ಭರಮಸಾಗರದಲ್ಲಿ ರಸ್ತೆ ಬದಿಯೇ ಬಸ್‌ ನಿಲ್ದಾಣ!


Team Udayavani, Oct 14, 2019, 6:56 PM IST

14-October-23

ಭರಮಸಾಗರ: ಇಲ್ಲಿನ ಮುಖ್ಯ ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಕಳೆದ ಕೆಲ ವರ್ಷಗಳ ಹಿಂದೆ ಸುಮಾರು ಲಕ್ಷಗಳ ವೆಚ್ಚದಲ್ಲಿ ಕಟ್ಟಲಾಗಿದ್ದ ಖಾಸಗಿ ಬಸ್‌ ನಿಲ್ದಾಣ ಕಟ್ಟಡವನ್ನು ನೆಲಸಮ ಮಾಡಿದ್ದರಿಂದ ಬೇರೆ ಊರುಗಳಿಗೆ ಸಂಚರಿಸುವ ಪ್ರಯಾಣಿಕರು ಬಿಸಿಲು, ಗಾಳಿ, ಮಳೆ, ಧೂಳು ಎನ್ನದೆ ರಸ್ತೆಯಲ್ಲಿ ನಿಲ್ಲಬೇಕಾಗಿದೆ.

ಇಲ್ಲಿನ ಮುಖ್ಯ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರವೇ ನಿರ್ವಹಿಸುತ್ತಿತ್ತು. ಬಹಳಷ್ಟು ವರ್ಷಗಳ ಕಾಲ ಒಂದು ನಿಲ್ದಾಣವೇ ಇಲ್ಲದೆ ಜನರು ತೊಂದರೆಪಡುತ್ತಿದ್ದರು. ಸುಮಾರು 15 ವರ್ಷಗಳ ಹಿಂದೆ ಗ್ರಾಮದ ಮುಖ್ಯ ರಸ್ತೆ ಬೇರ್ಪಡಿಸಿ ಬೈಪಾಸ್‌ ರಸ್ತೆ ನಿರ್ಮಿಸಲಾಯಿತು.

ಬಳಿಕ ಬಹು ದಿನಗಳ ಜನರ ಬೇಡಿಕೆ ಹಿನ್ನೆಲೆಯಲ್ಲಿ ಕಳೆದ 5 ವರ್ಷಗಳ ಹಿಂದೆ ಎರಡು ವಾಣಿಜ್ಯ ಮಳಿಗೆ ಸೇರಿದಂತೆ ಜನರು ಕುಳಿತುಕೊಳ್ಳಲು ಅನುಕೂಲವಾಗುವ ರೀತಿ ಖಾಸಗಿ ಬಸ್‌ ನಿಲ್ದಾಣವನ್ನು ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಲ್ಲಿ ನಿರ್ಮಾಣ ಮಾಡಲಾಗಿತ್ತು.

