ನಾಳೆಯಿಂದ ಹಾಸನಾಂಬೆಯ ದರ್ಶನ ಆರಂಭ


Team Udayavani, Oct 16, 2019, 3:00 AM IST

hasanambe

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿ ದೇವತೆ ಹಾಸನಾಂಬೆಯ ದರ್ಶನ ಅ.17ರಿಂದ ಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರು ದೇವಿಯ ದರ್ಶನಕ್ಕೆ ಹಾಸನ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡುತ್ತಿದೆ. ಆದರೆ ಜಾತ್ರಾ ಮಹೋತ್ಸವದ ಸಿದ್ಧತೆಗೆ ಮಳೆ ಅಡಚಣೆಯಾಗಿದ್ದು, ಅರೆ, ಬರೆ ಸಿದ್ಧತೆಯ ನಡುವೆಯೇ ಗುರುವಾರದಿಂದ ಹಾಸನಾಂಬಾ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದೆ.

ಕಳೆದ ಒಂದು ತಿಂಗಳನಿಂದಲೂ ಹಾಸನ ಜಿಲ್ಲಾಡಳಿತವು ಹಾಸನಾಂಬಾ ಜಾತ್ರಾ ಮಹೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದು, ವಿವಿಧ ಇಲಾಖೆಗಳಿಗೆ ಮೂಲ ಸೌಕರ್ಯದ ಹೊಣೆಯನ್ನು ವಹಿಸಿದೆ. ದೇವಾಲಯದ ಆವರಣದಲ್ಲಿ ಸ್ವಚ್ಛತೆ, ದೇವಾಲಯದ ಸುತ್ತಮುತ್ತ ಸ್ವಚ್ಛತೆ, ದೇವಾಲಯಕ್ಕೆ ಬಣ್ಣ ಬಳಿಯುವುದು, ಭಕ್ತರು ಸುಗಮವಾಗಿ ದೇವಿಯ ದರ್ಶನ ಪಡೆಯಲು ಸರದಿಯ ಸಾಲುಗಳ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರು ಮತ್ತಿತರ ವ್ಯವಸ್ಥೆ, ವಿದ್ಯುದ್ಧೀಪದ ಅಲಂಕಾರವನ್ನು ಜಿಲ್ಲಾಡಳಿತವು ಮಾಡಿದೆ. ಆದರೆ ರಸ್ತೆಗಳ ಗುಂಡಿ ಮುಚ್ಚುವ ‌ಸ್ವಚ್ಛತೆಯ ಕೆಲಸ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ.

