ನೆರೆಯೊಂದಿಗೆ ಮಳೆಹಾನಿ ಪ್ರಸ್ತಾವನೆ ಸಲ್ಲಿಸಿ

30.41 ಕೋಟಿ ಮಳೆಹಾನಿ | ಮೂಲ ಸೌಕರ್ಯ ಒದಗಿಸಲು ಆದ್ಯತೆ | 65 ಶಾಲೆಗಳ 167 ಕೊಠಡಿಗಳಿಗೆ ಹಾನಿ

Team Udayavani, Oct 17, 2019, 2:50 PM IST

17-October-15

ಧಾರವಾಡ: ನೆರೆ ಹಾವಳಿಯ ಹಾನಿ ವರದಿ ಜೊತೆಗೆ ಜಿಲ್ಲೆಯಲ್ಲಿ ಮತ್ತೆ ಕಳೆದ ಒಂದು ವಾರದಲ್ಲಿ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ, ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಪಂ ಅಧ್ಯಕ್ಷೆ, ಉಪಾಧ್ಯಕ್ಷ ಮತ್ತು ಸಿಇಒ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಈ ಹಿಂದೆ ಆಗಿರುವ ಮಳೆಹಾನಿಯ ಜೊತೆಗೆ ಈಗ ಕಳೆದ ಐದು ದಿನಗಳಿಂದ ಆಗುತ್ತಿರುವ ಮಳೆಯಿಂದ ರಸ್ತೆ, ಸೇತುವೆ, ಬೆಳೆ ಸೇರಿದಂತೆ ಆಗಿರುವ ಹಾನಿಯ ಬಗ್ಗೆಯೂ ಪರಿಶೀಲನೆ ಕೈಗೊಂಡು ವರದಿ ಸಿದ್ಧಪಡಿಸುವಂತೆ ಇಲಾಖಾವಾರು  ಅಧಿಕಾರಿಗಳಿಗೆ ಜಿಪಂ ಸಿಇಒ ಡಾ| ಸತೀಶ ಅವರ ಮೂಲಕ ಸೂಚನೆ ಕೊಡಲಾಯಿತು.

ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟು ಹೋಗಿದ್ದು, ಕೆಲವೊಂದಿಷ್ಟು ಕಡೆ ಸೇತುವೆಗಳು ಕುಸಿದು ಸಂಚಾರಗಳೇ ಬಂದ್‌ ಆಗಿವೆ. ನವಲಗುಂದ ತಾಲೂಕಿನಲ್ಲಿ ಸಾರಿಗೆ ಸಂಚಾರಕ್ಕೆ ತುಂಬಾ ಅಡಚಣೆಗಳು ಆಗಿದ್ದು, ಯಮನೂರ ಸೇರಿದಂತೆ ಕೆಲ ಗ್ರಾಮಗಳಿಗೆ ಸಾರಿಗೆ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ಮೂಲ ಸೌಕರ್ಯಗಳ ಮರು ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

30 ಕೋಟಿ ರೂ. ಹಾನಿ: ಅತಿಯಾದ ಮಳೆಯಿಂದಾಗಿ ಜಿಪಂ ವ್ಯಾಪ್ತಿಯ ರಸ್ತೆ, ಸಣ್ಣ ಸೇತುವೆ ಹಾಗೂ ಕೆರೆಗಳು ಸೇರಿದಂತೆ ಒಟ್ಟಾರೆ 30.41 ಕೋಟಿ ಹಾನಿಯಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಆದರೆ, ಹಣ ಇನ್ನೂ ಬಿಡುಗಡೆ ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿ ಮನೋಲಕುಮಾರ ಸಭೆಗೆ ಮಾಹಿತಿ ನೀಡಿದರು.

ಅತಿವೃಷ್ಟಿಯಿಂದಾಗಿ  ಹಾನಿಯಾಗಿರುವ ರಸ್ತೆ-ಸೇತುವೆ ಸೇರಿದಂತೆ ಇತರೆ ಪ್ರಕೃತಿ ವಿಕೋಪಕ್ಕಾಗಿ 50 ಕೋಟಿ ಪರಿಹಾರ ಹಣ ಬಿಡುಗಡೆ ಆಗಿದೆ ಎಂದು ಸ್ವತಃ ಜಿಲ್ಲಾಧಿಕಾರಿಗಳೇ ಮಾಧ್ಯಮ ಹೇಳಿಕೆ ನೀಡಿದ್ದಾರೆ. ನೀವು ಹಣ ಬಿಡುಗಡೆ ಆಗಿಲ್ಲ ಎನ್ನುತ್ತೀರಿ ಎಂದು ಉಪಾಧ್ಯಕ್ಷ ಶಿವಾನಂದ ಕರಿಗಾರ ಪ್ರಶ್ನಿಸಿದರು.

ಮೊದಲ ಹಂತದಲ್ಲಿ ನಡೆದ ಸಮೀಕ್ಷೆ ಜೊತೆಗೆ ಮತ್ತೂಮ್ಮೆ ಸಮೀಕ್ಷೆ ಮಾಡಿ ಆಗಿರುವ ಹಾನಿಯ ಬಗ್ಗೆ ಪಕ್ಕಾ ವರದಿ ನೀಡಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ಮೊದಲ ಹಂತದಲ್ಲಿ ಬಿಡುಗಡೆ ಅನುದಾನದಲ್ಲಿ ಶಾಲೆ ಹಾಗೂ ಅಂಗನವಾಡಿಗಳಿಗೆ ನೀಡಲಾಗಿದೆ. ನಂತರದಲ್ಲಿ ತಮಗೆ ಅನುದಾನ ಬಿಡುಗಡೆ ಆಗಲಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

