8 ವರ್ಷಗಳ ಬಳಿಕ ಮೈದುಂಬಿದ ಚಿತ್ರಾವತಿ
Team Udayavani, Oct 17, 2019, 3:00 AM IST
ಸೋಮೇನಹಳ್ಳಿ: ಹೋಬಳಿಯಾದ್ಯಂತ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಗುಂಡಿ ಗೊಟರುಗಳು ತುಂಬಿದ್ದು 8 ವರ್ಷಗಳ ಬಳಿಕ ಚಿತ್ರಾವತಿ ನದಿ ಮೈದುಂಬಿ ಹರಿಯುತ್ತಿದೆ. ನದಿ ಪಾತ್ರದಲ್ಲಿ ಮರಳಿಗಾಗಿ ತೆಗೆದಿದ್ದ ಎಲ್ಲಾ ಗುಂಡಿಗಳು ನೀರಿನಿಂದಾಗಿ ಮುಚ್ಚಿ ಹೋಗಿದ್ದು ತನ್ನ ಪಥದಲ್ಲಿಯೇ ಹರಿಯುತ್ತಿದೆ.
ಉರುಳಿ ಬಿದ್ದ ವಿದ್ಯುತ್ ಕಂಬ: ಕಮ್ಮಡಿಕೆ ಮತ್ತು ಮಿಟ್ಟೇಮರಿ ಗ್ರಾಮಗಳಿಗೆ ಹೋಗುವ ರಸ್ತೆಗೆ ಚಿತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಮೇಲೆ ನೀರು ಹರಿದಿದೆ. ನದಿ ದಡದಲ್ಲಿದ್ದ ವಿದ್ಯುತ್ ಕಂಬಗಳು ನೀರಿನ ರಭಸಕ್ಕೆ ಉರುಳಿ ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಅಕ್ಕಪಕ್ಕದ ಗ್ರಾಮಸ್ಥರು ರಾತ್ರಿ ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.
ಪ್ರವಾಸಿಗರ ಸಂಖ್ಯೆ ಹೆಚ್ಚಳ: ನಲ್ಲಪ್ಪನಹಳ್ಳಿಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ಭಾರೀ ಪ್ರಮಾಣದಲ್ಲಿ ತುಂಬಿ ಕೋಡಿ ಹೋಗುತ್ತಿದ್ದು ಡ್ಯಾಂನ್ನು ವೀಕ್ಷಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಚಿತ್ರಾವತಿ ನದಿಗೆ ದಯಾಲ ಮಡಗು ನೀರು ಹೆಚ್ಚಿನ ಪ್ರಮಾಣದಲ್ಲಿ ಬಂದು ಬರುತ್ತಿದೆ.
ಕಾಲುವೆಯಲ್ಲಿ ಗಿಡಗಂಟಿ: ನದಿ ನೀರು ಗಿಡಗಳ ಮೇಲೆ ಮರಗಳ ಮೇಲೆ ಹರಿಯುತ್ತಿರುವುದರಿಂದ ಮರಗಿಡಗಳು ನೆಲಕ್ಕೆ ಬಾಗಿವೆ. ದೇವಗಾನಹಳ್ಳಿ ಕ್ರಾಸ್ನಿಂದ ಸೋಮೇನಹಳ್ಳಿ ಕೆರೆಯವರೆಗೂ ನಿರ್ಮಿಸಿರುವ ಪೋಷಕ ಕಾಲುವೆಯಲ್ಲಿ ಗಿಡಗಂಟಿಗಳು ಬೆಳೆದಿವೆ. ಅಲ್ಲದೇ, ಕಾಲುವೆಯಲ್ಲಿ ಹಳೆಯ ಬಟ್ಟೆ ಬರೆಗಳು, ಫ್ಲಾಸ್ಟಿಕ್ ಮುಂತಾದ ತ್ಯಾಜ್ಯ ತುಂಬಿಕೊಂಡಿದ್ದು ನೀರು ಕಾಲುವೆಯಲ್ಲಿ ಹರಿಯದೆ ಸೋಮೇನಹಳ್ಳಿ ಕೆರೆಗೆ ನೀರು ಬಾರದಂತಾಗಿದೆ.
ಕುಂಟೆ, ಬಾವಿಗಳಿಗೆ ನೀರು: ಮಳೆ ನೀರು ಸೋಮೇನಹಳ್ಳಿ ಸುತ್ತಮುತ್ತಲಿನ ಕೆರೆ, ಕುಂಟೆಗಳಲ್ಲಿ ತುಂಬಿದೆ. ರೈತರ ಜಮೀನುಗಳಲ್ಲಿ ನಿರ್ಮಿಸಿರುವ ಕೃಷಿ ಹೊಂಡ, ಸಣ್ಣಪುಟ್ಟ ಚೆಕ್ ಡ್ಯಾಂಗಳಲ್ಲಿ ನೀರು ನಿಂತಿದೆ.
ಚರಂಡಿ ನೀರು ರಸ್ತೆಗೆ: ಸೋಮೇನಹಳ್ಳಿ ಗ್ರಾಮದ ಕೆಲವು ಬೀದಿಗಳಲ್ಲಿ ಒಳ ಚರಂಡಿಗಳನ್ನು ಗ್ರಾಪಂ ಸ್ವಚ್ಛಗೊಳಿಸದ ಕಾರಣ ಮಳೆ ನೀರು ಚರಂಡಿಗಳಲ್ಲಿ ಹರಿಯದೆ ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದಾಗಿ ತ್ಯಾಜ್ಯ ರಸ್ತೆ ಮೇಲೆಲ್ಲಾ ಹರಿದಿದೆ.
* ರಮೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