ಕಾಟಾಚಾರಕ್ಕೆ ಉಪಗ್ರಹ ಆಧಾರಿತ ತರಬೇತಿ


Team Udayavani, Oct 15, 2019, 3:00 AM IST

katacharakke

ಹುಣಸೂರು: ಸರ್ಕಾರದ ನಮ್ಮ ಗ್ರಾಮ ನಮ್ಮ ಯೋಜನೆಯ ಅನುಷ್ಠಾನ ಕುರಿತು ಮಿಶನ್‌ ಅಂತ್ಯೋದಯ ಯೋಜನೆಯಡಿ ಗ್ರಾಪಂ ಪ್ರತಿನಿಧಿಗಳಿಗೆ ಆಯೋಜಿಸಿರುವ ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮ ಟಿವಿ ಪರದೆಯಲ್ಲಿನ ಸಿನಿಮಾದಂತಾಗಿದ್ದು, ಕಾಟಾಚಾರಕ್ಕೆ ಎಂಬಂತೆ ನಡೆಸಲಾಗುತ್ತಿದೆ. ಸರ್ಕಾರದ ಹಣ ಲೂಟಿ ಮಾಡುವ ದಂಧೆಯಾಗಿದೆ.

ಹುಣಸೂರು ತಾಲೂಕಿನ ಗ್ರಾಪಂ ಚುನಾಯಿತ ಪ್ರತಿನಿಧಿಗಳಿಗೆ ಕಳೆದ ಒಂದು ವಾರದಿಂದ ಆಯೋಜನೆ ಮಾಡಿರುವ ತಾಲೂಕು ಆಡಳಿತ ಹಾಗೂ ಅಬ್ದುಲ್‌ ನಜೀರ್‌ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂಬಂತಿದೆ. ಇನ್ನು ಕೇವಲ ಮೂರು ತಿಂಗಳ ಅಧಿಕಾರಾವಧಿ ಮಾತ್ರ ಇದ್ದು, ಲಕ್ಷಾಂತರ ರೂ. ಹಣ ಖರ್ಚುಮಾಡಿ ಇಂತ ಅವೈಜ್ಞಾನಿಕ ತರಬೇತಿಗೆ ಮುಂದಾಗಿರುವುದು ಆಶ್ಚರ್ಯವೆನಿಸಿದೆ.

ಪ್ರತಿದಿನ ಎರಡು ತಂಡಗಳಾಗಿ ಮೂರ್‍ನಾಲ್ಕು ಗ್ರಾಪಂಗಳಿಂದ ಪ್ರತ್ಯೇಕವಾಗಿ ನೂರಕ್ಕೂ ಹೆಚ್ಚು ಮಂದಿ ಸದಸ್ಯರು ಭಾಗವಹಿಸಬೇಕಾದ ಈ ತರಬೇತಿಗೆ ಕೇವಲ ನಾಲೈದು ಮಂದಿ ಸದಸ್ಯರು ಮಾತ್ರ ಭಾಗವಹಿಸುತ್ತಿದ್ದಾರೆ. ಇದು ವ್ಯವಸ್ಥೆಯ ಧ್ಯೋತಕವೋ, ಅಧಿಕಾರಿಗಳ ನಿರ್ಲಕ್ಷ್ಯವೋ, ಅಸಡ್ಡೆಯೋ ತಿಳಿಯದಾಗಿದೆ. ತರಬೇತಿ ನಡೆಯುವ ಮಧ್ಯ ಎದ್ದು ಹೋಗುವುದು ಸಾಮಾನ್ಯವಾಗಿದ್ದು, ಕಾರ್ಯಕ್ರಮದ ಸಾರ್ಥಕತೆಯೇ ಇಲ್ಲದಂತಾಗಿದೆ.

