ನೆರೆ ಸಂತ್ರಸ್ತರಿಂದ ಕಂದಾಯ ಸಚಿವರು ದೂರ ದೂರ

ಜಿಲ್ಲಾ ಉಸ್ತುವಾರಿ ಸಚಿವರಿಗೂ ಬೇಕಿಲ್ಲ ಸಂತ್ರಸ್ತರ ಉಸಾಬರಿ! ಸಿಎಂ ಬಂದರೂ ಬಾರದ ಸಚಿವ

Team Udayavani, Oct 17, 2019, 3:49 PM IST

Udayavani Kannada Newspaper

ಕೇಶವ ಆದಿ
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಈ ಬಾರಿಯ ಪ್ರಕೃತಿ ವಿಕೋಪ ನದಿ ತೀರದ ಜನರ ಬದುಕಿನ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಯ ಖಚಿತ ಲೆಕ್ಕ ಇನ್ನೂ ಸಿಗುತ್ತಿಲ್ಲ. ಆಘಾತಕಾರಿ ಸಂಗತಿ ಎಂದರೆ ರಾಜ್ಯದಲ್ಲಿ ಆಗಿರುವ ಒಟ್ಟಾರೆ ಹಾನಿಯಲ್ಲಿ ಶೇಕಡಾ 50 ಕ್ಕೂ ಅಧಿಕ ಪ್ರಮಾಣದ ಹಾನಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೇ ಆಗಿದೆ.

ರಾಜ್ಯ ಸರಕಾರ ಅಂಕಿ ಅಂಶಗಳೇ ಹೇಳುವಂತೆ ಅತಿಯಾದ ಮಳೆ ಹಾಗೂ ನದಿಗಳ ಪ್ರವಾಹದಿಂದ ಅತೀ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಅನುಭವಿಸಿರುವುದು ಬೆಳಗಾವಿ ಜಿಲ್ಲೆ. ಏಳು ನದಿಗಳ ಪ್ರವಾಹದಿಂದ ಜಿಲ್ಲೆಯಲ್ಲಿ 11 ಸಾವಿರ ಕೋಟಿ ರೂ.ಗಳಿಗೂ ಅಧಿಕ ಹಾನಿಯಾಗಿದೆ. ಸುಮಾರು 70 ಸಾವಿರ ಮನೆಗಳು ನೆಲಕಚ್ಚಿವೆ. ಅಸಂಖ್ಯಾತ ಕುಟುಂಬಗಳು ಬೀದಿಗೆ ಬಂದಿವೆ. ನೆರೆಯ ಹೊಡೆತಕ್ಕೆ ಕೃಷಿ ಕ್ಷೇತ್ರ ಸಂಪೂರ್ಣ ಮಲಗಿಕೊಂಡಿದೆ.

ಎಲ್ಲವನ್ನೂ ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳು ಸರಕಾರದ ನೆರವಿಗಾಗಿ ಅಂಗಲಾಚುತ್ತಿವೆ. ಸರಕಾರ ಈಗಾಗಲೇ ಪರಿಹಾರ ಬಿಡುಗಡೆ ಮಾಡಿದ್ದರೂ ಅದು ಎಲ್ಲರಿಗೂ ತಲುಪಿಲ್ಲ. ಹಾನಿಗೊಳಗಾದ ಮನೆಗಳ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ ಎಂಬ ದೂರುಗಳು ಅಲ್ಲಲ್ಲಿ ಕೇಳಿಬರುತ್ತಲೇ ಇವೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳಿಂದ ಬೆಳೆಹಾನಿ ಸಮೀಕ್ಷೆ ನಡೆದಿದ್ದರೂ ಅದರ ಬಗ್ಗೆಯೂ ರೈತ ಸಮುದಾಯದಿಂದ ಅಸಮಾಧಾನ ಕೇಳಿಬಂದಿದೆ.

