ನಿಡಶೇಸಿ ಕೆರೆಯಲ್ಲಿ ಬಾನಾಡಿಗಳ ಕಲರವ


Team Udayavani, Oct 15, 2019, 2:19 PM IST

kopala-tdy-2

ಕುಷ್ಟಗಿ: ತಾಲೂಕಿನ ನಿಡಶೇಸಿ ಕೆರೆ ಭರ್ತಿಯಾಗಿದ್ದು, ಬಾನಾಡಿಗಳ ಆಶ್ರಯ ತಾಣವಾಗುತ್ತಿದೆ. ಕೆರೆಯಲ್ಲಿ ಈಗ ಬಾನಾಡಿಗಳ ಚಿಲಿಪಿಲಿ ಕೇಳಿ ಬರುತ್ತಿದ್ದು, ಪಕ್ಷಿ ಪ್ರಿಯರನ್ನು ಸಂತಸಗೊಳಿಸಿದೆ. ಪಕ್ಷಿಗಳ ಸಂಖ್ಯೆ ಹೆಚ್ಚುತ್ತಿದ್ದು, ಕೆರೆಯಂಗಳದಲ್ಲಿ ಪಕ್ಷಿಗಳಿಗಾಗಿಯೇ ನಿರ್ಮಿಸಿದ ನಡುಗಡ್ಡೆಗಳಲ್ಲಿ ಅವು ಆಶ್ರಯ ಪಡೆದಿವೆ.

ಪಕ್ಷಿಗಳ ಸಂತಾನಾಭಿವೃದ್ಧಿಗೆ ಪ್ರಸಕ್ತ ಸ್ಥಳವೆನಿಸಿದ ಈ ಕೆರೆಗೆ ಚುಕ್ಕೆ ಬಾತು, ಬಣ್ಣದ ಕೊಕ್ಕರೆ, ಬೆಳ್ಳಕ್ಕಿ, ಬಿಳಿ, ಕರಿ ಬಣ್ಣದ ಕೆಂಬರಲ್ಲು ಬೂದುಬಕ, ಹುಲ್ಲಂಕಿ, ಗುಳ ಮುಳಕ, ಮೆಟ್ಟಗಾಲು ಹಕ್ಕಿ, ಟಿಟ್ಟಿಬಾ ಮೊದಲಾದ ಪಕ್ಷಿಗಳು ಕಂಡು ಬಂದಿವೆ. ಕೆರೆ ಸುತ್ತಲೂ ಗಿಡಗಳಿಲ್ಲದೇ ಇರುವುದರಿಂದ ಪಕ್ಷಿಗಳು ಬಹುತೇಕ ಸಮಯವನ್ನು ಕೆರೆ ನಡುಗಡ್ಡೆಗಳಲ್ಲಿ ಕಳೆಯುತ್ತಿವೆ. ಕೆಲ ಪಕ್ಷಿಗಳು ತೋಟ  ಪಟ್ಟಿಗಳಲ್ಲಿರುವ ಗಿಡಗಳನ್ನೇ ಆಶ್ರಯಿಸುತ್ತಿವೆ.

ಕಂಗೊಳಿಸುತ್ತಿದೆ ಕೆರೆ: ನಿಡಶೇಸಿ ಕೆರೆ 320 ಎಕರೆ ವಿಸ್ತೀರ್ಣ ಹೊಂದಿದ್ದು, ಈ ಬಾರಿ ಸುರಿದ ಮಳೆಗೆ 250 ಎಕರೆ ಪ್ರದೇಶದಲ್ಲಿ ನೀರು ಆವರಿಸಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಂಡ ಈ ಕೆರೆ ಸುತ್ತಮುತ್ತ ತೋಟಪಟ್ಟಿಗಳು ಹಸಿರಿನಿಂದ ಕಂಗೊಳಿಸುತ್ತಿದ್ದು, ಅಂತರ್ಜಲವೂ ವೃದ್ಧಿಸಿದೆ. ಎರಡು ವರ್ಷಗಳಿಂದ ಬತ್ತಿದ್ದ ಕೆರೆಯತ್ತ ಪ್ರಾಣಿ-ಪಕ್ಷಿಗಳು ಮುಖ ಮಾಡಿರಲಿಲ್ಲ. ಹೀಗಾಗಿ ಅಲ್ಲಲ್ಲಿ ನೀರಿನ ಅರವಟ್ಟಿಗೆ ಇಡಲಾಗಿತ್ತು. ಆದರೀಗ ಕೆರೆ ಭರ್ತಿಯಾಗಿ ಸಂತಸ ಇಮ್ಮಡಿಗೊಳಿಸಿದೆ.

ಸತತ ಬರದಿಂದ ನಿಡಶೇಸಿ ಕೆರೆ ಬತ್ತಿದ್ದರಿಂದ ದೇಶ, ವಿದೇಶದ ಹಕ್ಕಿಗಳು ಬರಲಿಲ್ಲ. ಇದೀಗ ಕೆರೆಗೆ ಭರಪೂರ ನೀರು ಬಂದಿದ್ದು, ಸದ್ಯ ದೇಶಿ ಹಕ್ಕಿಗಳನ್ನು ಮಾತ್ರ ಕಾಣಬಹುದಾಗಿದೆ. ನವೆಂಬರ್‌, ಡಿಸೆಂಬರ್‌ ವೇಳೆ ಚಳಿ ಹೆಚ್ಚಾಗುವ ಹಿನ್ನೆಲೆಯಲ್ಲಿ ವಿದೇಶಿ ಹಕ್ಕಿಗಳ ಆಗಮನ ನಿರೀಕ್ಷೆ ಇದೆ. ಕೆರೆ ಅಭಿವೃದ್ಧಿ ಸಂದರ್ಭದಲ್ಲಿ ಕೆರೆ ದಡದಲ್ಲಿದ್ದ ಗಿಡಗಳನ್ನು ತೆರವುಗೊಳಿಸಲಾಗಿದ್ದು, ಸದ್ಯ ಪಕ್ಷಿಗಳು ಕೂರಲು ಗಿಡಗಳ ವ್ಯವಸ್ಥೆ ಇಲ್ಲ. ಅರಣ್ಯ ಇಲಾಖೆ ಈ ಪ್ರದೇಶದಲ್ಲಿ ಬೇಗ ಬೆಳೆಯುವ ಗಿಡ, ಪೊದೆ ಸಸ್ಯಗಳನ್ನು ನೆಡುವುದರಿಂದ ಪಕ್ಷಿಗಳ ವಿಶ್ರಾಂತಿ-ಗೂಡು ಕಟ್ಟಲು ಸಹಕಾರಿಯಾಗಲಿದೆ. ಅಮರೇಗೌಡ ಪಾಟೀಲ ಜಾಲಿಹಾಳ, ಪಕ್ಷಿತಜ್ಞ

 

-ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.