ನೆರೆ, ಬರವಿದ್ದರೂ ಮದ್ಯ ಮಾರಾಟ ಜೋರು
Team Udayavani, Oct 20, 2019, 3:06 AM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬರ ಹಾಗೂ ನೆರೆ ಆವರಿಸಿದ್ದರೂ ಮದ್ಯ ಮಾರಾಟದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಮೊದಲಿನಂತೆ ಮದ್ಯ ಮಾರಾಟ ನಡೆ ಯುತ್ತಿದೆ. ನಗರಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿಗಳನ್ನು ತೆರೆಯಲು ಪರವಾನಿಗೆ ನೀಡಲಾಗುವುದು ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿ, ನೆರೆ ಸಂತ್ರಸ್ತರಿಗೆ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಪಕ್ಷಪಾತ ಇಲ್ಲದೇ ಸಿಎಂ ಯಡಿಯೂರಪ್ಪ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ ಎಂದರು.
ಜರ್ಮನ್ ಅಧ್ಯಯನ ಪ್ರವಾಸ: ಕೈಗಾರಿಕೆಗಳ ಬಗ್ಗೆ ಅಧ್ಯಯನ ನಡೆಸಲು ರಾಜ್ಯದ ಐಟಿಐ ವಿದ್ಯಾರ್ಥಿಗಳಿಗೆ ಜರ್ಮನ್ ಪ್ರವಾಸ ಅಧ್ಯಯನ ಏರ್ಪಡಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಜರ್ಮನಿಯಲ್ಲಿಯೇ ಉದ್ಯೋಗ ಮಾಡಲು ಐಟಿಐ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಇಚ್ಚಿಸಿದರೆ ಅದಕ್ಕೂ ಸರ್ಕಾರ ಜರ್ಮನ್ ದೇಶದೊಂದಿಗೆ ಮಾತುಕತೆ ನಡೆಸಲಿದೆ ಎಂದರು.
ಇಡೀ ಜಗತ್ತಿನಲ್ಲಿ ಜರ್ಮನ್ ದೇಶ ಕೈಗಾರಿಕಾ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಆ ಕಾರಣಕ್ಕಾಗಿ ಅಲ್ಲಿನ ಕೈಗಾರಿಕೆಗಳ ಕಾರ್ಯ ಚಟುವಟಿಕೆಗಳ ಬಗ್ಗೆ ರಾಜ್ಯದ ಐಟಿಐ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಅಧ್ಯಯನ ಅಗತ್ಯವಾಗಿದೆ. ಅಲ್ಲಿನ ವ್ಯವಸ್ಥೆಯನ್ನು ನೋಡಿ ಕಲಿಯುವುದು, ರೂಢಿಸಿಕೊಳ್ಳುವುದು ತುಂಬ ಅಗತ್ಯ ವಾಗಿದೆ ಎಂದರು.
ರಾಜ್ಯದಲ್ಲಿ 270 ಸರ್ಕಾರಿ ಐಟಿಐ, 300 ಅನುದಾನಿತ ಐಟಿಐ ಹಾಗೂ 1,111 ಖಾಸಗಿ ಐಟಿಐ ಕಾಲೇಜು ಸೇರಿ ಒಟ್ಟು 2,700ಕ್ಕೂ ಅಧಿಕ ಐಟಿಐಗಳಿವೆ. ಪ್ರಸ್ತುತ ರಾಜ್ಯದಲ್ಲಿ ಶೇ.70ರಷ್ಟು ಮಂದಿಯಷ್ಟೇ ಐಟಿಐ ಬಳಿಕ ಉದ್ಯೋಗ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಶೇ.100ರಷ್ಟು ಐಟಿಐ ಪೂರ್ಣಗೊಳಿಸುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉದ್ಯೋಗ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಿದೆ ಎಂದು ಭರವಸೆ ನೀಡಿದರು.
ಸುಧಾಕರ್, ನಾನು ತುಂಬ ಆತ್ಮೀಯರು. ಅವರು ಮುಂದಿನ ಚುನಾವಣೆಯಲ್ಲಿ ಗೆದ್ದು ಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಂತ್ರಿಯಾಗಿ ನಮ್ಮ ಜೊತೆ ಕ್ಯಾಬಿನೆಟ್ನಲ್ಲಿ ಇರುತ್ತಾರೆ.
-ಎಚ್.ನಾಗೇಶ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