ಮಗುವಿನ ಶವ ಹೂಳಲು ಹೋದ ತಂದೆಗೆ ಸಿಕ್ಕಿತು ಮತ್ತೊಂದು ಜೀವಂತ ಹೆಣ್ಣು ಮಗು!
Team Udayavani, Oct 14, 2019, 2:00 PM IST
ಉತ್ತರಪ್ರದೇಶ: ಅವಧಿಗೂ ಮುನ್ನ ಜನಿಸಿದ್ದ ನವಜಾತ ಹೆಣ್ಣು ಮಗು ಸಾವನ್ನಪ್ಪಿದ್ದ ಬಳಿಕ ಶವವನ್ನು ಹೂಳಲು ಹೋದ ತಂದೆಗೆ ಮಣ್ಣಿನ ಮಡಿಕೆಯೊಳಗೆ ಹೆಣ್ಣು ಮಗುವೊಂದು ಸಿಕ್ಕಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಹಿತೇಶ್ ಕುಮಾರ್ ಸಿರೋಹಿ ಎಂಬ ವ್ಯಾಪಾರಿಯ ಪತ್ನಿ ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಆದರೆ ಮಗು ಜನಿಸಿದ ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿತ್ತು. ಬಳಿಕ ಮಗುವಿನ ಶವವನ್ನು ಹೂತು ವಾಪಸ್ ಬರುವಾಗ ಸಮೀಪದಲ್ಲಿಯೇ ಸಣ್ಣ ಹೊಂಡ ತೋಡಿ ಇಟ್ಟಿದ್ದ ಮಣ್ಣಿನ ಮಡಕೆಯೊಂದು ಸಿಕ್ಕಿದ್ದು, ಅದನ್ನು ಹೊರ ತೆಗೆದು ನೋಡಿದಾಗ ಅದರೊಳಗೆ ಹೆಣ್ಣು ಮಗು ಇದ್ದಿರುವುದನ್ನು ಗಮನಿಸಿರುವುದಾಗಿ ಸಿರೋಹಿ ತಿಳಿಸಿದ್ದಾರೆ.
ಮಗು ಜೀವಂತವಾಗಿದ್ದು, ಉಸಿರಾಡುತ್ತಿತ್ತು. ಹಿತೇಶ್ ಕೂಡಲೇ ಹತ್ತಿಯಲ್ಲಿ ಹಾಲನ್ನು ಅದ್ದಿ ಮಗುವಿಗೆ ಉಣಿಸಿದ್ದರು. ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ವರದಿ ವಿವರಿಸಿದೆ. ಮಗು ಆರೋಗ್ಯವಾಗಿದ್ದು, ಮಗುವಿನ ತಾಯಿಯನ್ನು ಪತ್ತೆ ಹಚ್ಚಲು ಯತ್ನಿಸುತ್ತಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಸಿಂಗ್ ತಿಳಿಸಿದ್ದಾರೆ.
ಹಿತೇಶ್ ಕುಮಾರ್ ಪತ್ನಿ ವೈಶಾಲಿ ಬರೇಲಿಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಿರೋಹಿ ಪತ್ನಿ ವೈಶಾಲಿ ಅವಧಿಗೂ ಮುನ್ನ(7ತಿಂಗಳು)ವೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್