ಜೀವ ಉಳಿಸುವ ರಕ್ತ ವಿದಳನ ಘಟಕ

56ಲಕ್ಷ ವೆಚ್ಚದಲ್ಲಿcಯಲ್ಲಿ ಘಟಕ ಸ್ಥಾಪನೆ

Team Udayavani, Oct 16, 2019, 12:57 PM IST

hv-tdy-1

ಹಾವೇರಿ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ರಕ್ತ ವಿದಳನ ಘಟಕ ಜಿಲ್ಲಾಸ್ಪತ್ರೆಯಲ್ಲಿ ಆರಂಭಗೊಂಡಿದ್ದು ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲವಾದಂತಾಗಿದೆ.

ಜಿಲ್ಲೆಯಲ್ಲಿ 2016ರಲ್ಲಿ ರಕ್ತ ನಿಧಿ ಕೇಂದ್ರ ಆರಂಭವಾಗಿ ಸಾರ್ವಜನಿಕರಿಗೆ ಸೇವೆ ನೀಡುತ್ತಿತ್ತು. ಇದೀಗ ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯಲ್ಲಿ ಅಂದಾಜು 56ಲಕ್ಷ ರೂ. ವೆಚ್ಚದಲ್ಲಿ ರಕ್ತ ವಿದಳನ ಘಟಕ ಸ್ಥಾಪಿಸಲಾಗಿದೆ.

ರಕ್ತ ವಿದಳನ ಘಟಕ ಮಂಜೂರು ಮಾಡುವಂತೆ 2017ರಲ್ಲಿಯೇ ಸರಕಾರಕ್ಕೆ ಅರ್ಜಿ ಸಲ್ಲಿಸಲಾಗಿತ್ತು. 2019ಕ್ಕೆ ಸರಕಾರದಿಂದ ಅನುಮತಿ ಸಿಕ್ಕಿದ್ದು, ಆಗಸ್ಟ್‌ 15ರಿಂದ ರಕ್ತ ವಿದಳನ ಘಟಕ ಸೇವೆ ನೀಡುತ್ತಿದೆ. ಘಟಕದಲ್ಲಿ ವೈದ್ಯರು, ಮೆಡಿಕಲ್‌ ಆಫೀಸರ್‌, ನರ್ಸ್‌, ವಾಹನ ಚಾಲಕ, ಸೇವಕ, ವೈದ್ಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 11ಜನರು ಕೆಲಸ ನಿರ್ವಹಿಸುತ್ತಿದ್ದಾರೆ.

ರಕ್ತ ವಿದಳನ ಘಟಕದಿಂದ ಬಿಪಿಎಲ್‌, ಥೆಲಾಸೆಮಿಯಾ, ಹಿಮೋಫೀಲಿಯಾ, ಎಚ್‌ಐವಿ, ಜೆಎಸ್‌ಎಸ್‌ಕೆ ರೋಗಿಗಳಿಗೆ ಉಚಿತ ರಕ್ತ ವಿತರಿಸಲಾಗುತ್ತದೆ. ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಉಳಿದ ರೋಗಿಗಳಿಗೆ ಸರಕಾರ ಆದೇಶದನ್ವಯ 350 ರೂ., ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದವರಿಗೆ (ನ್ಯಾಟ್‌ ಟೆಸ್ಟ್‌ ಶುಲ್ಕದೊಂದಿಗೆ)2050 ರೂ., ಯಾವುದೇ ಸರಕಾರಿ ಆಸ್ಪತ್ರೆಯಲ್ಲಿ ಇದ್ದರೂ ಏಲಿಜಾ ಟೆಸ್ಟ್‌ ಶುಲ್ಕ 995 ರೂ. ಇದೆ.

