ಮಾತೃಪೂರ್ಣ ಯೋಜನೆ ಶೇ.60 ಯಶಸ್ವಿ

ರಾಜ್ಯ ಸರ್ಕಾರದ ಪೌಷ್ಟಿಕಾಂಶವುಳ್ಳ ಆಹಾರ ಯೋಜನೆಗೆ ಮಲೆನಾಡು ಗರ್ಭಿಣಿ ಮತ್ತು ಬಾಣಂತಿಯರ ನಿರಾಸಕ್ತಿ

Team Udayavani, Oct 16, 2019, 3:56 PM IST

Udayavani Kannada Newspaper

ಚಿಕ್ಕಮಗಳೂರು: ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾತೃಪೂರ್ಣ ಯೋಜನೆ ಜಿಲ್ಲೆಯಲ್ಲಿ ಶೇ.60ರಷ್ಟು ಮಾತ್ರ ಯಶಸ್ವಿಯಾಗಿದೆ.

ಮಾತೃಪೂರ್ಣ ಯೋಜನೆ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕಾಂಶದ ಆಹಾರ ನೀಡಲು ಸರ್ಕಾರ ಆಲೋಚಿಸಿತ್ತು. ಅಲ್ಲದೇ, ನಂತರ ಆರು ತಿಂಗಳು ಬಾಣಂತಿಯರಿಗೂ ಉತ್ತಮ ಆಹಾರ ನೀಡುವ ಆಲೋಚನೆಯೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಿತ್ತು. ಗರ್ಭಿಣಿ ಮತ್ತು ಬಾಣಂತಿಯರಿಗೆ ಆಹಾರದಲ್ಲಿ ಅನ್ನ, ಸಾಂಬಾರು, ಪಲ್ಯ, ಮೊಟ್ಟೆ, ಶೇಂಗಾ ಚಟ್ನಿ ಹಾಗೂ ಹಾಲನ್ನು ನೀಡಲು ಮುಂದಾಗಿತ್ತು.

ಈ ಯೋಜನೆ ಆರಂಭವಾದಾಗ ಗರ್ಭಿಣಿಯರು ಹಾಗೂ ಬಾಣಂತಿಯರು ಇರುವ ಮನೆಗಳಿಗೆ ಹೋಗಿ ಆಹಾರ ನೀಡಲು ಅಂಗನವಾಡಿ ಕೇಂದ್ರಗಳಿಗೆ ಸೂಚಿಸಲಾಗಿತ್ತು. ಆನಂತರ ಇದು ಕಷ್ಟಸಾಧ್ಯ ಹಾಗೂ ಮನೆಗೆ ಹೋಗಿ ನೀಡಿದಾಗ ಅದು ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ಮಾತ್ರ ಸಿಗದೇ ಮನೆಯ ಇನ್ನಿತರ ಮಂದಿ ಸಹ ಅದರಲ್ಲಿ ಪಾಲು ಪಡೆಯುತ್ತಿದ್ದರು.

ಹಾಗಾಗಿ, ಅಂಗನವಾಡಿ ಕೇಂದ್ರಗಳಿಗೆ ಹೋಗಿ ಆಹಾರ ಸೇವಿಸಲು ಅವರಿಗೆ ಸೂಚಿಸಲಾಯಿತು. ಆದರೆ, ಈ ವ್ಯವಸ್ಥೆ ಸಹ ಈಗ ಯಶಸ್ವಿಯಾಗಿಲ್ಲ ಎಂಬುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿ-ಅಂಶ ಸ್ಪಷ್ಟಪಡಿಸುತ್ತದೆ. ಮಾತೃಪೂರ್ಣ ಯೋಜನೆಯಡಿ ಒಟ್ಟು ಇಲಾಖೆ ನೋಂದಣಿ ಮಾಡಿಕೊಂಡಿರುವ ಗರ್ಭಿಣಿ ಮತ್ತು ಬಾಣಂತಿಯರ ಸಂಖ್ಯೆ 12912.

ಆದರೆ, ಆಯಾ ಅಂಗನವಾಡಿ ಕೇಂದ್ರಗಳಿಗೆ ಪ್ರತಿನಿತ್ಯ ಬಂದು ಊಟ ಮಾಡುತ್ತಿರುವ ಗರ್ಭಿಣಿ ಮತ್ತು ಬಾಣಂತಿಯರ ಸಂಖ್ಯೆ 6933. ಇವರಲ್ಲಿ ಗರ್ಭಿಣಿಯರ ಸಂಖ್ಯೆ 3336 ಆದರೆ, ಬಾಣಂತಿಯರ ಸಂಖ್ಯೆ 3597. ಇವರ ಜತೆಗೆ ಆಹಾರ ತಯಾರಿಸಿ ಅವರಿಗೆ ನೀಡುವ 1786 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ 1656 ಮಂದಿ ಸಹಾಯಕಿಯರು ಸೇರಿ ಪ್ರತಿನಿತ್ಯ 10375 ಮಂದಿ ಆಹಾರ ಸ್ವೀಕರಿಸುತ್ತಿದ್ದಾರೆ.