ನೆರೆ ಸಂತ್ರಸ್ತರ ಸಂಕಷ್ಟ ಗಂಭೀರವಾಗಿದ್ದರೂ ಅದಕ್ಕೆ ಮುಖ್ಯವಾಗಿ ಸ್ಪಂದಿಸಬೇಕಾದ ಹಾಗೂ ಮಹತ್ವದ ಕಂದಾಯ ಖಾತೆ ನೋಡಿಕೊಳ್ಳುತ್ತಿರುವ ಆರ್‌. ಅಶೋಕ ನೆರೆ ಹಾವಳಿ, ಸಂತ್ರಸ್ತರು ಹಾಗೂ ನನಗೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ನಿರ್ಲಿಪ್ತರಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ನೆರೆ ಸಂಕಷ್ಟ ಬಂದು ಎರಡು ತಿಂಗಳ ಮೇಲಾಯಿತು. ಕಂದಾಯ ಸಚಿವರು ಇದುವರೆಗೆ ಯಾವುದೇ ಜಿಲ್ಲೆಗೆ ಭೇಟಿ ಮಾಡಿ ಹಾನಿಯ ಬಗ್ಗೆ ಪರಿಶೀಲನೆ ಮಾಡದೇ ಇರುವುದು ಅಚ್ಚರಿಯ ಜೊತೆಗೆ ಅಘಾತ ಉಂಟುಮಾಡಿದೆ. ಜಿಲ್ಲೆಯ ಶಾಸಕರು ಕಂದಾಯ ಸಚಿವರ ಈ ನಿರ್ಲಕ್ಷ್ಯ  ಧೋರಣೆಯ ಬಗ್ಗೆ ನೇರ ಆರೋಪ ಮಾಡಿದ್ದಲ್ಲದೇ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪ ಮಾಡಿದರೂ ಕಂದಾಯ ಸಚಿವರು ಮಾತ್ರ ನೆರೆ ಪೀಡಿತ ಪ್ರದೇಶಗಳ ಕಡೆಗೆ ಹೋಗುವ ಮನಸ್ಸು ಮಾಡಿಲ್ಲ.

ನೆರೆ ಹಾವಳಿಯಿಂದ ಅಪಾರ ಪ್ರಮಾಣದಲ್ಲಿ ಹಾನಿ ಅನುಭವಿಸಿರುವ ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಾಲ್ಕು ಬಾರಿ ಭೇಟಿ ನೀಡಿ ಸಂತ್ರಸ್ತರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ಗೋಕಾಕ, ಮೂಡಲಗಿ, ರಾಮದುರ್ಗ ಅಥಣಿ, ಚಿಕ್ಕೋಡಿ, ರಾಯಬಾಗ ತಾಲೂಕುಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದರು.

ಆದರೆ ಕಂದಾಯ ಸಚಿವರು ಇದಕ್ಕೂ ತಮಗೂ ಸಂಬಂಧ ಇಲ್ಲ ಎನ್ನುವಂತೆ ಕೇವಲ ಬೆಂಗಳೂರಿಗೆ ಸೀಮಿತವಾಗಿ ಉಳಿದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ನೆರೆ ಸಂತ್ರಸ್ತರು ಬಹಳ ಕಷ್ಟದಲ್ಲಿದ್ದಾರೆ. ಅವರಿಗೆ ಶಾತ್ವತ ಪರಿಹಾರಕ್ಕಿಂತ ಈಗ ಮೊದಲು ತಾತ್ಕಾಲಿಕ ಶೆಡ್‌ಗಳ ನಿರ್ಮಾಣ ಆಗಬೇಕಿದೆ. ಇದರಲ್ಲಿ ಕಂದಾಯ ಇಲಾಖೆಯ ಪಾತ್ರವೇ ದೊಡ್ಡದು. ಅವರೇ ಹಣ ಬಿಡುಗಡೆ ಮಾಡಬೇಕು. ಆದರೆ ಕಂದಾಯ ಸಚಿವರು ಒಮ್ಮೆಯೂ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡದೇ ಅಧಿಕಾರಿಗಳು ನೀಡುವ ಅಂಕಿ ಅಂಶಗಳ ಆಧಾರದ ಮೇಲೆ ಬೆಂಗಳೂರಿನಿಂದಲೇ ಪರಿಹಾರದ ಹೇಳಿಕೆ ನೀಡುತ್ತಿದ್ದಾರೆ. ಇದು ವಾಸ್ತವ ಸ್ಥಿತಿಗೆ ಬಹಳ ದೂರವಾಗಿದೆ. ಕಂದಾಯ ಸಚಿವರಿಗೆ ಕಾಳಜಿ ಇದ್ದರೆ ಪ್ರತಿ ತಾಲೂಕಿಗೆ ಭೇಟಿ ನೀಡಬೇಕು. ಅಲ್ಲಿಯೇ ವಾಸ್ತವ್ಯ ಮಾಡಿ ನಿಜಸ್ಥಿತಿ ತಿಳಿದುಕೊಂಡು ಪರಿಹಾರ ಕೊಡಬೇಕು ಎಂಬುದು ಸಂತ್ರಸ್ತರ ಅಳಲು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.