ಮೆರವಣಿಗೆಯಲ್ಲಿ ಠಾಣೆಗೆ ಬಂದ ಪಿಎಸ್ ಐ: ಚರ್ಚೆಗೆ ಗ್ರಾಸವಾದ ಘಟನೆ
Team Udayavani, Oct 19, 2019, 10:35 AM IST
ವಿಜಯಪುರ: ವರ್ಗವಾಗಿ ಬಂದ ಪಿಎಸ್ ಐ ಮೆರವಣಿಗೆ ಮೂಲಕ ಠಾಣೆಗೆ ಕರೆತಂದು, ಮಹಿಳೆಯರು ಸಾಂಪ್ರದಾಯಿಕ ಆರತಿ ಎತ್ತಿ ಸನ್ಮಾನಿಸಿದ ಘಟನೆ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಜರುಗಿದೆ.
ಚಡಚಣ ಪೊಲೀಸ್ ಠಾಣೆಗೆ ಈ ಹಿಂದೆ ಇದೇ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದ ಮಹಾದೇವ ಯಲಿಗಾರ ಮತ್ತೆ ಚಡಚಣ ಠಾಣೆಗೆ ವರ್ಗವಾಗಿ ಬಂದಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಶಿಫಾರಸ್ಸಿನ ಮೇರೆಗೆ ಚಡಚಣ ಠಾಣೆಗೆ ವರ್ಗವಾಗಿ ಬಂದ ಪಿಎಸ್ ಐ ಮಹಾದೇವ ಯಲಿಗಾರ ಅವರನ್ನು ಚಡಚಣ ಪಟ್ಟಣದಲ್ಲಿ ಸ್ಥಳೀಯರು ಪ್ರವಾಸಿ ಮಂದಿರದಿಂದ ಮೆರವಣಿಗೆ ನಡೆಸಿ ಪೊಲೀಸ್ ಠಾಣೆಗೆ ಕರೆತಂದರು.
ಮೆರವಣಿಗೆಯಲ್ಲಿ ಠಾಣೆಗೆ ಕರೆತಂದ ಬಳಿಕ ಮಹಿಳೆಯರು ಸಾಂಪ್ರದಾಯಿಕ ಆರತಿ ಎತ್ತಿ, ತಿಲಕ ಇರಿಸಿದರು. ಗ್ರಾಮದ ಪ್ರಮುಖರು ಶಾಲು ಹೊದಿಸಿ, ಹೂಮಾಲೆ ಹಾಕಿ ಸನ್ಮಾನಿಸಿದ್ದಾರೆ.
ಜಿ.ಪಂ. ಮಾಜಿ ಉಪಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ ನೇತೃತ್ವದಲ್ಲಿ ನಡೆದ ಮೆರವಣಿಗೆಯ ಘಟನೆಗೆ ಜಿಲ್ಲೆಯಲ್ಲಿ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
MUST WATCH
ಹೊಸ ಸೇರ್ಪಡೆ
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