ಉತ್ತರಪ್ರದೇಶ; ಗಂಟಲು ಸೀಳಿ ಹಿಂದೂ ಸಮಾಜ್ ಪಕ್ಷದ ಮುಖಂಡ ತಿವಾರಿ ಹತ್ಯೆ
Team Udayavani, Oct 18, 2019, 3:51 PM IST
ಲಕ್ನೋ:ಅಪರಿಚಿತ ವ್ಯಕ್ತಿಗಳು ಹಾಡಹಗಲೇ ಹಿಂದೂ ಸಮಾಜ್ ಪಕ್ಷದ ಮುಖಂಡ ಕಮಲೇಶ್ ತಿವಾರಿಯ ಗುಂಡು ಹಾರಿಸಿ, ನಂತರ ಕತ್ತನ್ನು ಸೀಳಿ ಆರೋಪಿಗಳು ಓಡಿಹೋಗಿರುವ ಘಟನೆ ಲಕ್ನೋದಲ್ಲಿ ಶುಕ್ರವಾರ ನಡೆದಿದೆ.
ಲಕ್ನೋದ ಖುರ್ಷಿದ್ ಬಾಗ್ ನಲ್ಲಿರುವ ಹಿಂದೂ ಸಮಾಜ್ ಪಕ್ಷದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಕೋರರು ಕಚೇರಿಗೆ ಬಂದು ಕೆಲವು ಮಾತುಕತೆ ನಂತರ ಟೀ ಕುಡಿದು ಹರಿತವಾದ ಆಯುಧದಿಂದ ಕತ್ತು ಸೀಳಿ, ಕಂಟ್ರಿಮೇಡ್ ಪಿಸ್ತೂಲ್ ನಿಂದ ಗುಂಡು ಹಾರಿಸಿ ಓಡಿ ಹೋಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಿವಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ತಿವಾರಿ ಮೊದಲು ಹಿಂದೂ ಮಹಾಸಭಾದಲ್ಲಿದ್ದು, ನಂತರ ಹಿಂದೂ ಸಮಾಜ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. 2015ರಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿವಾದಿತ ಹೇಳಿಕೆ ನೀಡಿದ್ದು, ಉತ್ತರಪ್ರದೇಶ ಪೊಲೀಸರು ತಿವಾರಿ ವಿರುದ್ಧ ಎನ್ ಎಸ್ ಎ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದರು.
ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ತಿವಾರಿ ಮೇಲೆ ಹಾಕಲಾಗಿದ್ದ ಎನ್ ಎಸ್ ಜಿ ಆರೋಪವನ್ನು ವಜಾಗೊಳಿಸಿ ಜಾಮೀನು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