ಇತಿಹಾಸದ ಅರಿವು ಅಗತ್ಯ : ವೀಣಾ ಶ್ರೀನಿವಾಸ್‌

"ಕರ್ನಾಪೆಕ್ಸ್‌'ನಲ್ಲಿ ಮತ್ತಷ್ಟು ವಿಶೇಷ ಅಂಚೆ ಲಕೋಟೆ ಬಿಡುಗಡೆ

Team Udayavani, Oct 15, 2019, 5:00 AM IST

l-56

"ಕರ್ನಾಪೆಕ್ಸ್‌'ನಲ್ಲಿ ಸೋಮವಾರ ವಿಶೇಷ ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡಲಾಯಿತು.

ಮಂಗಳೂರು: ಇತಿಹಾಸವನ್ನು ತಿಳಿದುಕೊಂಡಾಗ ಹೊಸ ಇತಿಹಾಸ ನಿರ್ಮಾಣ ಸಾಧ್ಯವಾಗುತ್ತದೆ. ನಮ್ಮ ಪರಂಪರೆ, ಸಂಸ್ಕೃತಿ, ಅನನ್ಯತೆಗಳು, ಮಹನೀಯರ ಬಗ್ಗೆ ಹೊಸ ಪೀಳಿಗೆಗೆ ಅರಿವು ನೀಡುವ ಕಾರ್ಯ ನಡೆಯಬೇಕು ಎಂದು ಪೋಸ್ಟ್‌ ಮಾಸ್ಟರ್‌ ಜನರಲ್‌ ವೀಣಾ ಶ್ರೀನಿವಾಸ್‌ ಹೇಳಿದರು.

ನಗರದ ಡಾ| ಟಿ.ಎಂ.ಎ. ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಹಾಲ್‌ನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ “ಕರ್ನಾಪೆಕ್ಸ್‌-2019’ನಲ್ಲಿ ಸೋಮವಾರ ವಿಶೇಷ ಅಂಚೆಲಕೋಟೆಗಳನ್ನು ಅವರು ಬಿಡುಗಡೆ ಮಾಡಿ ಮಾತನಾಡಿದರು. ಅಂಚೆ ಇಲಾಖೆ ವಿವಿಧ ಸಂದರ್ಭದಲ್ಲಿ ವಿಶೇಷ ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡುತ್ತಾ ಬಂದಿದೆ. ಕರಾವಳಿ ಮೂಲದ ಸಾಧಕರಾದ ಜಾರ್ಜ್‌ ಫೆರ್ನಾಂಡಿಸ್‌, ಅನಂತ್‌ ಪೈ, ಗಿರೀಶ್‌ ಕಾರ್ನಾಡ್‌, ಇಲ್ಲಿನ ಅನನ್ಯತೆಗಳಾದ ಮಟ್ಟು ಗುಳ್ಳ, ಶಂಕರಪುರ ಮಲ್ಲಿಗೆ, ಕರಾವಳಿಯಲ್ಲಿ ಪತ್ತೆಯಾಗಿರುವ ಹೊಸ ಪ್ರಭೇದದ ಕಪ್ಪೆ “ಯುಕ್ಲಿಪ್ಟಿಸ್‌ ಅಲೋಸಿ’ ಬಗ್ಗೆ ವಿಶೇಷ ಅಂಚೆ ಲಕೋಟೆ ಹೊರತಂದಿದೆ. ಇಂದು ರಾಷ್ಟ್ರಧ್ವಜ, ತುಳು ಸಿನೆಮಾ, ಸಿದ್ಧಿ ಜನಾಂಗದ ಬಗ್ಗೆ ವಿಶೇಷ ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ತುಳು ಚಲನಚಿತ್ರ ನಿರ್ದೇಶಕ, ನಿರ್ಮಾಪಕ ರಿಚರ್ಡ್‌ ಕ್ಯಾಸ್ತಲಿನೋ ಮಾತನಾಡಿ, ತುಳು ಸಿನೆಮಾ ರಂಗದ ಬಗ್ಗೆ ವಿಶೇಷ ಅಂಚೆ ಲಕೋಟೆ ಹೊರ ತಂದಿರುವುದು ಸಂತಸ ತಂದಿದೆ. 1971ರಲ್ಲಿ “ಎನ್ನ ತಂಗಡಿ’ ಮೂಲಕ ಆರಂಭಗೊಂಡ ತುಳು ಚಿತ್ರರಂಗ 49 ವರ್ಷಗಳಲ್ಲಿ ಸಾರ್ಥಕ ಪಯಣ ನಡೆಸಿದೆ ಎಂದರು.

