ಉತ್ತರಪ್ರದೇಶದಲ್ಲಿ ಹಿಂದೂ ಮುಖಂಡನ ಹತ್ಯೆ ಕೇಸ್; ಮೌಲ್ವಿ ಸೇರಿ ಮೂವರ ಬಂಧನ
Team Udayavani, Oct 19, 2019, 10:50 AM IST
ಲಕ್ನೋ: ಹಿಂದೂ ಮಹಾಸಭಾದ ಮಾಜಿ ನಾಯಕ, ಉತ್ತರಪ್ರದೇಶ ಸ್ಥಳೀಯ ಪಕ್ಷದ ಹಿಂದೂ ಸಮಾಜ್ ಪಾರ್ಟಿಯ ಅಧ್ಯಕ್ಷ ಕಮಲೇಶ್ ತಿವಾರಿ(45ವರ್ಷ)ಯನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಮ್ಮಿ ಪಠಾಣ್, ಫೈಝಾನ್ ಪಠಾಣ್ ಮತ್ತು ಮೌಲ್ವಿ ಮೋಹ್ಸಿನ್ ಶೇಕ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಶೂಟರ್ ಗಳನ್ನು ಫರೀದ್ ಉದ್ ದೀನ್ ಶೇಕ್ ಮತ್ತು ಅಶ್ಪಾಕ್ ಶೇಕ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ತಿವಾರಿ ಹತ್ಯೆಯ ಬಗ್ಗೆ ತಪ್ಪೊಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ.
ಶುಕ್ರವಾರ ಮಧ್ಯಾಹ್ನ ಲಕ್ನೋದ ಖುರ್ಷಿದ್ ಬಾಗ್ ನಲ್ಲಿ ಹಿಂದೂ ಸಮಾಜ್ ಪಾರ್ಟಿಯ ಕಮಲೇಶ್ ತಿವಾರಿಯನ್ನು ಬರ್ಬರವಾಗಿ ಹತ್ಯೆಗೈಯಲಾಗಿತ್ತು.
ತಿವಾರಿ ಹತ್ಯೆ ಹೊಣೆ ಹೊತ್ತ ಅಲ್ ಹಿಂದ್ ಬ್ರಿಗೇಡ್?
ಕಮಲೇಶ್ ತಿವಾರಿ ಹತ್ಯೆಯ ಹೊಣೆಯನ್ನು ಅಲ್ ಹಿಂದ್ ಬ್ರಿಗೇಡ್ ಹೊತ್ತುಕೊಂಡಿದೆ. ಈ ಬಗ್ಗೆ ಇನ್ನಷ್ಟೇ ಖಚಿತಗೊಳ್ಳಬೇಕಾಗಿದೆ ಎಂದು ವರದಿ ವಿವರಿಸಿದೆ. ಇಸ್ಲಾಂ ಹಾಗೂ ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡುತ್ತಿದ್ದ ತಿವಾರಿಯನ್ನು ಹತ್ಯೆಗೈದಿರುವುದಾಗಿ ಎಲ್ಲೆಡೆ ಹರಿದಾಡುತ್ತಿರುವ ವಾಟ್ಸಪ್ ಸಂದೇಶದಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