ಇದೀಗ ಬೈಪಾಸ್‌ ಟು ಬೈಪಾಸ್‌ ಸಂಪರ್ಕಿಸುವ ಇಲ್ಲಿನ ಮುಖ್ಯ ರಸ್ತೆ ಅಭಿವೃದ್ಧಿಗಾಗಿ 100 ವರ್ಷಗಳ ಹಳೆಯದಾದ ಸುಮಾರು 30ಕ್ಕೂ ಹೆಚ್ಚು ಮರಗಳನ್ನು ಈಗಾಗಲೇ ಕಡಿಯಲಾಗಿದೆ. ಇದರಿಂದ ಮರಗಳ ನೆರಳಿನಡಿ ನಿಂತು ವಿಶ್ರಾಂತಿ ಪಡೆಯುತ್ತಿದ್ದ ದಾರಿ ಹೋಕರು ಮತ್ತು ಪ್ರಯಾಣಿಕರ ಅನುಕೂಲ ಕೂಡ ಕೈ ತಪ್ಪಿದೆ. ಈ ನಡುವೆ ರಸ್ತೆ ನಿರ್ಮಾಣಕ್ಕೆ ಅಡ್ಡಲಾದ ಕೆಲವೇ ವರ್ಷಗಳ ಹಿಂದೆ ಕಟ್ಟಲಾದ ಖಾಸಗಿ ಬಸ್‌ ನಿಲ್ದಾಣವನ್ನು ನೆಲಸಮ ಮಾಡಲಾಗಿದೆ. ಇದರಿಂದ ಚಿತ್ರದುರ್ಗ, ದಾವಣಗೆರೆ ಸೇರಿದಂತೆ ನಾನಾ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕಟ್ಟಡ ನೆಲಸಮ ಮಾಡಿದ ಸ್ಥಳದಲ್ಲಿ ನೆರಳಿಲ್ಲದೆ ಜನರು ಬಿಸಿಲು, ಗಾಳಿ, ಮಳೆ, ಧೂಳಿನ ಮಧ್ಯೆ ಬರುವ ಬಸ್‌ಗಳಿಗಾಗಿ ಕಾಯ್ದು ನಿಲ್ಲಬೇಕಾಗಿದೆ.

ನೆರಳು ಬೇಕೆಂದರೆ ಸುಮಾರು 200 ಮೀಟರ್‌ ದೂರದ ವಾಣಿಜ್ಯ ಮಳಿಗೆಗಳು ಇಲ್ಲವೆ ಬಂಕ್‌ ಗಳ ಬಳಿಗೆ ತೆರಳಬೇಕು. ವೃದ್ಧರು, ರೋಗಿಗಳು, ಮಹಿಳೆಯರು ಎನ್ನದೆ ಎಲ್ಲರೂ ನಿಂತಲ್ಲೆ ನಿಲ್ಲಬೇಕಾದ ಸಮಸ್ಯೆಯಿದೆ. ಇನ್ನೂ ಕುಡಿಯುವ ನೀರು, ಶೌಚಾಲಯ ಇತರೆ ಅನುಕೂಲಗಳನ್ನು ಈ ಸ್ಥಳದಲ್ಲಿ ಕೇಳಿದರೆ ತಪ್ಪಾಗುತ್ತದೆ. ನಿತ್ಯ 5-6 ಸಾವಿರ ಪ್ರಯಾಣಿಕರು ಇಲ್ಲಿನ ಬಸ್‌ ನಿಲ್ದಾಣದ ಸ್ಥಳಕ್ಕೆ ಬಂದು ಹೋಗುವುದರಿಂದ ಎಲ್ಲರಿಗೂ ಸಮಸ್ಯೆ ಉಂಟಾಗುತ್ತಿದೆ ಎನ್ನುತ್ತಾರೆ ಪ್ರಯಾಣಿಕ ಹನುಮಂತಪ್ಪ.

ಟಾಪ್ ನ್ಯೂಸ್

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

Modi Interview

24 ವರ್ಷ 101 ಬಾರಿ ಬೈಗುಳ: ವಿಪಕ್ಷಗಳ ಕುರಿತು ಪಿಎಂ ಮೋದಿ ಹೇಳಿದ್ದೇನು?

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

penPen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

Pen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

1-qweqweqw

Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್‌ ಜಾಮ್‌

ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು

ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು

ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು

Devarajegowda ಜಾಮೀನು ಅರ್ಜಿ ವಿಚಾರಣೆ ಇಂದು

Devarajegowda ಜಾಮೀನು ಅರ್ಜಿ ವಿಚಾರಣೆ ಇಂದು

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

Modi Interview

24 ವರ್ಷ 101 ಬಾರಿ ಬೈಗುಳ: ವಿಪಕ್ಷಗಳ ಕುರಿತು ಪಿಎಂ ಮೋದಿ ಹೇಳಿದ್ದೇನು?

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

penPen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

Pen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.