ಕರ್ನಾಟಕ ಸಿದ್ಧಿ ಪ್ರತಿಷ್ಠಾನದ ಅಧ್ಯಕ್ಷ ದಿಯೋಗ್‌ ಬಿ. ಸಿದ್ಧಿ ಮಾತನಾಡಿ, ಕಾಡಿನಂಚಿನ ಸಿದ್ಧಿ ಸಮುದಾಯವನ್ನು ಗುರುತಿಸಿರುವುದಕ್ಕೆ ಭಾರತೀಯ ಅಂಚೆ ಇಲಾಖೆಗೆ ಆಭಾರಿಯಾಗಿದ್ದೇನೆ ಎಂದರು.

ಖಾದಿ ಕೇಂದ್ರ ಗರಗದ ಅಧ್ಯಕ್ಷ ಎಚ್‌. ಬಸವ ಪ್ರಭು ಮಾತನಾಡಿ, ಖಾದಿ ಬರೇ ಬಟ್ಟೆಯಲ್ಲ, ಒಂದು ಜೀವನ ಶೈಲಿ. ರಾಷ್ಟ್ರಧ್ವಜ ಸಿದ್ಧಪಡಿಸುವ ಮತ್ತು ಸರಬರಾಜು ಮಾಡುವ ಮನ್ನಣೆಗೆ ಗರಗ ಗ್ರಾಮ ಪಾತ್ರವಾಗಿದೆ ಎಂದರು. ಅಂಚೆ ಇಲಾಖೆ ದಕ್ಷಿಣ ಕರ್ನಾಟಕ ವೃತ್ತದ ಕೇಂದ್ರ ಕಚೇರಿಯ ನಿರ್ದೇಶಕ ಬಿ. ನಟರಾಜ್‌ ಉಪಸ್ಥಿತರಿದ್ದರು.

ಕರ್ನಾಪೆಕ್ಸ್‌ ಲಾಂಛನವನ್ನು ಸಿದ್ಧಪಡಿಸಿದ ಕಲಾವಿದ ದಿನೇಶ್‌ ಹೊಳ್ಳ ಅವರನ್ನು ಸಮ್ಮಾನಿಸಲಾಯಿತು. ಎಂ.ಬಿ. ಗಜಭಿಯಾ ಸ್ವಾಗತಿಸಿದರು. ಚಂದ್ರಶೇಖರ್‌ ವಂದಿಸಿದರು . ಸುರೇಖಾ ಕುಡ್ವ ನಿರೂಪಿಸಿದರು.

ಟಾಪ್ ನ್ಯೂಸ್

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

1-reaa

I.N.D.I.A. ಸಭೆ; ಜೂ.1ರಂದು ಫ‌ಲಿತಾಂಶ ಬಳಿಕದ ಕಾರ್ಯತಂತ್ರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

bಶಿಕ್ಷಣ ಕ್ಷೇತ್ರ ಹದಗೆಡಿಸಿದ ಕಾಂಗ್ರೆಸ್‌: ಬಿ.ವೈ. ವಿಜಯೇಂದ್ರ

ಶಿಕ್ಷಣ ಕ್ಷೇತ್ರ ಹದಗೆಡಿಸಿದ ಕಾಂಗ್ರೆಸ್‌: ಬಿ.ವೈ. ವಿಜಯೇಂದ್ರ

ISRO ವಿಜ್ಞಾನಿ ಕಾರ್ಯಕ್ರಮ: ಮೌಲ್ಯಾ ವೈ.ಆರ್‌. ಜೈನ್‌ ಭಾಗಿ

ISRO ವಿಜ್ಞಾನಿ ಕಾರ್ಯಕ್ರಮ: ಮೌಲ್ಯಾ ವೈ.ಆರ್‌. ಜೈನ್‌ ಭಾಗಿ

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.