ಕಾಲಮಿತಿಯೊಳಗೆ ಸಾಲ ಮರುಪಾವತಿಸಿ: ಚಪ್ಪರದಳ್ಳಿ
Team Udayavani, Oct 18, 2019, 12:54 PM IST
ಹಿರೇಕೆರೂರ: ಬ್ಯಾಂಕ್ಗಳು ನೀಡುವ ಸಾಲ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗುವ ಜತಗೆ ಪಡೆದ ಸಾಲವನ್ನು ಕಾಲಮಿತಿಯಲ್ಲಿ ಮರುಪಾವತಿ ಮಾಡಬೇಕು ಎಂದು ಧಾರವಾಡ ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಳ್ಳಿ ಹೇಳಿದರು.
ರಟ್ಟಿಹಳ್ಳಿಯ ಕೆಸಿಸಿ ಬ್ಯಾಂಕ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಮಾರುತಿ ಮಹಿಳಾ ಸ್ವಸಹಾಯ ಸಂಘ ಮತ್ತು ಬಸವೇಶ್ವರ ಮಹಿಳಾ ಸ್ವಸಹಾಯ ಸಂಘಕ್ಕೆ ಮಂಜೂರಾದ ತಲಾ 5 ಲಕ್ಷ ರೂ. ಮೊತ್ತದ ಸಾಲದ ಚೆಕ್ಗಳನ್ನು ವಿತರಿಸಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕ ಪ್ರಗತಿಗೆ ಪೂರಕ ಚಟುವಟಿಕೆಗಳನ್ನು ಕೈಗೊಳ್ಳಲು ಬ್ಯಾಂಕಿನಿಂದ ಸಾಲ ಸೌಲಭ್ಯ ನೀಡುತ್ತಿದ್ದು, ಪಡೆದ ಸಾಲವನ್ನು ವ್ಯರ್ಥ ಖರ್ಚು ಮಾಡದೆ, ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಪಡೆದ ಸಾಲ ಸಮಯಕ್ಕೆ ಸರಿಯಾಗಿ ಮರು ಪಾವತಿ ಮಾಡಿದರೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸೌಲಭ್ಯ ಒದಗಿಸಿಕೊಡಲಾಗುತ್ತದೆ ಎಂದು ಹೇಳಿದರು.
ಶಾಖಾ ವ್ಯವಸ್ಥಾಪಕ ಎ.ಸಿ.ಪಾಟೀಲ, ಕೆಸಿಸಿ ಬ್ಯಾಂಕ್ ನಿರೀಕ್ಷಕ ಕೆ.ಆರ್.ಹುಲ್ಲತ್ತಿ, ಎಸ್.ಬಿ.ಪಾಟೀಲ, ಎಸ್.ಎನ್.ನಾಡರ, ಎಸ್.ಎಂ.ರೋತಿ, ಸಿ.ಎಸ್.ಗುರಪ್ಪನವರ, ಶ್ವೇತಾ ಮರ್ಕಳ್ಳಿ, ಸಂಘದ ಪ್ರತಿನಿಧಿ ಬಸಮ್ಮ ಗೌಡರ, ಗಿರಿಜಕ್ಕ ಬಣಕಾರ, ಗೀತಾ ಬಣಕಾರ, ಮಲ್ಲಮ್ಮ ಬಣಕಾರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