ಜನಪ್ರತಿನಿಧಿಗಳ ನಿಲುವು ಸ್ಪಷ್ಟಪಡಿಸಲು ಆಗ್ರಹ


Team Udayavani, Oct 16, 2019, 3:01 PM IST

uk-tdy-2

ಹೊನ್ನಾವರ: ಜಿಲ್ಲೆಯ ಬಿಜೆಪಿ, ಕಾಂಗ್ರೆಸ್‌ ಶಾಸಕರು, ಸಂಸದರು ಅರಣ್ಯ ಭೂಮಿ ಸಾಗುವಳಿದಾರರ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸುತ್ತಿಲ್ಲ. ವಿಧಾನಸಭೆ, ಲೋಕಸಭೆಗಳಲ್ಲಿ ಸೊಲ್ಲೆತ್ತುತ್ತಿಲ್ಲ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಜನ ಬೀದಿಗಿಳಿದು ಪ್ರತಿಭಟನೆ ನಡೆಸಲು ತೊಡಗಿ ವಾರಕಳೆದಿದೆ.

ಜಾತಿ, ಧರ್ಮ, ಮೋದಿ ಹೆಸರಲ್ಲಿ ಮತ ಕೇಳಿದರು, ಮತ ಹಾಕಿದೆವು. ಇವರಿಂದ ಅಲ್ಲವಾದರೂ ರೈತಪರ ಹೋರಾಟಗಾರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಡವರ ಕುರಿತು ವಿಶೇಷ ಕಾಳಜಿ ಹೊಂದಿದ ಮೋದಿಯವರ ಸರ್ಕಾರದಿಂದ ತಮಗೆ ಭೂಮಿ ಹಕ್ಕು ದೊರೆಯಬಹುದು ಎಂದು ಆಸೆಯಿಂದಿರುವ ಜನರಿಗೆ ತೀವ್ರ ನಿರಾಸೆ ಉಂಟಾಗಿದೆ. ಈ ವರ್ಷದ ಮಳೆ 725 ಅತಿಕ್ರಮಣದಾರರ ಮನೆಯನ್ನು ತೊಳೆದುಕೊಂಡು ಹೋಗಿದೆ. 1830 ಹೆಕ್ಟೇರ್‌ ಭೂಮಿಯ ಬೆಳೆ ನಾಶವಾಗಿದೆ.

ಅವರಿಗೆ ಪರಿಹಾರವಿಲ್ಲ, ಮನೆ ಕಟ್ಟಿಕೊಳ್ಳಲು ಅರಣ್ಯ ಇಲಾಖೆ ಬಿಡುವುದಿಲ್ಲ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ, ಅರಣ್ಯ ಹಕ್ಕು ಕಾಯಿದೆಯಡಿ ಮಂಜೂರಿಗೆ ಸಂಬಂಧಪಟ್ಟಂತೆ ಪುನರ್‌ ಪರಿಶೀಲನಾ ವಿಧಾನವನ್ನು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಬುಡಕಟ್ಟು ಮಂತ್ರಾಲಯ ಸೂಚಿಸಿದ ಮಾರ್ಗಸೂಚಿಯಂತೆ ನಿರ್ದಿಷ್ಟ ಕಾಲಮಾನದೊಳಗೆ ಮಂಜೂರಿ ಪ್ರಕ್ರಿಯೆಯನ್ನು ಯಾಕೆ ಜರುಗಿಸುತ್ತಿಲ್ಲ ಎಂಬ ಪ್ರಶ್ನೆಗೆ ಮೌನವೇ ಉತ್ತರ.

