ರೈತ ಮಹಿಳೆಯರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ
Team Udayavani, Oct 16, 2019, 12:44 PM IST
ನರಗುಂದ: ಸಾವಯವ ಮತ್ತು ಅರಣ್ಯ ಕೃಷಿಯಲ್ಲಿ ಉತ್ತಮ ಸಾಧನೆ ತೋರಿ ರೈತರಿಗೆ ಮಾದರಿಯಾದ ಇಬ್ಬರು ಪ್ರಗತಿಪರ ರೈತ ಮಹಿಳೆಯರಿಗೆ ತಾಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ನಮ್ಮೂರ ಜಾತ್ರೆ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಶ್ರೀಮಠದ ವತಿಯಿಂದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಸಿ.ಸಿ. ಪಾಟೀಲ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ತೋಟಗಾರಿಕೆಯಲ್ಲಿ ಅರಣ್ಯ ಕೃಷಿ ಮೂಲಕ ರೈತರಿಗೆ ಮಾದರಿಯಾದ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಪ್ರಗತಿ ಸಾಧಿಸಿದ ತಾಲೂಕಿನ ಸಂಕದಾಳ ಗ್ರಾಮದ ಪ್ರಗತಿಪರ ರೈತ ಮಹಿಳೆ ನೀಲಾಂಬಿಕಾ ಲಿಂನಗೌಡ್ರ ಹಾಗೂ ಸಾವಯವ ಕೃಷಿಯಲ್ಲಿ ಬಹು ಬೆಳೆ ಪದ್ಧತಿಯಲ್ಲಿ ಅಪ್ರತಿಮ ಸಾಧನೆಗೈದ ತಾಲೂಕಿನ ಕೊಣ್ಣೂರ ಗ್ರಾಮದ ಪ್ರಗತಿಪರ ರೈತ ಮಹಿಳೆ ಯಲ್ಲವ್ವ ಪೂಜಾರ ಅವರಿಗೆ ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದೊರೆಸ್ವಾಮಿ ವಿರಕ್ತ ಮಠದ ಶ್ರೀ ಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವರ ಸೀಗಿಹಳ್ಳಿ ಗುರು ಮಡಿವಾಳೇಶ್ವರ ಮಠದ ಶ್ರೀ ವೀರೇಶ್ವರ ದೇವರು ಸಮ್ಮುಖ ವಹಿಸಿದ್ದರು. ವಿಮಲಾ ಚಲವಾದಿ, ಡಾ| ಶರಣು ಗೋಗೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು