ದೀಪಾವಳಿ ಆಫ‌ರ್‌: ಪ್ಲಾಸ್ಟಿಕ್‌ ಕೊಡಿ ಆಕರ್ಷಕ ಬಹುಮಾನ ಗೆಲ್ಲಿ!


Team Udayavani, Oct 15, 2019, 3:07 AM IST

deepavali

ಚಾಮರಾಜನಗರ: ಗೃಹಿಣಿಯರೇ ನಿಮ್ಮ ಮನೆಯಲ್ಲಿರುವ ಪ್ಲಾಸ್ಟಿಕ್‌, ಚೀಲ, ಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್‌ ವಸ್ತುಗಳನ್ನು ನೀಡಿ, ಕಿವಿಗೆ ರಿಂಗ್‌, ಹೇರ್‌ ಬ್ಯಾಂಡ್‌, ಕ್ಲಿಪ್‌ ಇತ್ಯಾದಿ ಬಹುಮಾನವಾಗಿ ಪಡೆಯಿರಿ..! ಪ್ಲಾಸ್ಟಿಕ್‌ ನಿಷೇಧಕ್ಕೆ ಚಾಮರಾಜನಗರ ನಗರಸಭೆ ರೂಪಿಸಿರುವ ಆಕರ್ಷಕ ಕಾರ್ಯಕ್ರಮವಿದು. ಸ್ವತ್ಛತಾ ಹಿ ಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್‌ ಅನ್ನು ಮರಳಿಸುವಂತೆ ಪ್ರೋತ್ಸಾಹಿಸಲು ನಗರಸಭೆ ಪ್ಲಾಸ್ಟಿಕ್‌ ಸಂಗ್ರಹಣಾ ಮಹೋತ್ಸವ ಆಯೋಜಿಸಿದೆ.

ಬಳಸಿ ಬಿಸಾಡುವ ಪ್ಲಾಸ್ಟಿಕ್‌ ವಸ್ತುಗಳನ್ನು ನಿಗದಿತ ಸ್ಥಳದಲ್ಲಿ ಸ್ಥಾಪಿಸಿರುವ ಸಂಗ್ರಹಣಾ ಮಳಿಗೆಗೆ ತಂದರೆ ಮಹಿಳೆಯರಿಗೆ ಅವರು ಬಳಸುವ ಅಲಂಕಾರಿಕ ವಸ್ತುಗಳನ್ನು ಉಚಿತವಾಗಿ ನೀಡಲಾಗುತ್ತದೆ. ಪುಟ್ಟ ಪರ್ಸ್‌, ಹೇರ್‌ಬ್ಯಾಂಡ್‌, ಹೇರ್‌ ಕ್ಲಿಪ್‌, ಮೆಹಂದಿ, ರೋಲ್ಡ್‌ ಗೋಲ್ಡ್‌ (ಉಮಾಗೋಲ್ಡ್‌) ಉಳ್ಳ ಕಿವಿಯ ರಿಂಗ್‌, ಕಿವಿಯೋಲೆ, ಮೂಗುತಿ ಮತ್ತಿತರ ಬಹುಮಾನ ನೀಡಲಾಗುತ್ತದೆ. ಆದರೆ ಒಂದು ಷರತ್ತು ಕನಿಷ್ಠ 50 ಗ್ರಾಮ್‌ಗಿಂತ ಹೆಚ್ಚಿನ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಣಾ ಮಳಿಗೆಗೆ ನೀಡಬೇಕು.

ದೀಪಾವಳಿ ಬಹುಮಾನ!: ದಸರಾ, ದೀಪಾವಳಿ ಅಂಗವಾಗಿ ಕಂಪನಿಗಳು, ಅಂಗಡಿಗಳು, ಆನ್‌ಲೈನ್‌ ಮಾರಾಟಗಾರರು ಆಕರ್ಷಕ ಬಹುಮಾನ ಪ್ರಕಟಿಸುವುದು ಸಾಮಾನ್ಯ. ಆದರೆ, ಚಾಮರಾಜನಗರ ನಗರಸಭೆ, ಪ್ಲಾಸ್ಟಿಕ್‌ ಸಂಗ್ರಹಣಾ ಅಭಿಯಾನವನ್ನು ದಸರಾ ಮತ್ತು ದೀಪಾವಳಿ ಪ್ರಯುಕ್ತ ಎಂದು ಘೋಷಿಸುವ ಮೂಲಕ ಸಾರ್ವಜನಿಕರನ್ನು ಸೆಳೆಯುವ ಪ್ರಯತ್ನ ಮಾಡಿದೆ. ಈ ಮಾಸಾಂತ್ಯದ ಮೊದಲ ವಾರ ನಗರದ ಚಾಮರಾಜೇಶ್ವರ ದೇವಸ್ಥಾನದ ಬಳಿ ಪ್ಲಾಸ್ಟಿಕ್‌ ಸಂಗ್ರಹ ಮಳಿಗೆ ತೆರಯಲಾಗಿತ್ತು.

ಈ ವೇಳೆ ಅನೇಕ ಗೃಹಿಣಿಯರು ಪ್ಲಾಸ್ಟಿಕ್‌ ನೀಡಿ ಬಹುಮಾನ ಪಡೆದುಕೊಂಡರು. ಮಹಿಳೆಯರಿಗೇನೋ ಅಲಂಕಾರಿಕ ಸಾಮಗ್ರಿ ನೀಡಲಾಯಿತು. ಆದರೆ, ಪುರುಷರಿಗೇನು ಬಹುಮಾನ ನೀಡುವುದು? ಪುರುಷರು ತಿಂಡಿ ಪ್ರಿಯರು ಎಂದೇನೋ, ನಗರಸಭೆಯವರು ಪ್ಲಾಸ್ಟಿಕ್‌ ನೀಡಿದ ಪುರುಷರಿಗೆ ಇಡ್ಲಿ, ಟೀ, ಕಾಫಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದಲ್ಲದೇ, ಹಸಿರು ದಳ ಎಂಬ ಸ್ವಯಂ ಸೇವಾ ಸಂಸ್ಥೆ, ಪ್ಲಾಸ್ಟಿಕ್‌ ವಾಟರ್‌ ಬಾಟಲ್‌ ಸೇರಿ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ ಸಂಗ್ರಹಿಸಿ ನೀಡುವ ಪೌರಕಾರ್ಮಿಕರಿಗೆ ಪ್ರೋತ್ಸಾಹ ಧನ ನೀಡುತ್ತಿದೆ.

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.