ಡೆಂಘೀ ನಿಯಂತ್ರಣಕ್ಕೆ ಲಾರ್ವಾ ಸಮೀಕ್ಷೆ
Team Udayavani, Oct 16, 2019, 12:36 PM IST
ಗಜೇಂದ್ರಗಡ: ಸಮೀಪದ ರಾಜೂರ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಪಂ ವತಿಯಿಂದ ಡೆಂಘೀ ನಿಯಂತ್ರಣಕ್ಕೆ ಲಾರ್ವಾ ಸಮೀಕ್ಷೆ ಹಾಗೂ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಹಿರಿಯ ಆರೋಗ್ಯ ಸಹಾಯಕ ಮನೋಹರ ಕಣ್ಣಿ ಮಾತನಾಡಿ, ರಾಜೂರ ಗ್ರಾಮದಲ್ಲಿ ಹೆಚ್ಚುತ್ತಿರುವ ಜ್ವರಬಾಧೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಸಮಿಕ್ಷೆಯಲ್ಲಿ ಗ್ರಾಮದಲ್ಲಿ 6 ಶಂಕಿತ ಡೆಂಘೀ, 3 ಟೈಫಾಯ್ಡ, 10 ಜ್ವರ ಪ್ರಕರಣಗಳು ಪತ್ತೆಯಾಗಿದ್ದು, ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ನೀರು ತೆರೆದಿಡದಂತೆ ನೋಡಿಕೊಳ್ಳಬೇಕಿದೆ ಎಂದರು.
ಡಾ| ಮಹಾಂತೇಶ ಹಾದಿಮನಿ ಮಾತನಾಡಿ, ನಿಂತ ನೀರು ಸೊಳ್ಳೆಗಳ ಆವಾಸ ಸ್ಥಾನವಾಗಿದ್ದು, ಸಾರ್ವಜನಿಕರು ತಮ್ಮ ಮನೆಯ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಯಲ್ಲಿ ಸಂಗ್ರಹಿಸಿದ ನೀರಿನ ಪರಿಕರಗಳನ್ನು ಭದ್ರವಾಗಿ ಮುಚ್ಚಿಡಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಲಲಿತಾ ಮಳಗಿ, ಪಿಡಿಒ ಬಿ.ಎನ್. ಇಟಗಿಮಠ, ಗ್ರಾಪಂ ಸದಸ್ಯ ಶರಣಪ್ಪ ಇಟಗಿ, ಆರೋಗ್ಯ ಇಲಾಖೆಯ ಡಾ| ಎಂ.ಬಿ. ಗಡ್ಡಿ, ಸುನೀಲ ಹಬೀಬ, ಪ್ರವೀಣ ರಾಠೊಡ, ಮಹೇಶ ಹಿರೇಮಠ, ವಹಿದಾ ನಮಾಜಿ, ಪದ್ಮಾವತಿ ದಿವಾಣದ, ಮಂಜು ವರಗಾ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!