ರಸ್ತೆ ಅಭಿವೃದ್ಧಿಗೆ ಮಳೆ ಅಡ್ಡಿ: ದೇವಾಲಯದ ಹಿಂಭಾಗದ ಹೊಸಲೈನ್‌ ರಸ್ತೆ ಡಾಂಬರೀಕರಣ ನಡೆಯುತ್ತಿದ್ದು, ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಪ್ರತಿದಿನವೂ ಮಳೆ ಬರುತ್ತಿರುವುದರಿಂದ ಡಾಂಬರೀಕರಣ ಮಾಡಲು ಸಾಧ್ಯವಾಗುತ್ತಿಲ್ಲ. ಆದರೂ ಸಂತೆಪೇಟೆ ಪಾಯಣ್ಣ ಸರ್ಕಲ್‌ನಿಂದ ಹಳೆ ಮಟನ್‌ ಮಾರ್ಕೆಟ್‌ ರಸ್ತೆ ವರೆಗೆ ಮಾತ್ರ ಡಾಂಬರೀಕರಣ ನಡೆದಿದೆ. ಅಲ್ಲಿಂದ ಸಾಲಗಾಮೆ ರಸ್ತೆ ವರೆಗೂ ರಸ್ತೆ ದುರಸ್ತಿ ಆರಂಭವಾಗಿಯೇ ಇಲ್ಲ. ಜಾತ್ರಾ ಮಹೋತ್ಸವದ ವೇಳೆಗೆ ಸರಸ್ವತಿಪುರಂ ಸರ್ಕಲ್‌ನಿಂದ ವರ್ತುಲ ರಸ್ತೆವರೆಗೆ ಸಾಲಗಾಮೆ ರಸ್ತೆಯ ಚತುಷ್ಪಥ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದರೂ ಆ ರಸ್ತೆ ಕಾಮಗಾರಿ ಜಾತ್ರೆ ಮುಗಿದರೂ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ದೇವಾಲಯದ ಸುತ್ತಮುತ್ತ ಒಎಫ್ಸಿ ಕೇಬಲ್‌ ಅಳವಡಿಕೆಗೆ ಅಗೆದಿರುವ ರಸ್ತೆ ದುರಸ್ತಿ ಕೆಲಸ ಇನ್ನೂ ಮುಗಿದಿಲ್ಲ. ಆದರೆ ಎನ್‌.ಆರ್‌.ವೃತ್ತದಿಂದ ತಣ್ಣೀರುಹಳ್ಳದವರೆಗೆ ಬಿ.ಎಂ.ರಸ್ತೆಯನ್ನು ಕಾಂಕ್ರೀಟ್‌ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸಂತೆಪೇಟೆ ಪಾಯಣ್ಣ ಸರ್ಕಲ್‌ ಹೊರತುಪಡಿಸಿ ಉಳಿದಂತೆ ಕಾಂಕ್ರೀಟ್‌ ರಸ್ತೆ ನಿರ್ಮಾಣದ ಕಾಮಗಾರಿ ಪೂರ್ಣಗೊಂಡದ್ದು ಸಮಾಧಾನದ ಸಂಗತಿ.

ಪೌರಕಾರ್ಮಿಕರ ವಿಶೇಷ ತಂಡ ರಚನೆ: ಸ್ವಚ್ಛತೆಯ ಜವಾಬ್ದಾರಿಯನ್ನು ನಿರ್ವಹಿಸಬೇಕಾದ ಹಾಸನ ನಗರಸಭೆ ಪ್ರಮುಖ ರಸ್ತೆಗಳಲ್ಲಿ ವಿಶೇಷವಾಗಿ ಬಿ.ಎಂ.ರಸ್ತೆಯಲ್ಲಿ ಡೇರಿ ಸರ್ಕಲ್‌ನಿಂದ ಎನ್‌.ಆರ್‌.ವೃತ್ತದವರೆಗೂ ಸ್ವಚ್ಛಗೊಳಿಸಿದೆ. ದೇವಾಲಯದ ಪರಿಸರದಲ್ಲಿ ಸ್ವಚ್ಛತೆಯ ಕೆಲಸ ಭರದಿಂದ ನಡೆಯುತ್ತಿದ್ದು, ಅದಕ್ಕಾಗಿ ಕಾರ್ಮಿಕರ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.

ಜಿಲ್ಲಾಡಳಿತವು ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ ಆರಂಭಿಸಿದರೂ ಮಳೆ ಅಡ್ಡಿಯಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಸಿದ್ಧತೆಯಾಗದೆ ಅರೆ,ಬರೆ ಸಿದ್ಧತೆಯ ನಡುವೆಯೇ ಹಾಸನಾಂಬಾ ಜಾತ್ರಾ ಮಹೋತ್ಸವವು ಆರಂಭವಾಗುತ್ತಿದೆ. ಒಟ್ಟು 13 ದಿನ ನಡೆಯುವ ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೂ ಮಳೆ ಕಾಡುವ ಆತಂಕವಿದ್ದು, ಭಕ್ತರ ಸರದಿಯ ಸಾಲಿನುದ್ದಕ್ಕೂ ವಾಟರ್‌ ಪ್ರೂಫ್ ಮೇಲ್ಛಾವಣಿ ಅಳವಡಿಸಲಾಗುತ್ತಿದೆ.

