ಪೊಲೀಸರ ಕೈಸೇರಿತು ಬಾಡಿ ಕ್ಯಾಮರಾ!

ಮೊದಲ ಹಂತದಲ್ಲಿ 40 ಕ್ಯಾಮರಾಗಳ ಬಳಕೆ

Team Udayavani, Oct 16, 2019, 4:13 PM IST

mandya-tdy-1

ಮಂಡ್ಯ: ಬಹು ನಿರೀಕ್ಷಿತ ಬಾಡಿ ಕ್ಯಾಮರಾ ಪೊಲೀಸ್‌ ಇಲಾಖೆ ಕೈ ಸೇರಿದ್ದು, ಇನ್ನು ಕೆಲವೇ ದಿನಗಳಲ್ಲಿ ಅದು ಪೊಲೀಸರ ಮೈಗೆ ತಗುಲಿ ಹಾಕಿಕೊಳ್ಳಲಿದೆ. ಕರ್ತವ್ಯದ ವೇಳೆ ಸಂಭವಿಸುವ ಘಟನಾವಳಿ ಸೆರೆಹಿಡಿಯಲು ಈ ಕ್ಯಾಮರಾಗಳು ಪೊಲೀಸರ ನೆರವಿಗೆ ಬರಲಿವೆ.

ಮೊದಲ ಹಂತದಲ್ಲಿ 40 ಬಾಡಿ ಕ್ಯಾಮರಾಗಳನ್ನು ಜಿಲ್ಲಾ ಪೊಲೀಸ್‌ ಇಲಾಖೆ ತರಿಸಿಕೊಂಡಿದೆ. ಸಂಚಾರಿ ಠಾಣೆ ಪಿಎಸ್‌ಐ, ಎಎಸ್‌ಐಗಳು ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್‌ಐಗಳು ಕ್ಯಾಮರಾ ಧರಿಸಿ ಕರ್ತವ್ಯಕ್ಕೆ ಇಳಿಯಲಿದ್ದಾರೆ. ಒಟ್ಟು 60 ಕ್ಯಾಮರಾಗಳ ಅಗತ್ಯವಿದ್ದು, ಅನುದಾನ ಆಧರಿಸಿ, ಉಳಿದ ಕ್ಯಾಮರಾಗಳನ್ನು ಖರೀದಿ ಮಾಡಲು ಇಲಾಖೆ ನಿರ್ಧರಿಸಿದೆ ಎಂದು ಎಸ್‌ಪಿ ಕೆ.ಪರಶುರಾಮ ತಿಳಿಸಿದರು.

ಬಾಡಿ ಕ್ಯಾಮರಾ ಬಳಕೆ ಹೇಗೆ? : ದೇಹದ ಎದೆಯ ಭಾಗದಲ್ಲಿ ಶರ್ಟ್‌ಗೆ ಅಳವಡಿಸಿದ ಈ ಕ್ಯಾಮರಾದಲ್ಲಿ ದೃಶ್ಯಗಳು ಸೆರೆಯಾಗಲಿವೆ. ಅಗತ್ಯ ಸಂದರ್ಭಗಳಲ್ಲಿ ಬಟನ್‌ ಒತ್ತಿ ಕ್ಯಾಮರಾ ಆನ್‌ ಮಾಡಿಕೊಳ್ಳಬಹುದು. ಪೊಲೀಸ್‌ ಅಧಿಕಾರಿ ಇತರೆ ಕೆಲಸ ಮಾಡುವ ಸ್ಥಳದಲ್ಲಿ ನಡೆಯುವ ದೃಶ್ಯಗಳೂ, ಇದರಲ್ಲಿ ಸೆರೆಯಾಗುತ್ತವೆ. ಪೊಲೀಸ್‌ ಅಧಿಕಾರಿ ಧ್ವನಿ ಹಾಗೂ ಇತರರ ಧ್ವನಿ, ದೃಶ್ಯವೂ ಇದರಲ್ಲಿ ದಾಖಲಾಗುವುದು. ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರಿಂದ ಸಾಕ್ಷಿ ಸಮೇತ ದಂಡ ವಸೂಲಿಗೂ ಅನುಕೂಲವಾಗಿದೆ ಎಂದು ಅವರು ಹೇಳಿದರು.

