ಕಲಬುರಗಿ: ಇಂದು ನಡೆಯಬೇಕಿದ್ದ ಕನ್ಹಯ್ಯ ಕುಮಾರ್ ಉಪನ್ಯಾಸ ರದ್ದು
Team Udayavani, Oct 15, 2019, 10:18 AM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂದು ನಡೆಯಬೇಕಿದ್ದ ಯುವ ಮುಖಂಡ ಕನ್ಹಯ್ಯ ಕುಮಾರ್ ಉಪನ್ಯಾಸ ರದ್ದು ಮಾಡಲಾಗಿದೆ.
ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ‘ಅಂಬೇಡ್ಕರ್ ಕಂಡ ಆಧುನಿಕ ಭಾರತದಲ್ಲಿ ಯುವಕರ ಪಾತ್ರ ಕುರಿತು ಕನ್ಹಯ್ಯ ಕುಮಾರ ಉಪನ್ಯಾಸ ನೀಡಬೇಕಿತ್ತು.
ಕನ್ಹಯ್ಯ ಉಪನ್ಯಾಸಕ್ಕೆ ಶ್ರೀರಾಮಸೇನೆ ಮತ್ತು ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ನಿನ್ನೆ ಹಂಗಾಮಿ ಕುಲಪತಿ ಪ್ರೊ.ಪರಿಮಳಾ ಅಂಬೇಕರ್ ಸಿಡಿಂಕೇಟ್ ಸಭೆ ನಡೆಸಿ, ಕನ್ಹಯ್ಯ ವಿಷಯದ ಬಗ್ಗೆ ಮಾತ್ರವೇ ಮಾತನಾಡಬೇಂದು ಹೇಳಿ ಅನುಮತಿ ನೀಡಿದ್ದರು.
ಆದರೆ, ಕನ್ಹಯ್ಯ ಉಪನ್ಯಾಸ ವಿಷಯ ರಾಜ್ಯಪಾಲರಿಗೆ ಮುಟ್ಟಿದ್ದು, ಕಾರ್ಯಕ್ರಮ ರದ್ದು ಪಡಿಸುವಂತೆ ಕುಲಪತಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು