ಟೋಲ್‌ ಸಂಗ್ರಹಕ್ಕೆ ತೀವ್ರ ವಿರೋಧ

ಅಹವಾಲು ಸ್ವೀಕರಿಸಿ ಸರ್ಕಾರಕ್ಕೆ ವರದಿ

Team Udayavani, Oct 15, 2019, 12:22 PM IST

bg-tdy-2

ಚಿಕ್ಕೋಡಿ: ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಚಿಕ್ಕೋಡಿ ತಾಲೂಕಿನ ಕಬ್ಬೂರ ಮತ್ತು ಚಿಂಚಣಿ ಬಳಿ ಟೋಲ್‌ ಸಂಗ್ರಹಕ್ಕೆ ಕಬ್ಬೂರ ನಾಗರಿಕರು ಭಾರಿ ವಿರೋಧ ವ್ಯಕ್ತಪಡಿಸಿ ಟೋಲ್‌ ಸಂಗ್ರಹ ಘಟಕಗಳನ್ನು ತೆರವುಗೊಳಿಸಬೇಕೆಂದು ನೂರಾರು ಸಾರ್ವಜನಿಕರು ಒಕ್ಕೊರಲಿನಿಂದ ಆಗ್ರಹಿಸಿದರು.

ನಿಪ್ಪಾಣಿ-ಮುಧೊಳ ರಾಜ್ಯ ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ನಿಲ್ಲಿಸಬೇಕೆಂದು ಭಾರಿ ವಿರೋಧ ವ್ಯಕ್ತವಾದಾಗ ಜಿಲ್ಲಾಧಿಕಾರಿ ಆದೇಶನ್ವಯ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ, ತಹಶೀಲ್ದಾರ್‌ ಡಾ| ಸಂತೋಷ ಬಿರಾದಾರ ಮತ್ತು ಎಎಸ್‌ಪಿ ಮಿಥುನಕುಮಾರ ನೇತೃತ್ವದಲ್ಲಿ ಕಬ್ಬೂರ ಪಟ್ಟಣದಲ್ಲಿ ಸೋಮವಾರ ನಡೆದ ಸಾರ್ವಜನಿಕ ಸಭೆ ಮತ್ತು ನಾಗರಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಕಬ್ಬೂರ ಮತ್ತು ಸುತ್ತಮುತ್ತಲಿನ ನಾಗರಿಕರು ಒಕ್ಕೊರಲಿನಿಂದ ಟೋಲ್‌ ಸಂಗ್ರಹ ಮಾಡಬಾರದು ಮತ್ತು ಟೋಲ್‌ ಸಂಗ್ರಹ ಕೇಂದ್ರಗಳನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿದರು.

ಕಬ್ಬೂರಿನ ಧುರೀಣ ಸುರೇಶ ಬೆಲ್ಲದ ಮಾತನಾಡಿ, ಚಿಕ್ಕೋಡಿ ಮಾರ್ಗ ಮಧ್ಯದಲ್ಲಿ ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿ ಇದೆ. ಇಚಲಕರಂಜಿ-ಹುಕ್ಕೇರಿ ರಾಜ್ಯ ಹೆದ್ದಾರಿ ಇದೆ. ಕೊಟ್ಟಲಗಿ ನಿಪ್ಪಾಣಿ ರಾಜ್ಯ ಹೆದ್ದಾರಿ ಇದೆ. ಆದರೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಗೆ ಮಾತ್ರ ಟೋಲ್‌ ಸಂಗ್ರಹ ಯಾಕೆ ಎಂದು ಪ್ರಶ್ನಿಸಿದರು. ಟೋಲ್‌ ಸಂಗ್ರಹ ಬೇಡವೇ ಬೇಡ ಎಂದು ಕಬ್ಬೂರ, ಜಾಗನೂರ, ನಾಗರಮುನ್ನೋಳ್ಳಿ, ಉಮರಾಣಿ ಮುಂತಾದ ಗ್ರಾಮಗಳಿಂದ ಠರಾವು ಪಾಸು ಮಾಡಿಕೊಡಲಾಗುತ್ತದೆ. ಕೂಡಲೇ ಟೋಲ್‌ ಸಂಗ್ರಹ ಘಟಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ನ್ಯಾಯವಾದಿ ಸುಧಾಕರ ಪಾಟೀಲ ಮಾತನಾಡಿ,