ಶ್ರೀ ಹಾಸನಾಂಬೆಯ ಮಹಿಮೆ: ಶ್ರೀ ಹಾಸನಾಂಬ ದೇವಿಯ ಬಗ್ಗೆ ಪುರಾಣದ ಕತೆಗಳು ಮತ್ತು ಐತಿಹಾಸಿಕದ ಹಲವು ದಾಖಲೆಗಳಿವೆ. ಶ್ರೀ ಹಾಸನಾಂಬೆಯು ಭಕ್ತರ ಬೇಡಿಕೆಗಳನ್ನು ಈಡೇರಿಸುವ, ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸಿ ಸಂತಸ, ನೆಮ್ಮದಿ ಸಮೃದ್ಧಿ ನೀಡುವ ಶಕ್ತಿ ದೇವತೆ ಎಂಬ ನಂಬಿಕೆಯ ಹಿನ್ನಲೆಯಲ್ಲಿ ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನದ ಭಾಗ್ಯವಿರುವ ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹಾಗಾಗಿ ದೇವಿಯ ದರ್ಶನದ ಎರಡು ವಾರಗಳಲ್ಲಿ ಕೋಟ್ಯಂತರ ರೂ. ಕಾಣಿಕೆಯೂ ದೇವಾಲಯಕ್ಕೆ ಸಂಗ್ರಹವಾಗಲಿದೆ.

ಪ್ರತಿ ವರ್ಷ ಅಶ್ವಯುಜ ಮಾಸದ ಪೂರ್ಣಿಮೆಯ ನಂತರದ ಗುರುವಾರ ಹಾಸನಾಂಬಾ ದೇಗುಲದ ಬಾಗಿಲು ತೆರೆದು, ಬಲಿಪಾಡ್ಯಮಿಯ (ದೀಪಾವಳಿ ಹಬ್ಬ) ಮರುದಿನ ದೇವಾಲಯದ ಬಾಗಿಲು ಮುಚ್ಚುವ ಸಂಪ್ರದಾಯ ನಡೆದುಕೊಂಡು ಬಂದಿದೆ. ದೇವಿಯ ಗರ್ಭಗುಡಿಯಲ್ಲಿ ಹುತ್ತದ ಮಾದರಿಯಲ್ಲಿರುವ ಮೂರು ಗದ್ದುಗೆಗಳಿವೆ. ಸಪ್ತ ಮಾತೃಕೆಯರ ಪೈಕಿ ವೈಷ್ಣವಿ, ಮಹೇಶ್ವರಿ, ಕೌಮಾರಿಯರೇ ಆ ಮೂರು ಹುತ್ತದ ರೂಪಗಳು ಎಂಬ ನಂಬಿಕೆಯಿದೆ. ಗದ್ದುಗೆಗಳ ರೂಪದ ದೇವಿಯ ದರ್ಶನ ವರ್ಷಕ್ಕೊಮ್ಮೆ ಮಾತ್ರ. ಹಾಗಾಗಿ ರಾಜ್ಯದ ವಿವಿಧೆಡೆಯಿಂದ ಹಾಗೂ ಹೊರ ರಾಜ್ಯದಿಂದಲೂ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥನೆ ಮಾಡುತ್ತಾರೆ.

ಸಪ್ತ ಮಾತೃಕೆಯರಾದ ಬ್ರಾಹ್ಮಿದೇವಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ, ಚಾಮುಂಡಿ ವಾರಣಾಸಿ (ಕಾಶಿ)ಯಿಂದ ದಕ್ಷಿಣಾಭಿಮುಖವಾಗಿ ವಿಹಾರಾರ್ಥವಾಗಿ ಬಂದರೆಂದು, ಅವರಲ್ಲಿ ಪೈಕಿ ವೈಷ್ಣವಿ, ಮಹೇಶ್ವರಿ, ಕೌಮಾರಿಯರೇ ಹುತ್ತದ ರೂಪದಲ್ಲಿ ಹಾಸನಾಂಬಾ ದೇವಾಲಯದಲ್ಲಿ ನೆಲೆಸಿದ್ದಾರೆ. ಬ್ರಾಹ್ಮಿದೇವಿಯು ಆಲೂರು ತಾಲೂಕು ಕೆಂಚಮ್ಮನ ಹೊಸಕೋಟೆಯಲ್ಲಿ ಕೆಂಚಮ್ಮದೇವಿಯಾಗಿ, ಚಾಮುಂಡಿ, ವಾರಾಹಿ ಮತ್ತು ಇಂದ್ರಾಣಿಯವರು ಹಾಸನದ ದೇವಿಗೆರೆಯಲ್ಲಿ ನೆಲಸಿದ್ದಾರೆ ಎಂಬ ನಂಬಿಕೆಯಿದೆ.