8 ಗಂಟೆ ದೃಶ್ಯ ಸೆರೆ: ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಈ ಕ್ಯಾಮರಾಗಳು 8 ಗಂಟೆ ದೃಶ್ಯಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಹೊಂದಿವೆ. ಉತ್ತಮ ಗುಣಮಟ್ಟದ ದೃಶ್ಯ ದಾಖಲಾಗುತ್ತದೆ. ಬೇಕಾದ ದಿಕ್ಕುಗಳಿಗೆ ಕ್ಯಾಮರಾ ತಿರುಗಿಸಿಕೊಳ್ಳಲು ಅವಕಾಶವಿದ್ದು, ಇದಕ್ಕೆ ಸಂಬಂಧಿಸಿದ ಸರ್ವರ್‌ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಚೇರಿಯಲ್ಲಿದ್ದು, ವಾರಕ್ಕೊಮ್ಮೆ ಈ ದೃಶ್ಯಗಳನ್ನು ಕ್ಯಾಮರಾದಿಂದ ಸರ್ವರ್‌ಗೆ ವರ್ಗಾಯಿಸಬಹುದು. 90 ದಿನಗಳ ಕಾಲ ದೃಶ್ಯಗಳನ್ನು ಉಳಿಸಿಕೊಳ್ಳುವುದಕ್ಕೆ ಅವಕಾಶವಿದೆ.

ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯೊಂದಿಗೆ ಇದೂ ಸಹ ಪ್ರಮುಖ ಸಾಕ್ಷ್ಯ ಆಗಲಿದೆ. ಚುನಾವಣೆ ಕಾಲಕ್ಕೂ ಅನುಕೂಲ: ಚುನಾ ವಣೆ ಸಮಯದಲ್ಲಿ ನಾಯಕರ ಜಿದ್ದಾಜಿದ್ದಿ ಕಣಗಳಲ್ಲಿ ಕ್ಯಾಮೆರಾ ಕಣ್ಗಾವಲು ಇಡಲು ಅನುಕೂಲವಾಗುತ್ತದೆ. ಈಗ ಸಿಸಿಟಿವಿ ಕ್ಯಾಮೆರಾ, ವೆಬ್‌ ಕ್ಯಾಸ್ಟಿಂಗ್‌, ವಿಡಿಯೋ, ಫೋಟೋಗ್ರಫಿ ಹೀಗೆ ಒಂದಲ್ಲ ಒಂದು ರೀತಿ ಚುನಾವಣೆ ಚಟುವಟಿಕೆಗಳು ದಾಖಲಾಗುತ್ತಿವೆ. ಅದೇ ರೀತಿ ಪೊಲೀಸರ ಬಾಡಿ ವೋರ್‌ ಕ್ಯಾಮರಾವೂ ಮತ್ತೂಂದು ರೀತಿಯಲ್ಲಿ ನೆರವಿಗೆ ಬರುತ್ತದೆ.

ಕ್ಷೇತ್ರದಲ್ಲಿ ಮುಂದೆ ಎದುರಾಗಬಹುದಾದ ಯಾವುದೇ ಆರೋಪಗಳಿಗೆ ಸಾಕ್ಷಿ ಸಮೇತ ಉತ್ತರ ನೀಡಲು ಅನುಕೂಲವಾಗುವಂತೆ ಪೊಲೀಸರು ಮುಂಜಾಗ್ರತೆ ಕ್ರಮವಾಗಿ ಇದನ್ನು ಬಳಸಬಹುದು. ಸಾಧ್ಯವಾದಷ್ಟು

ಎಲ್ಲವನ್ನೂ ದೃಶ್ಯದಲ್ಲಿ ಸೆರೆ ಹಿಡಿಯುವ ಪ್ರಯತ್ನ ಪೊಲೀಸರದ್ದಾಗಿದೆ. ಯಾವುದಾದರೂ ಘಟನೆಗಳು ಸಂಭವಿಸಿದಾಗ ತಮ್ಮ ಸಿಬ್ಬಂದಿ ಹೇಗೆ ವರ್ತಿಸುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬಹುದು.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.