ಕನಕ ಭವನ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ: ಶ್ರೀ


Team Udayavani, Oct 19, 2019, 5:20 PM IST

19-October-22

ಚಿತ್ರದುರ್ಗ: ಮಧ್ಯ ಕರ್ನಾಟಕ ಚಿತ್ರದುರ್ಗದಲ್ಲಿ ಅತ್ಯಂತ ಸುಂದರವಾದ ಕನಕ ಭವನ ನಿರ್ಮಾಣ ಮಾಡಲು ಮುಂದಾಗಿದ್ದು, ಎಲ್ಲರೂ ಸಹಕಾರ ನೀಡಬೇಕು ಎಂದು ಕನಕ ಗುರುಪೀಠದ ಕೆಲ್ಲೋಡು ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಭಕ್ತರಲ್ಲಿ ಮನವಿ ಮಾಡಿದರು.

ನಗರದ ರಂಗಯ್ಯನ ಬಾಗಿಲು ಬಳಿ ಇರುವ ಕುರುಬರ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ಎಸ್‌ಜೆಎಂ ಕಾಲೇಜು ಹಿಂಭಾಗದ ದವಳಗಿರಿ ಬಡಾವಣೆಯಲ್ಲಿ ಅಂದಾಜು 6 ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗಲಿದ್ದು, ಈಗಾಗಲೇ ನಿವೇಶನ ಖರೀದಿ ಸಲಾಗಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆ, ತಾಲೂಕುಗಳಲ್ಲಿ ಈಗಾಗಲೇ ಭವನಗಳು ನಿರ್ಮಾಣವಾಗಿವೆ.

ಮಧ್ಯ ಕರ್ನಾಟಕ ಚಿತ್ರದುರ್ಗದಲ್ಲಿ ಈಗ ಕಾಲ ಕೂಡಿ ಬಂದಿದೆ ಎಂದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಹಲವೆಡೆ ಭವನ ನಿರ್ಮಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಕೆಲ ತಾಲೂಕುಗಳಲ್ಲೂ ನಿರ್ಮಿಸಿದೆ. ಆದರೆ, ಜಿಲ್ಲಾ ಕೇಂದ್ರದಲ್ಲಿ ಇರಲಿಲ್ಲ. ಈಗ ಸಮುದಾಯ ಭವನದ ವಿಚಾರದಲ್ಲಿ ಪ್ರತಿಷ್ಠೆ, ರಾಜಕೀಯ ಮಾಡದೇ ಸಮಾಜ ಹಾಗೂ ಮಠವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ಹಿಂದೆ ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಇಂತಿಷ್ಟೇ ದಿನದಲಿ ಮಠ ಕಟ್ಟಬೇಕು ಎಂದು ಗುರಿ ಇಟ್ಟುಕೊಂಡು ಮಠ ಕಟ್ಟಿದ್ದರು. ಈಗ ಚಿತ್ರದುರ್ಗದ ಕನಕ ಭವನವದ ಉಸ್ತುವಾರಿಯನ್ನೂ ಅವರೇ ನೋಡಿಕೊಳ್ಳುತ್ತಾರೆ. ನಾವೆಲ್ಲಾ ಅವರಿಗೆ ಸಹಾಯಕರಾಗಿ ಕೆಲಸ ಮಾಡೋಣ ಎಂದರು.

ಚಿತ್ರದುರ್ಗದ ಕುರುಬರ ಸಂಘದಲ್ಲಿ ಈ ಹಿಂದೆ ಇದ್ದ ಭಿನ್ನಾಭಿಪ್ರಾಯ ಈಗ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ಆದಷ್ಟು ಬೇಗ ಭವ್ಯ ಭವನ ತಲೆ ಎತ್ತಲಿ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಹೇಳಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಕುರುಬ ಸಮಾಜಕ್ಕೆ ಅನುದಾನ ನೀಡುವುದಾಗಿ ಈ ಹಿಂದೆಯೇ ಶ್ರೀಗಳಿಗೆ ತಿಳಿಸಿದ್ದೆ. ಆದರೆ, ಆಗ ಬಳಕೆ ಮಾಡಿಕೊಂಡಿರಲಿಲ್ಲ. ಈಗ ಕನಕ ಭವನ ನಿರ್ಮಾಣ ಕಾರ್ಯಕ್ಕೆ ನನ್ನ ಅನುದಾನದಿಂದ 10 ಲಕ್ಷ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿದರು.

ಸರ್ಕಾರದ ಮಟ್ಟದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರ ಜತೆ ಮಾತನಾಡಿ ಸಾಧ್ಯವಾದಷ್ಟು ಹೆಚ್ಚು ಅನುದಾನ ಕೊಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಶಾಸಕರು ತಿಳಿಸಿದರು. ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕನಕ ಗುರುಪೀಠದ ಮುಖ್ಯ ಆಡಳಿತಾ ಧಿಕಾರಿ, ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್‌.ಶ್ರೀರಾಮ್‌, ಪ್ರಧಾನ ಕಾರ್ಯದರ್ಶಿ ಬಿ.ಎಚ್‌.ಗೌಡ್ರು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜಗನ್ನಾಥ್‌ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.