ಬ್ರಹ್ಮನ ವರದಿಂದ ಉನ್ಮತ್ತನಾದ ಅಂಧಕಾಸುರನ ಪ್ರತಿ ಹನಿ ರಕ್ತದಿಂದಲೂ ಒಬ್ಬೊಬ್ಬ ಅಂಧಕಾಸುರ ಹುಟ್ಟುತ್ತಿದ್ದ. ರಕ್ತ ಬೀಳುವುದನ್ನು ತಡೆಯಲು ಶಿವನು ಒಂದು ಶಕ್ತಿಯನ್ನು ಸೃಷ್ಟಿಸಿದ. ಅದೇ ಯೋಗೇಶ್ವರಿ. ಇತರೆ ದೇವತೆಗಳೂ ಶಿವನ ಸಹಾಯಕ್ಕೆ ತಮ್ಮ ಶಕ್ತಿಯನ್ನು ತುಂಬಲು ಮುಂದಾದರು. ಹೀಗೆ ಜನ್ಮ ತಾಳಿದವರೇ ಸಪ್ತ ಮಾತೃಕೆಯರು. 64 ಕಲೆಗಳಿಗೆ ಅಧಿದೇವತೆಯರಾದ ಸಪ್ತಮಾತೃಕೆಯರು ಶ್ರೀ ಹಾಸನಾಂಬೆಯ ರೂಪದಲ್ಲಿದ್ದಾರೆ ಎಂಬುದು ಪುರಾಣ.

ಐತಿಹಾಸಿಕವಾಗಿ ಹಾಸನದ ಪ್ರದೇಶವನ್ನು ಚೋಳರಸರ ಅಧಿಪತಿ ಬುಕ್ಕಾನಾಯಕ ವಂಶಸ್ಥರು ಆಳುತ್ತಿದ್ದರು. ಅವರ ವಂಶಸ್ಥ ಕೃಷ್ಣಪ್ಪ ನಾಯಕ ಒಮ್ಮೆ ಪ್ರಯಾಣ ಹೊರಟಾಗ ಒಂದು ಮೊಲ ಅಡ್ಡ ಬಂದು ಪಟ್ಟಣ ಪ್ರವೇಶಿಸಿತು. ಇದು ಅಪಶಕುನ ಎಂದು ಕೃಷ್ಣಪ್ಪನಾಯಕ ನೊಂದುಕೊಂಡಿದ್ದಾಗ ಹಾಸನಾಂಬೆ ಪ್ರತ್ಯಕ್ಷಳಾಗಿ ಮೊಲ ಹೊಕ್ಕಿದ ಪ್ರದೇಶದಲ್ಲಿ ಕೋಟೆಯನು ಕಟ್ಟು ಎಂದು ಎಂದು ಹೇಳಿದಳೆಂದು, ಅಲ್ಲಿ ಕೋಟೆ ಕಟ್ಟಿ ಹಾಸನಾಂಬ ಎಂದು ಕೃಷ್ಣಪ್ಪನಾಯಕ ಹೆಸರಿಟ್ಟನೆಂಬುದು ಐತಿಹ್ಯ. ಹಾಸನ ತಾಲೂಕು ಕುದುರುಗುಂಡಿ ಗ್ರಾಮದಲ್ಲಿನ ಕ್ರಿ.ಶ.1140 ರಲ್ಲಿ ಸ್ಥಾಪತವಾದ ವೀರಗಲ್ಲಿನ ಶಿಲಾ ಶಾಸನದಲ್ಲಿ ಹಾಸನಾಂಬೆಯ ಹಾಸನವೆಂಬ ಉಲ್ಲೇಖವಿದೆ.

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.