ಕೊನೆಗೂ ತುಂಬಿದ ಕೆರೆಗಳು: ರೈತರಲ್ಲಿಸಂತಸ

ಮಳೆಗೆ ಕೆರೆ-ಕಟ್ಟೆಗಳಿಗೆ ನೀರುಭಾರಿ ಗಾಳಿಗೆ ಬೆಳೆ ಹಾನಿಅಂತರ್ಜಲ ಮಟ್ಟ ಹೆಚ್ಚಳ ಸಾಧ್ಯತೆ

Team Udayavani, Oct 14, 2019, 11:24 AM IST

14-October-4

„ಶಶಿಧರ್‌ ಶೇಷಗಿರಿ
ಮಾಯಕೊಂಡ: ಸತತ 4-5 ವರ್ಷಗಳಿಂದ ಮಳೆಯಿಲ್ಲದೆ, ತೀವ್ರ ಅಂತರ್ಜಲ ಕುಸಿತದಿಂದ ನಲುಗಿ ಹೋಗಿದ್ದ ಮಾಯಕೊಂಡ ಮತ್ತು ಆನಗೋಡು ಹೋಬಳಿಯಲ್ಲಿ ಕಳೆದ ಸುಮಾರು ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳಿಗೆ ನೀರು ಹರಿದು ಬರುತ್ತಿದ್ದು, ರೈತರಲ್ಲಿ ಸಂತಸ ಮೂಡಿದೆ.

ಮಳೆಯೂ ಇಲ್ಲದೇ, ಬೋರ್‌ವೆಲ್‌ಗ‌ಳು ಬತ್ತಿಹೋಗಿ ಅಡಕೆ ತೋಟ ಉಳಿಸಿಕೊಳ್ಳಲು ಟ್ಯಾಂಕರ್‌ ನೀರು ಮೊರೆ ಹೋಗಿದ್ದ ರೈತರು ಕೆರೆ ಕಟ್ಟೆಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಹರ್ಷಗೊಂಡಿದ್ದಾರೆ.

ಮಾಯಕೊಂಡ ಹೋಬಳಿಯ ಕೊಡಗನೂರು ಕೆರೆ, ಮಾಯಕೊಂಡದ ಕೆಂಚಲಪ್ಪನ ಕೆರೆ, ಹೊಸಕೆರೆ, ಆನಗೋಡು ಹೋಬಳಿಯ ನರಗನಹಳ್ಳಿಯ ಕೆರೆ, ಅಲೂರು ಸಣ್ಣ ಕೆರೆ, ಅಣಜಿ ಕೆರೆ ಮತ್ತು ಇತರೆ ಚಿಕ್ಕಪುಟ್ಟ ಹೊಂಡಗಳಲ್ಲಿ ನೀರು ಶೇಖರಣೆಯಾಗುತ್ತಿದೆ.

ಕೆರೆಕಟ್ಟೆಗಳಲ್ಲಿ ನೀರು ಸಂಗ್ರಹವಾಗಿ ಅಂತರ್ಜಲ ಮಟ್ಟ ಹೆಚ್ಚಳವಾದರೆ ಹೋಬಳಿಯ ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ವಿಶ್ವಾಸ ಜನರದ್ದು.

2008ರಲ್ಲಿ ಸುಮಾರು 900 ಎಕರೆ ಪ್ರದೇಶದಲ್ಲಿ ಹರಡಿರುವ ಕೊಡಗನೂರು ಕೆರೆ ತುಂಬಿ ಕೋಡಿ ಒಡೆದಿದ್ದರೂ ಏರಿ ಕೆಳ ಭಾಗದಲ್ಲಿ ನೀರು ಹರಿದು ಹೋಗುತ್ತಿದ್ದುದರಿಂದ, ಏರಿ ಒಡೆದರೆ ದಾವಣಗೆರೆ ಮತ್ತು ಹೊಸದುರ್ಗ ಮಾರ್ಗದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ನೀರು ಹೊರಕ್ಕೆ ಬಿಟ್ಟು ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿತ್ತು. ಆ ನಂತರ ಈಗ ಮೊದಲ ಬಾರಿಗೆ ಕೆರೆಯಲ್ಲಿ ನೀರು ನಿಂತಿದೆ.

ಮಳೆ-ಗಾಳಿಯಿಂದಾಗಿ ಅಲ್ಲಲ್ಲಿ ಹಾನಿ ಕೂಡ ಸಂಭವಿಸಿದ್ದು, ಮೇಳೆಕಟ್ಟೆ ಗ್ರಾಮದಲ್ಲಿ ಸುಮಾರು 100 ಎಕರೆಗೂ ಹೆಚ್ಚು ಮೆಕ್ಕೆಜೋಳ ಬೆಳೆ ಬಿದ್ದು ಹೋಗಿದೆ. ಕೆರೆಗಳು ಬತ್ತಿದ ಸಂದರ್ಭದಲ್ಲಿ ಹೂಳು ತೆಗೆದು, ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿನ ಕಸ-ಕಳೆ ಸ್ವಚ್ಛಗೊಳಿಸಿದರೆ ನೀರು ಸರಾಗವಾಗಿ ಹರಿದು ಕೆರೆ ಸೇರಬಹುದು ಎನ್ನುತ್ತಾರೆ ರೈತರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.