ಕೇರಳ ಮಾದರಿ ಬೆಂಬಲ ಬೆಲೆಗೆ ಯತ್ನ
ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಡಾ| ಕೆ.ಎನ್. ರಾಘವನ್
Team Udayavani, Oct 19, 2019, 4:00 AM IST
ಮಂಗಳೂರು: ಕೇರಳದಂತೆ ಕರ್ನಾಟಕದಲ್ಲಿಯೂ ರಬ್ಬರ್ ಬೆಳೆಗಾರರಿಗೆ ಕೆ.ಜಿ.ಗೆ 150 ರೂ. ಬೆಂಬಲ ಬೆಲೆ ನೀಡಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೇಂದ್ರ ರಬ್ಬರ್ ಮಂಡಳಿ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಕೆ.ಎನ್. ರಾಘವನ್ ಹೇಳಿದ್ದಾರೆ.
ಅಖೀಲ ಕರ್ನಾಟಕ ರಬ್ಬರ್ ಬೆಳೆಗಾರರ ಸಂಘವು ಉಜಿರೆ, ಗುತ್ತಿಗಾರು, ಪುತ್ತೂರಿನ ರಬ್ಬರ್ ಉತ್ಪಾದಕರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘಗಳು ಹಾಗೂ ರಬ್ಬರ್ ಮಂಡಳಿ ಸಹಭಾಗಿತ್ವದಲ್ಲಿ ಶುಕ್ರವಾರ ಆಯೋಜಿಸಿದ್ದ ಬೆಳೆಗಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂತಾರಾಷ್ಟ್ರೀಯ ಆರ್ಥಿಕತೆಯ ಪ್ರಭಾವದಿಂದ ನಮ್ಮ ದೇಶದಲ್ಲಿಯೂ ಪ್ರಸ್ತುತ ರಬ್ಬರ್ ಬೆಲೆ ಕುಸಿದಿದೆ. ಇದು ಸಹಜವಾಗಿದ್ದು, ಬೆಳೆಗಾರರು ಆತಂಕ ಗೊಳ್ಳುವ ಅಗತ್ಯವಿಲ್ಲ ಎಂದರು.
ರಬ್ಬರ್ ಕೊರತೆ
ರಬ್ಬರ್ನ ಬೆಲೆ ಕುಸಿದಿದೆ ಎಂಬ ಕಾರಣಕ್ಕೆ ಟ್ಯಾಪಿಂಗ್ ಮಾಡದೆ ಇರುವುದು ಸರಿಯಲ್ಲ. ವಾರಕ್ಕೊಮ್ಮೆ ಟ್ಯಾಪಿಂಗ್ನಿಂದ ಮರಕ್ಕೂ ಒಳ್ಳೆಯದು. ಕಳೆದ ವರ್ಷ ದೇಶದಲ್ಲಿ 12.10 ಲಕ್ಷ ಟನ್ ರಬ್ಬರ್ಗೆ ಬೇಡಿಕೆ ಇತ್ತು. ಆದರೆ ಸುಮಾರು 6.15 ಲಕ್ಷ ಟನ್ ಮಾತ್ರ ಪೂರೈಕೆಯಾಗಿತ್ತು. ಉತ್ಪಾದನೆ ಹೆಚ್ಚಳ, ವೆಚ್ಚ ಕಡಿತಕ್ಕೆ ಗಮನ ನೀಡಬೇಕಾಗಿದೆ ಎಂದು ಹೇಳಿದರು.
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಈ ಭಾಗದ ಬೆಳೆಗಾರರಿಗೆ ಅನುಕೂಲವಾಗ ಬೇಕೆಂಬ ಉದ್ದೇಶ ದಿಂದ ಪಡುಬಿದ್ರಿಯಲ್ಲಿ ಟಯರ್ ಕಂಪೆನಿ ಆರಂಭಗೊಳ್ಳಲಿದೆ ಎಂದರು.
ಜಂಟಿ ರಬ್ಬರ್ ಉತ್ಪಾದನ ಆಯುಕ್ತ ಸಾಬು, ರಬ್ಬರ್ ಮಂಡಳಿಯ ಡಿಡಿಪಿ ಆ್ಯಂಡ್ ಪಿಆರ್ ಎಂ.ಜಿ. ಸತೀಶ್ಚಂದ್ರನ್ ನಾಯರ್, ಉಜಿರೆ ಆರ್ಜಿಎಂಪಿಸಿ ಎಸ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಾಂಞಗಾಡ್ ರಬ್ಬರ್ನ ವ್ಯವಸ್ಥಾಪಕ ನಿರ್ದೇಶಕ ಪವಿತ್ರನ್ ನಂಬಿಯಾರ್, ರಬ್ಬರ್ ಮಂಡಳಿ ಅಭಿವೃದ್ಧಿ ಅಧಿಕಾರಿ ಎಸ್. ಬಾಲಕೃಷ್ಣ ಉಪಸ್ಥಿತರಿದ್ದರು.
“ಕೃಪಾ’ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಪ್ರಸ್ತಾವನೆಗೈದರು.ಉಪಾಧ್ಯಕ್ಷ ಸವಣೂರು ಸೀತಾರಾಮ ರೈ ಅವರು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ
Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!
Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ
BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್ ಜಾಮ್
MUST WATCH
ಹೊಸ ಸೇರ್ಪಡೆ
ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