶಾಸ್ತ್ರೀ ಚೌಕ್‌ ಬಡಾವಣೆ, ವಿದ್ಯಾನಗರ, ಖಾಜಾ ಕಾಲೋನಿ, ಜೋಪಡಪಟ್ಟಿ, ಲಕ್ಷ್ಮೀ ಚೌಕ್‌, ಜನತಾ ಕಾಲೋನಿ, ಅಖಂಡೇಶ್ವರ ನಗರ, ರಾಷ್ಟ್ರೀಯ ಹೆದ್ದಾರಿ ಮೇಲೆ ಹಂದಿಗಳ ಹಾವಳಿ ಹೆಚ್ಚಾಗಿದೆ.

ಈ ಬಗ್ಗೆ ಪುರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಹಂದಿಗಳು ರಸ್ತೆಗಳ ಮೇಲೆ ದಿಢೀರನೇ ಅಡ್ಡ ಬಂದಾಗ ಕಕ್ಕಾಬಿಕ್ಕಿ ಆಗುವ ವಾಹನ ಸವಾರರು ಅಪಘಾತಕ್ಕೆ ಒಳಗಾಗುತ್ತಿರುವುದು ಸಾಮಾನ್ಯವಾಗಿದೆ. ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಹಂದಿಗಳು ಮೃತಪಟ್ಟರೆ, ಮನುಷ್ಯರಿಗೆ ಆ ರೋಗ ಹರಡುವ ಭೀತಿ ಎದುರಾಗಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಸಾಕಾಣಿಕೆದಾರರಿಗೆ ಎಚ್ಚರಿಕೆ ನೀಡಬೇಕು.

ನಾಡ ಹಂದಿಗಳ ಮಾಂಸಕ್ಕೆ ಹೊರ ಜಿಲ್ಲೆ ಹಾಗೂ ಬೇರೆ ರಾಜ್ಯಗಳಲ್ಲಿ ಭಾರಿ ಬೇಡಿಕೆ ಇದೆ. ಒಂದು ಕೆ.ಜಿ ಮಾಂಸ 300 ರಿಂದ 350 ರೂ. ಗೆ ಮಾರಾಟವಾಗುತ್ತಿದೆ. ಕೆಲವರು ಇದನ್ನೇ ಉದ್ಯಮ ಮಾಡಿಕೊಂಡಿದ್ದಾರೆ.

ಗೋವಾದಲ್ಲಿ ಹಂದಿ ಮಾಂಸಕ್ಕೆ ಅಧಿಕ ಬೇಡಿಕೆ ಇದ್ದು, ಇಲ್ಲಿಯ ನಾಡ ಹಂದಿಗಳನ್ನು ರಫ್ತು ಮಾಡುವ ದೊಡ್ಡ ತಂಡವೇ ಇದೆ ಎನ್ನಲಾಗಿದೆ. ನಾಡ ಹಂದಿಗಳು ಕೊಳಚೆ ಪ್ರದೇಶದಲ್ಲಿಯೇ ಹೆಚ್ಚಾಗಿರುತ್ತವೆ. ಪುರಸಭೆ ಅನುಮತಿ ಪಡೆಯದೇ ಬೇಕಾಬಿಟ್ಟಿಯಾಗಿ ಹೊರಗಿನಿಂದ ಹಂದಿ ಮರಿಗಳನ್ನು ತಂದು, ಅವು ದಷ್ಟಪುಷ್ಟವಾದ ಮೇಲೆ ಪುನಃ ಹಿಡಿದುಕೊಂಡು ಹೋಗುತ್ತಾರೆ.

ಜನಸಾಮಾನ್ಯರಿಗೆ ತೊಂದರೆ ಆಗದಂತೆ ಹಂದಿ ಸಾಕಾಣಿಕೆ ಮಾಡಬೇಕು. ನಾಡಹಂದಿ ಸಾಕಾಣಿಕೆ ಮಾಡುವವರಿಗೆ ಪುರಸಭೆ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕು. ಪಟ್ಟಣದಲ್ಲಿರುವ ಸಾವಿರಾರು ಹಂದಿಗಳು ಪಟ್ಟಣದ ಅಂದ ಕೆಡಿಸುವುದಲ್ಲದೇ ಚರಂಡಿಗಳಲ್ಲಿ ಹೊರಳಾಡಿ ದುರ್ವಾಸನೆ ಎಬ್ಬಿಸುತ್ತಿವೆ. ಪಟ್ಟಣಕ್ಕೆ ಬಂದ ಅಪರಿಚಿತರು ಆಹಾರ ಪದಾರ್ಥಗಳನ್ನು ಬೈಕ್‌ ಸೈಡ್‌ಬ್ಯಾಗ್‌, ಸೈಕಲ್‌ಗ‌ಳಲ್ಲಿ ಇಟ್ಟು ಹೋದರೆ ಅವುಗಳನ್ನು ಹಂದಿಗಳು ಜಗ್ಗಿಕೊಂಡು ಹೋಗುತ್ತಿವೆ.

ಶಾಂತನಗರ ಬಡಾವಣೆಯಲ್ಲಿ ಇರುವ ಹಂದಿಗಳ ಮಾಲೀಕರಿಗೆ ಪುರಸಭೆ ಹಾಗೂ ಸಾರ್ವಜನಿಕರಿಂದ ಅನೇಕ ಬಾರಿ ಎಚ್ಚರಿಕೆ ನೀಡಲಾಗಿದ್ದರೂ ಪ್ರಯೋಜನವಾಗಿಲ್ಲ. ಸಾರ್ವಜನಿಕರು ತಾಳ್ಮೆ ಕಳೆದುಕೊಳ್ಳುವ ಮೊದಲೆ ಪುರಸಭೆ ಅಧಿಕಾರಿಗಳು ಹಂದಿ ಸಾಕಾಣಿಕೆದಾರರಿಗೆ ನೋಟಿಸ್‌ ನೀಡಬೇಕು. ಸ್ಪಂದಿಸದಿದ್ದರೆ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.