25ಕ್ಕೂ ಹೆಚ್ಚು ಮನೆಗಳ ಜನರಿಗೆ ಬಯಲು ಶೌಚವೇ ಗತಿ!


Team Udayavani, Oct 17, 2019, 12:35 PM IST

17-October-12

„ಪ್ರಶಾಂತ್‌ ಶೆಟ್ಟಿ

ಎನ್‌.ಆರ್‌.ಪುರ: ಗ್ರಾಮೀಣ ಭಾಗದಲ್ಲಿ ಎಲ್ಲಾ ಮನೆಗಳಲ್ಲೂ ಶೌಚಾಲಯ ನಿರ್ಮಿಸಿ ಬಯಲು ಬಹಿರ್ದೆಸೆಗೆ ಇತಿಶ್ರೀ ಹಾಡಬೇಕೆಂಬ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯ ಉದ್ದೇಶ ಸಂಪೂರ್ಣ ಕಾರ್ಯಗತವಾಗಿಲ್ಲ ಎಂಬುದಕ್ಕೆ, ತಾಲೂಕಿನ ಗುಬ್ಬಿಗಾ ಗ್ರಾಪಂ ವ್ಯಾಪ್ತಿಯ ಸಿಂಸೆ ಬಳಿಯ ಸರ್ವೆ ನಂ. 50ರ ಬೋವಿ ಕಾಲೋನಿ ಸಾಕ್ಷಿಯಾಗಿದೆ.

ಸಿಂಸೆ ಗ್ರಾಮದ ಬೋವಿ ಕಾಲೋನಿಯಲ್ಲಿ ಕಳೆದ ಹಲವು ವರ್ಷಗಳಿಂದ ಪರಿಶಿಷ್ಟ ಜಾತಿಗೆ ಸೇರಿದ ಬೋವಿ ಜನಾಂಗದ ಸಾಕಷ್ಟು ಕುಟುಂಬಗಳು ವಾಸವಾಗಿವೆ. ಇಲ್ಲಿನ 200ಕ್ಕೂ ಅಧಿಕ ಜನರಿರುವ 25ಕ್ಕೂ ಹೆಚ್ಚು ಮನೆಗಳಿಗೆ ಇಂದಿಗೂ ಶೌಚಾಲಯವಿಲ್ಲ. ಶೌಚಾಲಯಗಳಿಲ್ಲದ ಕಾರಣ ಇಲ್ಲಿನ ನಿವಾಸಿಗಳು ಬಯಲು ಬಹಿರ್ದಸೆಯನ್ನೇ ಅವಲಂಬಿಸಿದ್ದಾರೆ.

ಬಹುತೇಕ ಕುಟುಂಬಗಳು ಗುಡಿಸಲುಗಳಲ್ಲಿ ವಾಸವಾಗಿದ್ದು, ಈ ನಿವೇಶಗಳು ಅರಣ್ಯ ಇಲಾಖೆಗೆ ಸೇರಿದ್ದು ಎಂಬುದರ ಬಗ್ಗೆ ತಕಾರಾರು ಇರುವುದರಿಂದ ಇವರಿಗೆ ಹಕ್ಕುಪತ್ರವೂ ದೊರೆತಿಲ್ಲ. ಆದರೆ, ಶೌಚಾಲಯ ನಿರ್ಮಿಸಿಕೊಳ್ಳಲು ಅನುದಾನ ಪಡೆಯಬೇಕಾದರೆ ನಿವೇಶನದ ಹಕ್ಕುಪತ್ರ ಅವಶ್ಯಕವಾಗಿದೆ.

ಶೌಚಾಲಯ ನಿರ್ಮಿಸಿಕೊಳ್ಳಲು ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 15ಸಾವಿರ ರೂ., ಇತರೇ ಬಿಪಿಎಲ್‌ ಕುಟುಂಬದವರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತದೆ. ನಿವೇಶನದ ದಾಖಲೆಗಳು ಇಲ್ಲದ ಕಾರಣ ಈ ಸೌಲಭ್ಯಗಳನ್ನು ಪಡೆಯಲು ಕಾಲೋನಿ ನಿವಾಸಿಗಳಿಗೆ ಸಾಧ್ಯವಾಗುತ್ತಿಲ್ಲ.