ಮಲೆನಾಡಿನಲ್ಲಿ ಕ್ಷೀಣ: ದಟ್ಟ ಮಲೆನಾಡು ಕೊಪ್ಪ ತಾಲೂಕಿನಲ್ಲಿ ಅಂಗನವಾಡಿಗೆ ಬಂದು ಆಹಾರ ಸ್ವೀಕರಿಸಲು ದಾಖಲಿಸಿಕೊಂಡ ಗರ್ಭಿಣಿಯರು ಮತ್ತು ಬಾಣಂತಿಯರ ಸಂಖ್ಯೆ 584. ಆದರೆ, ಅಲ್ಲಿಗೆ
ಬಂದು ಆಹಾರ ಸ್ವೀಕರಿಸುತ್ತಿರುವ ಗರ್ಭಿಣಿಯರ ಸಂಖ್ಯೆ 121 ಆದರೆ, ಬಾಣಂತಿಯರ ಸಂಖ್ಯೆ ಕೇವಲ 90, ಮೂಡಿಗೆರೆಯಲ್ಲಿ ದಾಖಲಿಸಿಕೊಂಡಿರುವ 1420 ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಬಂದು ಆಹಾರ ಸ್ವೀಕರಿಸುತ್ತಿರುವವರು ಅನುಕ್ರಮವಾಗಿ 184 ಮತ್ತು 191. ಶೃಂಗೇರಿ ತಾಲೂಕಿನಲ್ಲಿ 526 ರ ಗುರಿಗೆ ಎದುರಾಗಿ ಬಂದು ಆಹಾರ ಸ್ವೀಕರಿಸುತ್ತಿರುವವರು
68 ಮಂದಿ ಗರ್ಭಿಣಿಯರು ಮತ್ತು 53 ಮಂದಿ ಬಾಣಂತಿಯರು.

ಚಿಕ್ಕಮಗಳೂರು ತಾಲೂಕಿನಲ್ಲಿ ಆಹಾರ ಸ್ವೀಕರಿಸಲು ನೋಂದಾಯಿಸಿಕೊಂಡವರ ಸಂಖ್ಯೆ 3302, ಬಂದು ಆಹಾರ ಸ್ವೀಕರಿಸುತ್ತಿರುವ ಗರ್ಭಿಣಿಯರು 822 ಮಂದಿಯಾದರೆ, ಬಾಣಂತಿಯರ ಸಂಖ್ಯೆ 879, ನರಸಿಂಹರಾಜಪುರ ತಾಲೂಕಿನಲ್ಲಿ ಹೆಸರು ದಾಖಲಿಸಿಕೊಂಡ 955 ಮಂದಿಯಲ್ಲಿ ಕೇವಲ 186 ಮಂದಿ ಗರ್ಭಿಣಿಯರು ಹಾಗೂ 189 ಮಂದಿ ಬಾಣಂತಿಯರು ಆಹಾರ ಸ್ವೀಕರಿಸಲು ಬರುತ್ತಿದ್ದಾರೆ.

ಮಲೆನಾಡಿನಲ್ಲಿ ಪೌಷ್ಟಿಕ ಆಹಾರವನ್ನು ಸರ್ಕಾರ ಉಚಿತವಾಗಿ ಒದಗಿಸಿ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯ ಸುಧಾರಿಸಲು ಯೋಜನೆ ಜಾರಿಗೆ ತಂದರೂ, ಅಂಗನವಾಡಿ ಕೇಂದ್ರಕ್ಕೆ ಬಂದು ಆಹಾರ ಸ್ವೀಕರಿಸಲು ಅದರದೇ ಆದ ಭೌಗೋಳಿಕ ಸಮಸ್ಯೆ ಕಾರಣ ಎಂದು ಜನ ಹೇಳುತ್ತಾರೆ.

ಮಲೆನಾಡಿನಲ್ಲಿ ಅಂಗನವಾಡಿ ಕೇಂದ್ರಕ್ಕೂ, ಅಲ್ಲಿರುವ ಮನೆಗಳಿಗೂ ಅಂತರ ಹೆಚ್ಚಾಗಿರುವುದು ಕಾರಣ. ಮಲೆನಾಡಿನಲ್ಲಿ ಬಯಲಿನಂತೆ ಒಟ್ಟಾಗಿ ಮನೆಗಳು ಕಂಡು ಬರುವುದಿಲ್ಲ. ಒಂದು ಮನೆಯಿಂದ ಮತ್ತೊಂದು  ಮನೆಗೆ ಹರಿದಾರಿ ದೂರವಿರುತ್ತದೆ. ಊಟಕ್ಕಾಗಿ ತಿಟ್ಟು ಹತ್ತಿ ಅಂಗನವಾಡಿಗೆ ಬರಲು ಸಾಧ್ಯವೇ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಾರೆ.

ಹಾಗಾಗಿ, ಸರ್ಕಾರದ ಈ ಒಂದು ದೂರದೃಷ್ಟಿಯ ಯೋಜನೆ ಅಲ್ಲಿ ಸಫಲವಾಗುತ್ತಿಲ್ಲ. ಬಯಲು ಭಾಗದಲ್ಲಿ ಒಂದು ಹಳ್ಳಿ ಎಂದರೆ ನೂರಾರು ಮನೆಗಳು ಒಟ್ಟಾಗಿರುತ್ತವೆ. ಜೊತೆಗೆ ಮಲೆನಾಡಿಗಿಂತ ಇಲ್ಲಿ ಬದುಕು ಕಷ್ಟಕರ. ಈ ಹಿನ್ನೆಲೆಯಲ್ಲಿ ಈ ಯೋಜನೆಯ ಫಲಾನುಭವಿಗಳ ಸಂಖ್ಯೆಯೂ ಅಧಿಕ. ಆದರೂ ಸಹ ಕಡೂರು, ತರೀಕೆರೆ ತಾಲೂಕಿನಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆಗೆ ಅನುಗುಣವಾಗಿ ಅಂಗನವಾಡಿ ಕೇಂದ್ರಕ್ಕೆ ಬರುವವರ ಸಂಖ್ಯಾ ಪ್ರಮಾಣದಲ್ಲೂ ಕುಸಿತ ಕಂಡುಬರುತ್ತಿದೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.