ಬಿಡಾಡಿ ದನಗಳ ಹಾವಳಿಗೆ ಬ್ರೇಕ್ ಹಾಕಿ
ಕಂಡು ಕಾಣದಂತೆ ಜಾಣಕುರುಡು ಪ್ರದರ್ಶಿಸುತ್ತಿರುವ ಪುರಸಭೆ: ಆಕ್ರೋಶ
Team Udayavani, Oct 17, 2019, 6:00 PM IST
ತಿರುಮಲೆ ಶ್ರೀನಿವಾಸ್
ಮಾಗಡಿ: ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು, ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಸಂಚರಿಸಲು ತೀವ್ರ ತೊಂದರೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪಟ್ಟಣದ ಮುಖ್ಯರಸ್ತೆ ಹಾಗೂ ಅಲ್ಲಲ್ಲಿ ವೃತ್ತಗಳ ಬಳಿ ರಾಶಿ ರಾಶಿ ಕಸಗಳ ಮಧ್ಯೆ ಆಹಾರ ಹರಸಿ ಬರುವ ಬಿಡಾಡಿ ದನಗಳು ರಸ್ತೆ ಮಧ್ಯೆಯೇ ಅಡ್ಡಾದಿಡ್ಡಿಯಾಗಿ ಓಡಾಡುತ್ತಿರುತ್ತವೆ. ಇದರಿಂದ ವಾಹನ ಸವಾರರಿಗೆ ಅಡೆತಡೆಯಾಗುತ್ತಿದೆ. ವಾಹನ ಸವಾರರು ದನಗಳ ಮಧ್ಯೆ ಸಂಚರಿಸಲು ಹೋಗಿ ದನಗಳಿಗೆ ತಾಕಿ ಪಘಾತ ಸಂಭವಿಸಿರುವ ಅನೇಕ ಘಟನೆಗಳು ನಡೆದಿವೆ.
ಅನೇಕ ಅಪಘಾತ ಸಂಭವಿಸಿವೆ: ಅದರಲ್ಲೂ ವಯೋ ವೃದ್ಧರು, ಯವತಿಯರು, ಮಕ್ಕಳನ್ನು ಕಂಡೊಡನೆ ಬಿಡಾಡಿ ದನಗಳು ಮೇಲೆ ಎರಗಲು ಯತ್ನಿಸುತ್ತವೆ.
ದನಗಳಿಂದ ತಪ್ಪಿಸಿಕೊಳ್ಳಲು ಭಯದಿಂದಲೇ ಕಾಲಿಗೆ ಬುದ್ಧಿ ಹೇಳುತ್ತಾರೆ. ಕೆಲವರು ವಾಹನಗಳಿಗೆ ಅಡ್ಡ ಬರುವ ದನಗಳನ್ನು ರಕ್ಷಿಸಲು ಹೋಗಿ ಎದುರಿಗೆ ಬರುವ ವಾಹನಕ್ಕೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ್ದಾರೆ.
ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ: ದೊಡ್ಡ ವಾಹನಗಳು ಬಿಡಾಡಿ ದನಗಳಿಗೆ ತಾಕಿದ್ದರಿಂದ ದನಗಳು ಸಹ ಗಾಯಗೊಳ್ಳುತ್ತಿವೆ. ಎಷ್ಟೋ ದನಗಳು ಮೃತಪಟ್ಟಿರುವ ಉದಾಹರಣೆಗಳಿವೆ. ಹೀಗಿರುವಾಗ ಪುರಸಭೆ ಅಧಿಕಾರಿಗಳಾಗಲಿ ಅಥವಾ ಗೋ ಸಂರಕ್ಷಣೆ ಪದಾಧಿಕಾರಿಗಳಾಗಲಿ ಗೋವುಗಳನ್ನು ಬೇರೆಡೆ ಬಿಡದೆ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಸಾರ್ವಜನಿಕರಲ್ಲಿ ಬೇಸರ ತಂದಿದೆ.
ಅಳಲು ತೋಡಿಕೊಂಡ ನಾಗರಿಕರು: ಈ ಬಗ್ಗೆ ಉದಯವಾಣಿಯೊಂದಿಗೆ ಸ್ಥಳೀಯರಾದ ನರಸಿಂಹಯ್ಯ ಮಾತನಾಡಿ, ಪಟ್ಟಣದ ಹೃದಯ ಭಾಗವೇ ಆಗಿರುವ ಕೆಂಪೇಗೌಡ ವೃತ್ತದ ಬಳಿಯೇ ಕಸದ ರಾಶಿ ಬಿದ್ದಿರುತ್ತದೆ. ಅದೇ ರೀತಿ ಬಿಕೆ ರಸ್ತೆ, ಕಲ್ಯಾಗೇಟ್, ತಿರುಮಲೆ ಮುಖ್ಯರಸ್ತೆ ಹೀಗೆ ಕಸದ ರಾಶಿ ಮುಂದೆ ಬಿಡಾಡಿ ದನಗಳ ಹಿಂಡು ಹಿಂಡಾಗಿ ನಿಂತು ಕಸದ ರಾಶಿಯಲ್ಲಿ ಆಹಾರ ಹುಡುಕಿ ತಿಂದು ರಸ್ತೆ ಮಧ್ಯೆಯೇ ಮಲಗಿರುತ್ತವೆ. ಕೆಲವು ಅಡ್ಡಾಡುತ್ತಿರುತ್ತವೆ.
ಪುರಸಭೆ ಅಧಿಕಾರಿಗಳು ಬಿಡಾಡಿ ದನಗಳ ವಾರಸುದಾರರನ್ನು ಪತ್ತೆ ಮಾಡಿ ಅವರಿಗೆ ರಸ್ತೆ ಬಿಡದಂತೆ ತಿಳಿವಳಿಕೆ ನೀಡಬೇಕು. ಇಲ್ಲದಿದ್ದರೆ ಕನಿಷ್ಠ ಪಕ್ಷ ಗೋಶಾಲೆಗೆ ಬಿಡುವ ಪ್ರಾಮಾಣಿಕ ಪ್ರಯತ್ನ ವಾದರೂ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?