ಪ್ರವಾಸೋದ್ಯಮ ನೀತಿಯಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯ


Team Udayavani, Oct 17, 2019, 3:10 AM IST

pravasodyama

ಬೆಂಗಳೂರು: ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ ರಚನೆಯ ಸಿದ್ಧತೆ ಆರಂಭಗೊಂಡಿದ್ದು, “ಪ್ರವಾಸೋದ್ಯಮದಲ್ಲಿ ಕನ್ನಡಿಗರು, ಅದರಲ್ಲೂ ಸ್ಥಳೀಯರಿಗೆ ಉದ್ಯೋಗ ಕಡ್ಡಾಯಗೊಳಿಸಲು’ ಗಂಭೀರ ಚಿಂತನೆ ನಡೆದಿದೆ.

ಪ್ರವಾಸೋದ್ಯಮದಲ್ಲಿ ಕನ್ನಡಿಗರಿಗೆ ಶೇ.50ರಷ್ಟು ಉದ್ಯೋಗ ಕಡ್ಡಾಯ. ಪ್ರವಾಸಿ ತಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ಗ್ರಾಮೀಣ ಯುವಕರ ತಂಡ ರಚಿಸಿ ಆ ತಂಡಗಳಿಗೆ ಪ್ರವಾಸೋದ್ಯಮ ಪ್ರಮೋಟ್‌ ಮಾಡುವ ಹೊಣೆಗಾರಿಕೆ ನೀಡುವುದು, ಅಲ್ಲಿ ಕ್ರೋಢೀಕರಣವಾಗುವ ಹಣದ ಅಧಿಕ ಪಾಲನ್ನು ಅವರಿಗೇ ನೀಡುವುದು ನೂತನ ಪ್ರವಾಸೋದ್ಯಮ ನೀತಿಯಲ್ಲಿ ಸೇರ್ಪಡೆಯಾಗಲಿದೆ.

ಕಾರ್ಪೋರೇಟ್‌ ಕಂಪನಿಗಳ ಸಿಎಎಸ್‌ಆರ್‌ ನಿಧಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಹೂಡಿಕೆಗೆ ಅವಕಾಶ ಕಲ್ಪಿಸುವುದು ಸೇರಿದಂತೆ ಇನ್‌ಫೋಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ ನೇತೃತ್ವದ ಕಾರ್ಯಪಡೆ ಹಲವು ಸಲಹೆಗಳನ್ನು ನೀಡಿದೆ. ಅದನ್ನೂ ಸೇರಿಸಿಕೊಂಡು ಬಹುತೇಕ ವರ್ಷಾಂತ್ಯದೊಳಗೆ ನೂತನ ಪ್ರವಾಸೋದ್ಯಮ ನೀತಿ ಸಿದ್ಧಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಗುರುತಿಸಲಾಗಿರುವ 17 ಅಂತಾರಾಷ್ಟ್ರೀಯ ತಾಣಗಳಲ್ಲಿ ರಾಜ್ಯದ ಹಂಪಿಯೂ ಸೇರಿರುವುದರಿಂದ ಹಂಪಿ ಹಾಗೂ ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಪ್ರವಾಸಿಗರಿಗೆ ಲಂಡನ್‌ ಬಿಗ್‌ ಬಸ್‌ ಮಾದರಿಯ 6 ಡಬಲ್‌ ಡೆಕ್ಕರ್‌ ತೆರೆದ ಬಸ್‌ನ್ನು ಕೆಎಸ್‌ಟಿಡಿಸಿಯಿಂದ ಪ್ರಾರಂಭಿಸುವ ಯೋಜನೆಯನ್ನೂ ಇಲಾಖೆ ರೂಪಿಸಿದೆ. ಜತೆಗೆ, ಚಾಲುಕ್ಯರ ಪರಂಪರೆ ಪರಿಚಯಿಸಲು ಬಾದಾಮಿಯನ್ನು ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿ ಮತ್ತು ಕರಕುಶಲ ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲು ಬಜೆಟ್‌ನಲ್ಲಿ 25 ಕೋಟಿ ರೂ.ಇಡಲಾಗಿದ್ದು, ಅದಕ್ಕೆ ರೂಪುರೇಷೆ ರಚಿಸಲಾಗುತ್ತಿದೆ.

ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಯಲ್ಲಿ 834 ಸಂರಕ್ಷಿತ ಸ್ಮಾರಕಗಳಿದ್ದು, ಆ ಪೈಕಿ 600 ಸ್ಮಾರಕಗಳನ್ನು ಪ್ರವಾಸಿ ತಾಣಗಳಾಗಿಸುವುದು ಸೇರಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಿ ಹೆಚ್ಚು, ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು “ಕರ್ನಾಟಕ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನ’ ಆಯೋಜಿಸಲು ಸಿದ್ಧತೆ ನಡೆದಿದೆ.

ಅಂತರ್ಜಾಲದಲ್ಲಿ ಗ್ರಾಮಗಳ ಚರಿತ್ರೆ: ಐತಿಹಾಸಿಕ ಹಿನ್ನೆಲೆ ಇರುವ ರಾಜ್ಯದ ಗ್ರಾಮಗಳ ಚರಿತ್ರೆಯ ಅಧ್ಯಯನ ನಡೆಸಿ ಅಂತರ್ಜಾಲದಲ್ಲಿ ದಾಖಲಿಸಲು ಚಿಂತನೆ ನಡೆದಿದೆ. ಕೆಲವು ಗ್ರಾಮಗಳ ಇತಿಹಾಸ ಜಾನಪದ ರೂಪದಲ್ಲಿ ಉಳಿದಿದ್ದು, ಅದನ್ನು ಡಿಜಿಟಲೀಕರಣ ಮಾಡಲು ಇಲಾಖೆ ತೀರ್ಮಾನಿಸಿದೆ. ಇದಕ್ಕಾಗಿ ವಿಶ್ವವಿದ್ಯಾಲಯಗಳ ಅಧ್ಯಯನ ಪೀಠ, ಕನ್ನಡ ಭಾಷಾ ವಿದ್ಯಾರ್ಥಿಗಳನ್ನು ಬಳಕೆ ಮಾಡಲು ತೀರ್ಮಾನಿಸಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 319 ಪ್ರವಾಸಿ ತಾಣಗಳಿದ್ದು, 41 ಪ್ರವಾಸಿ ತಾಣಗಳ ಸರ್ಕ್ನೂಟ್‌ (ವರ್ತುಲ) ರಚಿಸಲಾಗಿದೆ. ಧಾರ್ಮಿಕ, ಪರಿಸರ, ಸಾಹಸ, ಪಾರಂಪರಿಕ, ಪ್ರವಾಸೋದ್ಯಮಕ್ಕೆ ಅವಕಾಶವಿದೆ. ನಮ್ಮ ನೂತನ ಪ್ರವಾಸೋದ್ಯಮ ನೀತಿಯಲ್ಲಿ ಕನ್ನಡಿಗರು, ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಲು ಒತ್ತು ನೀಡಲಾಗುವುದು.
-ಸಿ.ಟಿ.ರವಿ, ಪ್ರವಾಸೋದ್ಯಮ ಸಚಿವ

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.