ಜಿಲ್ಲೆಯ 14 ಲಕ್ಷ ಜನರಲ್ಲಿ ಬದುಕಲು ಬೇರೆ ಗತಿ ಕಾಣದೆ ಸುಮಾರು 1ಲಕ್ಷ ಕುಟುಂಬಗಳ ಜನ 30ಸಾವಿರ ಹೆಕ್ಟೇರ್‌ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಿಕೊಂಡಿದ್ದಾರೆ. ಸರ್ಕಾರದ, ಜನಪ್ರತಿನಿಧಿಗಳ ಗಮನಕ್ಕೆ ತಾರದೆ ಅಭಯಾರಣ್ಯದ ಘೋಷಣೆಯಾಗಿದೆ. ಭಟ್ಕಳ, ಕುಮಟಾ ಶಾಸಕರು ಮಾನವೀಯ ದೃಷ್ಟಿಯಿಂದ ಅತಿಕ್ರಮಣದಾರರ ಪ್ರತಿನಿಧಿಗಳನ್ನು ಕಂಡು ಬೆಂಬಲ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳವರೆಗೆ ಕರೆದೊಯ್ದು ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಅಭಿಪ್ರಾಯ ಪ್ರಕಟವಾಗಿಲ್ಲ. ವಿಧಾನಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಭಯಾರಣ್ಯ ಪ್ರಕಟಣೆ ಸರಿಯಲ್ಲ ಎಂದು ಹೇಳಿದ್ದಾರೆ. ಕೇಂದ್ರ, ರಾಜ್ಯ ಅರಣ್ಯ ಸಚಿವರಿಗೆ ವಿಷಯ ತಿಳಿದಿದೆಯೋ ಇಲ್ಲವೋ ಗೊತ್ತಿಲ್ಲ. ಇನ್ನೆಷ್ಟು ವರ್ಷ ನಾವು ಕಾಯಬೇಕು ಎಂದು ಜನ ಕೇಳುತ್ತಿದ್ದಾರೆ.

ಭೂಮಿ ಸಾಗುವಳಿಯ ಹಕ್ಕು ಕೊಡಿ, ಇಲ್ಲವಾದರೆ ಬೇರೆ ಉದ್ಯೋಗ ಕೊಡಿ, ಮನೆಕೊಡಿ, ನಮಗೂ ಯಾವುದೇ ಮೂಲ ಸೌಲಭ್ಯವಿಲ್ಲದ ಕಾಡಿನಲ್ಲಿ ಉಳಿಯುವ ಮನಸ್ಸಿಲ್ಲ ಎನ್ನುತ್ತಿದ್ದಾರೆ. ಏನಾದರೂ ಒಂದು ತೀರ್ಮಾನಕ್ಕೆ ಸರ್ಕಾರ ಬರಬೇಕು. ಮೂರು ದಶಕಗಳಿಂದ ಜನ ಅರ್ಜಿಸಲ್ಲಿಸಿ, ಮೆರವಣಿಗೆ ಮಾಡಿ, ಪ್ರತಿಭಟಿಸಿ ದಣಿದಿದ್ದಾರೆ. ಅರಣ್ಯ ಇಲಾಖೆ ಮೇಲೆ ಬೇರೆ ಒತ್ತಡವಿದೆ. ಪೊಲೀಸ್‌ ಬಲದಿಂದ ಒಕ್ಕಲೆಬ್ಬಿಸಿದ ಘಟನೆಗಳು

ನಡೆದಿವೆ. ಜಿಲ್ಲೆಯಲ್ಲಿ ಹುಟ್ಟಿ ಬೆಳೆದವರು ಹೊಟ್ಟೆಪಾಡಿಗೆ ಇನ್ನೆಲ್ಲಿ ಹೋಗಬೇಕು ಎಂಬುದು ಜನರ ಪ್ರಶ್ನೆ. ರವೀಂದ್ರನಾಥ ನಾಯ್ಕ ನಿರಂತರ ಹೋರಾಟ ನಡೆಸಿದ್ದಾರೆ. ಹೋರಾಟಗಾರ ಕಲ್ಕುಳಿ ವಿಠಲ ಹೆಗಡೆ ಪ್ರವೇಶವಾಗಿದೆ. ಅಳಿವು ಉಳಿವಿನ ಪ್ರಶ್ನೆ ಎದುರಾದಾಗ ಏನೂ ಆಗಬಹುದು. ನಮಗೆ ಏನಾದರೂ ನಿರ್ಣಯ ಕೊಡಲಿ, ಕಾಯಿಸುವುದು ಸಾಯಿಸುವುದಕ್ಕಿಂತ ಹೆಚ್ಚಿನ ಸಂಕಟ ಕೊಡುತ್ತದೆ ಅನ್ನುತ್ತಾರೆ ಜನ. ಯಾಕೆ ಜನಪ್ರತಿನಿಧಿಗಳ ಈ ಮೌನ ?

 

ಜೀಯು, ಹೊನ್ನಾವರ

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.