ಕಬ್ಬೂರ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರತಿನಿತ್ಯ ರೈತರು ತಮ್ಮ ಹೊಲಗಳಿಗೆ ಹೋಗುತ್ತಾರೆ. ಇಂಥವರು ಪ್ರತಿದಿನ ಟೋಲ್‌ ಹೇಗೆ ಕಟ್ಟಬೇಕು. ಸರ್ಕಾರ ಟೋಲ್‌ ಸಂಗ್ರಹ ಮಾಡುವ ನಿರ್ಧಾರ ಕೈಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡ ದುಂಡಪ್ಪ ಬೆಂಡವಾಡೆ ಮಾತನಾಡಿ, ಕಳೆದ ಐದಾರು ವರ್ಷಗಳಿಂದ ಸತತ ಬರಗಾಲದಿಂದ ಜನ ತತ್ತರಿಸಿದ್ದಾರೆ. ಈ ವರ್ಷ ಸ್ವಲ್ಪ ಮಳೆ ಆಗಿದೆ. ರೈತರು ಚೇತರಿಸಿಕೊಳ್ಳುವಾಗ ರಸ್ತೆಗೆ ಟೋಲ್‌ ಹಾಕಿ ಮತ್ತೆ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡಬಾರದು. ಅದು ಒಂದೇ ತಾಲೂಕಿನಲ್ಲಿ 25 ಕಿ.ಮೀ. ವ್ಯಾಪ್ತಿಯ ಒಳಗಡೆ ಎರಡು ಟೋಲ್‌ ಸಂಗ್ರಹ ಮಾಡುವ ನಿರ್ಧಾರ ಹಿಂತೆಗೆದುಕೊಂಡು ಸಾವಿರಾರು ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.ಮಹಾದೇವ ಬಾನೆ, ಲಗಮ್ಮಣ್ಣಾ ಪೂಜೇರಿ, ಮಹಾಂತೇಶ ಕಾಡೇಶಗೋಳ, ಚಂದ್ರಶೇಖರ ಮುಂತಾದವರು ಮಾತನಾಡಿ, ಟೋಲ್‌ ಸಂಗ್ರಹ ನಿರ್ಧಾರವನ್ನು ವಿರೋಧಿಸಿದರು.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳು ಮತ್ತು ಸಾರ್ವಜನಿಕರ ಮಧ್ಯೆ ಮಾತಿಗೆ ಮಾತು ಬೆಳೆದಾಗ ಮಧ್ಯ ಪ್ರವೇಶಿಸಿದ ತಹಶೀಲ್ದಾರ್‌ ಸಂತೋಷ ಬಿರಾದಾರ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸರ್ಕಾರಕ್ಕೆ ವರದಿ ನೀಡಲಾಗುತ್ತದೆ. ಸಾರ್ವಜನಿಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳಬೇಕೆಂದು ಮನವಿ ಮಾಡಿದಾಗ ಸಾರ್ವಜನಿಕರು ಶಾಂತರಾದರು.

ಅಧ್ಯಕ್ಷತೆ ವಹಿಸಿದ್ದ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮಾತನಾಡಿ, ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಗೆ ಕಬ್ಬೂರ ಮತ್ತು ಚಿಂಚಣಿ ಬಳಿ ಅಳವಡಿಸಿರುವ ಟೋಲ್‌ ಸಂಗ್ರಹ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಲಾಗುತ್ತದೆ. ಟೋಲ್‌ ಸಂಗ್ರಹ ಮಾಡುವ ಕುರಿತು ಸರ್ಕಾರದ ಮಟ್ಟದಲ್ಲಿ ಅಂತಿಮ ನಿರ್ಧಾರವಾಗುತ್ತದೆ. ಜನರ ಅಭಿಪ್ರಾಯದ ಮಾಹಿತಿಯನ್ನು ಸರ್ಕಾರಕ್ಕೆ ಕಳಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಎಎಸ್‌ಪಿ ಮಿಥುನಕುಮಾರ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.