ನಮ್ಮ ಗ್ರಾಮ ನಮ್ಮ ಯೋಜನೆ ಒಂದು ಸಮಗ್ರ ಅಭಿವೃದ್ಧಿಯ ಮುನ್ನೋಟವಾಗಿದ್ದು, ಚುನಾಯಿತ ಪ್ರತಿನಿಧಿಗಳ ಜತೆಗೆ ಗ್ರಾಪಂ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿವಿಧ ಇಲಾಖೆಯ ಅನುಷ್ಠಾನ ಅಧಿಕಾರಿಗಳಿಗೆ ತರಬೇತಿಯ ಉದ್ದೇಶ ಹಾಗೂ ತರಬೇತಿ ಪಡೆದ ನಂತರ ಕಾರ್ಯ ಕ್ಷೇತ್ರದಲ್ಲಿ ಮಾಡಬಹುದಾದ ಕಾರ್ಯಚಟುವಟಿಕೆಗಳನ್ನು ತಿಳಿಸಿಕೊಡುವ ಕೆಲಸ ಆಗಬೇಕಿದೆ. ಆದರೆ, ತರಬೇತಿಯನ್ನು ಆಯೋಜನೆ ಮಾಡಿ ಸರಿಯಾಗಿ ನಿರ್ವಹಿಸದೆ ಕೈ ತೊಳೆದುಕೊಂಡಿರುವ ಅಧಿಕಾರಿಗಳ ಬೇಜವಾಬ್ದಾರಿತನದ ಕಾರಣ ತರಬೇತಿ ಪ್ರಯೋಜನ ವಿಲ್ಲದಂತಾಗಿದೆ.

ಕಾಟಾಚಾರದ ತರಬೇತಿ: ಗ್ರಾಪಂ ಸದಸ್ಯರಾಗಿ ಆಯ್ಕೆಯಾದವರಿಗೆ ವಿವಿಧ ಅಭಿವೃದ್ಧಿ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ 11 ದಿನಗಳ ತರಬೇತಿ ನೀಡಲಾಗುತಿತ್ತು. ಪ್ರಸಕ್ತ ಸಾಲಿನಲ್ಲಿ ಆಯ್ಕೆಯಾದ ಸದಸ್ಯರುಗಳಿಗೆ ಅವಧಿ ಮುಗಿಯುತ್ತಾ ಬಂದರೂ, ಕೇವಲ ಕಾಟಾಚಾರಕ್ಕೆ 3 ದಿನಗಳ ತರಬೇತಿಯನ್ನು ಮಾತ್ರ ನೀಡಲಾಗಿದೆ. ಬಹಳ ವ್ಯವಸ್ಥಿತವಾದ ಷಂಡ್ಯತರದಿಂದ ಚುನಾಯಿತ ಪ್ರತಿನಿಧಿಗಳಿಗೆ ಮಾಹಿತಿ ನೀಡದೇ ಸಂಸ್ಥೆ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬುಡಮೇಲು ಮಾಡುವುದಕ್ಕೆ ಮುಂದಾಗಿರುವುದು ಈ ಯೋಜನೆಯಿಂದ ಸ್ಪಷ್ಟವಾಗಿದೆ.

ಆತುರದ ಏಕಮುಖ ತರಬೇತಿ: ಸಂಸ್ಥೆಗೆ ಬಂದಿರುವ ಹಣವನ್ನು ಖರ್ಚು ಮಾಡುವ ಆತುರದಲ್ಲಿ ಏಕಮುಖ ತರಬೇತಿಯನ್ನು ಸಂಸ್ಥೆಯ ಅಧಿಕಾರಿಗಳು ಹಮ್ಮಿಕೊಂಡಿರುವದಕ್ಕೆ ಪ್ರತಿನಿಧಿಗಳಿಂದ ಟೀಕೆ ವ್ಯಕ್ತವಾಗಿದೆ. ಉಪಗ್ರಹ ಆಧಾರಿತ ತರಬೇತಿಗೆ ಆಗಮಿಸುವ ಶಿಭಿರಾರ್ಥಿಗಳಿಗೆ ವಿಷಯದ ಕುರಿತು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಈ ಹಿಂದಿನ ತರಬೇತಿಗಳಲ್ಲಿ ಒಂದು ತಂಡಕ್ಕೆ 50 ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಲಾಗಿತ್ತು. ಆತುರದಲ್ಲಿ ತರಬೇತಿ ಮಾಡುವ ಉದ್ದೇಶದಿಂದ ಒಂದು ತಂಡಕ್ಕೆ 150 ಸದಸ್ಯರನ್ನು ಆಹ್ವಾನಿಸಿ ತರಬೇತಿ ನಡೆಸುವುದಕ್ಕೆ ಮುಂದಾಗಿರುವುದು ಯಾವ ಸಾರ್ಥಕತೆಗೆ ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಕಾಡುತ್ತಿದೆ.

