ಹಾಸನಾಂಬೆಯ ದರ್ಶನಕ್ಕೆ ಭಕ್ತರ ಮಹಾಪೂರ


Team Udayavani, Oct 21, 2019, 3:00 AM IST

hasanambe

ಹಾಸನ: ಮಳೆಯ ಬಿಡುವು, ರಜಾದಿನದ ಹಿನ್ನೆಲೆಯಲ್ಲಿ ಭಾನುವಾರ ಹಾಸನಾಂಬೆಯ ದರ್ಶನಕ್ಕೆ ಭಕ್ತರ ಮಹಾಪೂರವೇ ಹರಿದು ಬಂದಿತು. ದೇವಿಯ ದರ್ಶನಕ್ಕೆ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರು, ರಾಜಕಾರಣಿಗಳು ಸೇರಿದಂತೆ ಗಣ್ಯರ ದಂಡು ಆಗಮಿಸಿದ ಹಿನ್ನೆಲೆಯಲ್ಲಿ ದೇವಿಯ ದರ್ಶನ ವಿಳಂಬವಾದರೂ ಸರದಿಯ ಸಾಲಿನಲ್ಲಿ ಭಕ್ತರು ಶಾಂತಿಯಾಗಿ ಸಾಗಿ ಸುಸೂತ್ರವಾಗಿ ದೇವಿಯ ದರ್ಶನ ಪಡೆದರು.

ಶನಿವಾರ ಮಧ್ಯಾಹ್ನದವರೆಗೂ ನಿರೀಕ್ಷಿಸಿದಷ್ಟು ಭಕ್ತರು ಬರಲಿಲ್ಲ. ಆದರೆ ಸಂಜೆಯ ವೇಳೆಗೆ ಭಕ್ತ ಸಾಗರವೇ ದೇವಾಲಯದತ್ತ ಹರಿದು ಬಂದಿತ್ತು. ಹಾಗೆಯೇ ಭಾನುವಾರ ಬೆಳಗ್ಗೆಯಿಂದ ರಾತ್ರಿವರೆಗೂ ಭಕ್ತರು ತಂಡೋಪತಂಡವಾಗಿ ದೇವಾಲಯದತ್ತ ಸಾಗಿ ಬಂದು ದೇವಿಯ ದರ್ಶನಕ್ಕೆ ಸರದಿ ಸಾಲಿನಲ್ಲಿ ಕಾದರು. ಹೆಚ್ಚು ಬಿಸಿಲಿನ ತಾಪವಿಲ್ಲದೇ, ಮಳೆಯ ಕಾಟವಿಲ್ಲದಿದ್ದರಿಂದ ಭಕ್ತರು ನೆಮ್ಮದಿಯಿಂದ ದೇವಿಯ ದರ್ಶನ ಪಡೆದರು. ಸಂಜೆ 7.30 ರ ನಂತರ ಮಳೆ ಆರಂಭವಾಯಿತು.

ಮಧ್ಯಾಹ್ನ 1 ಗಂಟೆಯಿಂದ 3 ಗಂಟೆವರೆಗೆ ದೇವಿಗೆ ನೈವೇದ್ಯ ನೀಡುವ ಹಿನ್ನೆಲೆಯಲ್ಲಿ ದೇವಾಲಯದ ಬಾಗಿಲು ಹಾಕಿದ್ದರಿಂದ ಸಾವಿರಾರು ಭಕ್ತರ ಸಾಲು ಬೆಳೆಯುತ್ತಾ ಹೋಯಿತು. ಸಂಜೆಯಾಗುತ್ತಲೂ ಭಕ್ತರ ಸರದಿಯ ಸಾಲು ಬೆಳೆಯುತ್ತಲೇ ಇತ್ತು. ಇಡೀ ರಾತ್ರಿ ಭಕ್ತರು ಬರಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಸನ್ನದ್ಧರಾಗಿದ್ದರು.

ಸರದಿಯ ಸಾಲುಗಳನ್ನು ಈ ಬಾರಿ ಸುಸಜ್ಜಿತವಾಗಿ ಮಾಡಿರುವುದರಿಂದ ಪೊಲೀಸರಿಗೆ ಭಕ್ತರನ್ನು ನಿಯಂತ್ರಿಸುವ ಒತ್ತಡ ಕಡಿಮೆಯಾಗಿದೆ. ಆದರೆ ಪ್ರಧಾನ ಪವೇಶ ದ್ವಾರದಲ್ಲಿ ಗಣ್ಯರ ಜೊತೆ ಬರುವವರು, ಶಿಫಾರಸು ತರುವವರು, ಪ್ರಭಾವ ಬೀರುವವರನ್ನು ನಿಯಂತ್ರಿಸುವುದು ಪೊಲಿಸರಿಗೆ ಕಷ್ಟವಾಗುತ್ತಿದೆ. ಇನ್ನುಳಿದಂತೆ ಸರದಿಯ ಸಾಲಿನಲ್ಲಿ ಸಾಗುವವರು ಸಲೀಸಾಗಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.

ದೇವಿ ದರ್ಶನ ಪಡೆದ ರೇವಣ್ಣ: ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಮೂರ್‍ನಾಲ್ಕು ಮಂದಿ ಪುರೋಹಿತರೊಂದಿಗೆ ಭಾನುವಾರ ದೇವಿಯ ದರ್ಶನ ಪಡೆದರು. ಹಾಸನಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ ಅವರು ದೇವಾಲಯದ ಆವರಣದಲ್ಲಿರುವ ದರ್ಬಾರ್‌ ಗಣಪತಿ ಹಾಗೂ ಶ್ರೀ ಸಿದ್ಧೇಶ್ವರ ದೇವಾಲಯದಲ್ಲಿಯೂ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿದ ನಂತರ ದೇವಾಲಯದ ಪ್ರಧಾನ ದ್ವಾರದಲ್ಲಿ ಕೆಲಕಾಲ ಕುಳಿತು ವಿಶ್ರಮಿಸಿಕೊಂಡ ರೇವಣ್ಣ ಅವರು ಅಧಿಕಾರಿಗಳಿಂದ ಜಾತ್ರೋತ್ಸವದ ಮಾಹಿತಿಯನ್ನು ಪಡೆದುಕೊಂಡರು.

ಹಾಸನಾಂಬೆ ದರ್ಶನ ಪಡೆದ ಬಿ.ಸಿಪಾಟೀಲ್‌: ಅನರ್ಹ ಶಾಸಕ ಬಿ.ಸಿ.ಪಾಟೀಲ್‌ ಅವರೂ ಭಾನುವಾರ ಹಾಸನಾಂಬೆಯ ದರ್ಶನ ಪಡೆದರು. ತಮ್ಮ ಕೆಲ ಸ್ನೇಹಿತರೊಂದಿಗೆ ಪಾಟೀಲ್‌ಅವರು ದೇವಾಲಯಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಶನಿವಾರ ರಾತ್ರಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಬಂದು ಹಾಸನಾಂಬೆಗೆ ಪೂಜೆ ಸಲ್ಲಿಸಿದರು. ಅನರ್ಹ ಶಾಸಕ ಎಚ್‌. ವಿಶ್ವನಾಥ್‌ ಅವರೂ ಶನಿವಾರ ರಾತ್ರಿ ಹಾಸನಾಂಬೆಯ ದರ್ಶನ ಪಡೆದರು.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.