167 ಕೊಠಡಿ ಹಾನಿ: ಮಳೆಗೆ 65 ಶಾಲೆಗಳ 167 ಕೊಠಡಿಗಳು ಹಾನಿಯಾಗಿದ್ದು, 17.53 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಬೇಕಿದೆ. ಈ ಕುರಿತು ಕ್ರಿಯಾಯೋಜನೆ ಸಹ ಸಲ್ಲಿಸಲಾಗಿದೆ. ಅಲ್ಲದೇ, ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಪೂರಕವಾಗಿ ಅಕ್ಟೋಬರ್‌ ತಿಂಗಳಲ್ಲಿಯ ಅ.5ರಿಂದ 20ರ ವರೆಗೆ ಪ್ರತಿ ಶಾಲೆಯಲ್ಲೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಷಯಗಳ ಪುನರಾವರ್ತನೆ ಮಾಡಲಾಗುತ್ತಿದೆ.

ಪ್ರತಿದಿನ ಶಿಕ್ಷಕರೊಬ್ಬರು ತರಗತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಮಾಹಿತಿ ನೀಡಿದರು.

ಪ್ರತಿಭಾ ಕಾರಂಜಿ ಸಂದರ್ಭದಲ್ಲಿ ಶಾಲಾ ಮಕ್ಕಳನ್ನು ಬಸ್‌ ಅಥವಾ ಇನ್ನಾವುದೇ ಪ್ರಯಾಣಿಕರ ವಾಹನದಲ್ಲಿ ಕರೆದೊಯ್ಯುವ ಬದಲು ಟ್ರ್ಯಾಕ್ಟರ್‌ನಲ್ಲಿ ಕರೆದೊಯ್ಯಲಾಗಿದೆ ಎಂದು ಡಿಡಿಪಿಐ ಅವರನ್ನು ಜಿಪಂ ಅಧ್ಯಕ್ಷರು ಪ್ರಶ್ನಿಸಿದರು.

ಒಂದು ವೇಳೆ ಈ ರೀತಿ ಘಟನೆ ನಡೆದಿದ್ದರೆ ತಕ್ಷಣ ಅಂತಹ ಶಿಕ್ಷರರ ವಿರುದ್ಧ ಕ್ರಮ ಕೈಗೊಳ್ಳಲು ಡಿಡಿಪಿಐ ಅವರಿಗೆ ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಸೂಚಿಸಿದರು.

ಕೃಷಿ ಹೊಂಡಕ್ಕಿಲ್ಲ 12 ಕೋಟಿ ರೂ. ಬಾಕಿ: ಈ ಬಾರಿ ಎಷ್ಟು ಜನ ರೈತರಿಗೆ ಕೃಷಿ ಹೊಂಡಗಳನ್ನು ನೀಡಿದ್ದೀರಿ ಎಂದು ಜಿಪಂ ಉಪಾಧ್ಯಕ್ಷರು ಕೃಷಿ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಇಲಾಖೆಯ ಜಂಟಿ ನಿರ್ದೇಶಕ ಎಸ್‌.ಎಸ್‌. ಅಬೀದ್‌ ಅವರು, ಕಳೆದ ಬಾರಿ ಗರಿಷ್ಠ ಮಟ್ಟದಲ್ಲಿ ರೈತರು ಕೃಷಿ ಹೊಂಡಗಳನ್ನು ಸ್ವತಃ ರಚಿಸಿಕೊಂಡಿದ್ದಾರೆ. ಆದ್ದರಿಂದ ಆ ರೈತರಿಗೆ ಇನ್ನೂ ಹಣ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 12 ಕೋಟಿ ಬಾಕಿ ಹಣವನ್ನು ಕೃಷಿ ಹೊಂಡ ಮಾಡಿಕೊಂಡಿರುವ ರೈತರಿಗೆ ಪಾವತಿಸಬೇಕಿರುವ ಕಾರಣ ಈ ಬಾರಿ ಕೃಷಿ ಹೊಂಡದ ಗುರಿಯೇ ಇಟ್ಟುಕೊಂಡಿಲ್ಲ ಎಂದು ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ಎಸ್‌.ಜಿ. ಕೊರವರ ಮಾತನಾಡಿ, ಗ್ರಾಮೀಣ ಉದ್ಯೋಗ ಯೋಜನೆಯಡಿ ಗ್ರಾಮೀಣ ಬಡತನ ನಿವಾರಣೆ ಕಾರ್ಯಕ್ರಮದಲ್ಲಿ ಸರ್ಕಾರದಿಂದ ವಾರ್ಷಿಕ ಗುರಿ ನಿಗದಿಪಡಿಸಿದ್ದು, ನರೇಗಾ ಕಾರ್ಯಕ್ರಮದಡಿ ಒಟ್ಟು 16,581 ಕಾಮಗಾರಿಗಳ ಗುರಿ ಹೊಂದಲಾಗಿದೆ.

ಇಲ್ಲಿಯವರೆಗೆ 5,412 ಕಾಮಗಾರಿಗಳನ್ನು ಪೂರ್ಣಗೊಳಿಸಿ ಸೆಪ್ಟೆಂಬರ್‌ ಅಂತ್ಯದವರೆಗೆ ಪ್ರಗತಿ ಸಾ ಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ| ರಾಮಚಂದ್ರ ಮಡಿವಾಳರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಯಶವಂತ್‌ ಮದೀನಕರ್‌ ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸೆಪ್ಟೆಂಬರ್‌ ಅಂತ್ಯದವರೆಗೆ ಆಗಿರುವ ಇಲಾಖಾವಾರು ಪ್ರಗತಿ ವಿವರಿಸಿದರು.

ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನಮ್ಮ ಪಾಟೀಲ, ಯೋಜನಾ ನಿರ್ದೇಶಕ ದೀಪಕ್‌ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.