ಶೌಚಾಲಯಗಳು ಇಲ್ಲದೇ ಮನೆಯವರು ಬಹಿರ್ದೆಸೆಗಾಗಿ ಕಾಲೋನಿಯ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಪ್ಲಾಂಟೇಷನ್‌ ಹಾಗೂ ಕೆರೆಯನ್ನು ಅವಲಂಬಿಸಿದ್ದಾರೆ. ಬಹಿರ್ದೆಸೆಗೆ ಹೋದಾಗ ಸ್ಥಳೀಯ ನಿವಾಸಿಗಳು ಇವರೊಂದಿಗೆ ನಿತ್ಯವೂ ಜಗಳವಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಬಹಿರ್ದೆಸೆಗೆ ಹೋಗುವ ಅರಣ್ಯ ಇಲಾಖೆಗೆ ಸೇರಿದ ಹಾಗೂ ಕೆರೆಯ ಸಮೀಪದ ವಾತಾವರಣದಲ್ಲಿ ಅನೈರ್ಮಲ್ಯವುಂಟಾಗಿ ದುರ್ವಾಸನೆ ಬೀರುತ್ತಿದೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದರು.

ನಾವು ಹಲವು ವರ್ಷಗಳಿಂದ ಗುಡಿಸಲು ಮನೆಯಲ್ಲಿಯೇ ವಾಸವಾಗಿದ್ದು, ಶೌಚಾಲಯ ಇಲ್ಲ, ಬಹಿರ್ದೆಸೆಗೆ ಪ್ಲಾಂಟೇಷನ್‌ ಅಥವಾ ಗದ್ದೆಯ ವ್ಯಾಪ್ತಿಯಲ್ಲಿರುವ ಕೆರೆಯ ಸಮೀಪ ಹೋಗಬೇಕಾಗಿದೆ. ವಯಸ್ಸಾದ ಹೆಣ್ಣುಮಕ್ಕಳು ಇದ್ದಾರೆ. ಬಹಿರ್ದೆಸೆಗೆ ಸಾಕಷ್ಟು ದೂರ ಹೋಗಬೇಕು. ನಮ್ಮ ಸಮಸ್ಯೆಯನ್ನು ಯಾರಿಗೆ ಹೇಳಿದರೂ ಪ್ರಯೋಜವಾಗಿಲ್ಲ. ಶೌಚಾಲಯ ನಿರ್ಮಿಸಿಕೊಟ್ಟರೆ ಅನುಕೂಲವಾಗುತ್ತದೆ ಎಂದು ಕಾಲೋನಿ ನಿವಾಸಿ ಗಂಗಮ್ಮ ಸಮಸ್ಯೆಯ ಬಗ್ಗೆಅಲವತ್ತುಕೊಂಡರು.

ಗ್ರಾಮ ಪಂಚಾಯಿತಿಯವರು ನೀರಿನ ಕಂದಾಯ ವಸೂಲಿ ಮಾಡುತ್ತಾರೆ. ಮನೆಯ ಕಂದಾಯ ಕಟ್ಟಿಸಿಕೊಳ್ಳುವುದಿಲ್ಲ. ನಿವೇಶನದ ಸಮಸ್ಯೆ ನ್ಯಾಯಾಲಯದಲ್ಲಿರುವುದರಿಂದ ಅಲ್ಲಿ ಬಗೆಹರಿದ ಮೇಲೆ ಹಕ್ಕು ಪತ್ರ ನೀಡುತ್ತೇವೆ ಎಂಬ ಉತ್ತರ ನೀಡುತ್ತಾರೆ. ಮಕ್ಕಳು ತುರ್ತಾಗಿ ಬಹಿರ್ದೆಸೆಗೆ ಹೋಗಬೇಕಾದರೂ ಕಾಡಿಗೆ ಹೋಗಬೇಕು. ಸಂಜೆ ವೇಳೆ ಸಾಕಷ್ಟು ಸಮಸ್ಯೆಯಾಗಲಿದೆ.

ಶೌಚಾಲಯವನ್ನು ನಿರ್ಮಿಸಿಕೊಳ್ಳಲು ಅವಕಾಶ ನೀಡುತ್ತಿಲ್ಲ. ನಿವೇಶನದ ಹಕ್ಕು ಪತ್ರವಿಲ್ಲದೆ ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶವಿಲ್ಲ. ಬಹಿರ್ದೆಸೆಗೆ ಹೋದಾಗ ಸ್ಥಳೀಯ ನಿವಾಸಿಗಳೊಂದಿಗೆ ಜಗಳವಾಗಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತಾಗಿದೆ ಎಂದು ಕಾಲೋನಿ ನಿವಾಸಿಗಳಾದ ಯೋಗೀಶ್‌ ಮತ್ತು ಸಂಜೀವಪ್ಪ ತಿಳಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.