ಚರ್ಚೆ-ಸಂವಾದಕ್ಕೂ ಅವಕಾಶವಿಲ್ಲ: ಎಲ್ಲೋ ಕುಳಿತುಕೊಂಡು ಅಧಿಕಾರಿಗಳು ನೀಡುವ ಮಾಹಿತಿಯನ್ನಷ್ಟೆ ತರಬೇತಿಯಲ್ಲಿ ಪಡೆದುಕೊಳ್ಳಬೇಕು, ಧ್ವನಿಯಲ್ಲಿ ಸ್ಪಷ್ಟತೆ ಇರುವುದಿಲ್ಲ ಮತ್ತು ಹಿಂದಿ ಬಾಷೆಯ ಕ್ಲಿಪ್ಪಿಂಗ್‌ಗಳನ್ನು ಬಳಸಲಾಗುತ್ತಿದೆ. ಕೆಲ ಸದಸ್ಯರಿಗೆ ಹಿಂದಿ ಬಾರದು, ಅರ್ಥವಾಗದಿದ್ದರೆ ಚರ್ಚೆ ಆಸ್ಪದವೆಲ್ಲಿ? ಸಂವಾದಕ್ಕೂ ಅವಕಾಶವಿಲ್ಲ, ಹೀಗಾಗಿ ಇದೊಂದು ವ್ಯರ್ಥ ತರಬೇತಿಯಾಗಿದೆ ಎನ್ನುತ್ತಾರೆ ಗ್ರಾಪಂ ಸದಸ್ಯರು.

ಈ ತರಬೇತಿಗೆ ಆಗಮಿಸುವ ಗ್ರಾಪಂ ಸದಸ್ಯರಿಗೆ ಕುಡಿವ ನೀರು, ಊಟದ ಸೌಲಭ್ಯವಿಲ್ಲ. ತರಬೇತಿ ನೀಡುವ ಸಾಮರ್ಥ್ಯ ಸೌಧದ ಶೌಚಾಲಯ ಅಶುಚಿಯಿಂದ ಕೂಡಿದೆ. ಇಂಥ ಅವ್ಯವಸ್ಥೆಗಳ ನಡುವೆ ಟಿವಿ ಪರದೆ ಮೇಲೆ ನೋಡಿ, ಹೇಳಿದ್ದನ್ನು ಕೇಳಿಕೊಂಡು ಹೋಗುವ ಪರಿಸ್ಥಿತಿ ಇದೆ. ಹೀಗೆ ಮುಂದುವರಿದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
-ಗ್ರಾಪಂ ಸದಸ್ಯರು

ಇದೊಂದು ಉಪಗ್ರಹ ಆಧಾರಿತ ರೆಕಾರ್ಡೆಡ್‌ ಕಾರ್ಯಕ್ರಮ. ತರಬೇತಿಯಲ್ಲಿ ಭಾಗವಹಿಸಲು ಮಾಹಿತಿ ನೀಡಲಾಗಿದ್ದರೂ ಸದಸ್ಯರು ಆಸಕ್ತಿ ತೋರುತ್ತಿಲ್ಲ. ಸೌಲಭ್ಯಗಳ ಕೊರತೆಯನ್ನು ಸರಿಪಡಿಸಲಾಗುವುದು.
-ಗಿರೀಶ್‌, ತಾಪಂ ಇಒ

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.