ಏನಿದು ರಕ್ತ ವಿದಳನ?: ರಕ್ತದಲ್ಲಿ ನಾಲ್ಕು ಘಟಕಗಳಿರುತ್ತವೆ. ಕೆಂಪು ರಕ್ತಕಣ, ಬಿಳಿ ರಕ್ತಕಣ, ಪ್ಲಾಸ್ಮಾ ಮತ್ತು ಪ್ಲೇಟ್‌ಲೆಟ್‌. ದಾನಿಗಳಿಂದ ಸಂಗ್ರಹಿಸುವ ರಕ್ತದಲ್ಲಿರುವ ಈ ನಾಲ್ಕು ಅಂಶಗಳನ್ನು ಪ್ರತ್ಯೇಕಿಸುವ ಘಟಕವೇ ರಕ್ತ ವಿದಳನ ಘಟಕವಾಗಿದೆ. ರಕ್ತದ ಕಣಗಳನ್ನು ಬೇರ್ಪಡಿಸಿ ರೋಗಿಗಳಿಗೆ ಬೇಕಾದಂತಹ ಅಗತ್ಯ ಕಣಗಳನ್ನು ಒದಗಿಸುವ ಕಾರ್ಯವನ್ನು ರಕ್ತ ವಿದಳನ ಘಟಕ ಮಾಡುತ್ತದೆ. ಒಂದು ಯುನಿಟ್‌ ರಕ್ತದಿಂದ ನಾಲ್ಕು ರೋಗಿಗಳಿಗೆ ಅನುಕೂಲವಾಗುತ್ತದೆ. ರಕ್ತದಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದ್ದು, ಪ್ಲೇಟ್‌ಲೆಟ್‌ 5 ದಿನ ಉಳಿಯುತ್ತದೆ.

ಕೆಂಪು ರಕ್ತಕಣ ಮತ್ತು ಬಿಳಿ ರಕ್ತಕಣಗಳನ್ನು 35 ದಿನಗಳವರೆಗೆ, ಪ್ಲಾಸ್ಮಾವನ್ನು ಒಂದು ವರ್ಷದವರೆಗೂ ಕೆಡದಂತೆ ಇಡಬಹುದಾಗಿದೆ. ರಕ್ತ ವಿದಳನ ಘಟಕಕ್ಕೆ ಎಸ್‌ಡಿಪಿ ಯಂತ್ರ, ಡೇ ಕೇರ್‌ ಸೆಂಟರ್‌, ಜಲ್‌ ಯಂತ್ರ ಸೇರಿದಂತೆ ಪ್ರತ್ಯೇಕ ರಕ್ತ ವಾಹನ ಅವಶ್ಯಕತೆ ಇದೆ. ಇವುಗಳಿಗೆ ದೊಡ್ಡ ಮಟ್ಟದ ಅನುದಾನ ಬೇಕಿರುವುದರಿಂದ ಇದಕ್ಕೆ ಸಹಾಯ ಮಾಡುವ ದಾನಿಗಳು ಮುಂದೆ ಬರಬೇಕು ಎನ್ನುತ್ತಾರೆ ರಕ್ತ ವಿದಳನ ಘಟಕದ ಪ್ರಯೋಗಾಲಯ ತಂತ್ರಜ್ಞ ಬಸವರಾಜ ಕಮತದ.

ಜಿಲ್ಲೆಯ ಜನರ ಬೇಡಿಕೆಯಂತೆ ಜಿಲ್ಲಾಸ್ಪತ್ರೆಯಲ್ಲಿ ರಕ್ತ ವಿದಳನ ಘಟಕ ಆರಂಭಿಸಲಾಗಿದೆ. ರಕ್ತ ಹೀನತೆಯಿಂದ ಬಳಲುವ ರೋಗಿಗಳಿಗೆ ಇದು ಹೆಚ್ಚು ಉಪಯುಕ್ತ. ರಕ್ತದಾನಿಗಳು ಮುಂದೆ ಬಂದರೆ ಉತ್ತಮ ಸೇವೆ ನೀಡಲು ಅನುಕೂಲವಾಗಲಿದೆ. ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಜನರು ಮುಂದೆ ಬಂದರೆ ನೂರಾರು ಜೀವಗಳನ್ನು ಉಳಿಸಬಹುದು.-ಬಸವರಾಜ ತಳವಾರ, ವ್ಯವಸ್ಥಾಪಕರು, ರಕ್ತ ವಿದಳನ ಘಟಕ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.