ರಾಜಕಾರಣಿ ಪ್ರಬುದ್ಧಸಮಾಜ ಕಟ್ಟಲು ಆಗಲ್ಲ: ಪ್ರಿಯಾಂಕ್‌


Team Udayavani, Oct 21, 2019, 11:04 AM IST

20-October-25

ಶಹಾಬಾದ: ಚಿತ್ತಾಪುರ ತಾಲೂಕಿನ ಭವಿಷ್ಯ ನಿರ್ಮಾಣ ಮಾಡುವ ಶಕ್ತಿ ಜನರಲ್ಲಿದೆ. ರಾಜಕಾರಣಿಗಳಿಂದ ಈಗ ಪ್ರಬುದ್ಧ ಸಮಾಜ ಕಟ್ಟುವುದಕ್ಕೆ ಸಾಧ್ಯವಿಲ್ಲ. ಪ್ರಬುದ್ಧ ಸಮಾಜ ಕಟ್ಟುವ ಕೆಲಸ ಸ್ವಾಮೀಜಿಗಳ ಮಾರ್ಗದರ್ಶನದಿಂದ ಸಾಧ್ಯ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ತಾಲೂಕಿನ ತೊನಸನಳ್ಳಿ (ಎಸ್‌) ಗ್ರಾಮದ ಅಲ್ಲಮ ಪ್ರಭು ಸಂಸ್ಥಾನ ಪೀಠದ ಮಲ್ಲಣ್ಣಪ್ಪ ಮಹಾಸ್ವಾಮಿಗಳ 58ನೇ ಜನ್ಮದಿನೋತ್ಸವ, 1 ಕೋಟಿ ರೂ. ವೆಚ್ಚದ ಯಾತ್ರಿ ನಿವಾಸ ಕಟ್ಟಡ ಲೋಕಾರ್ಪಣೆ, ತುಲಾಭಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮನ್ನು ಆಯ್ಕೆ ಮಾಡಿ ಬೆಂಗಳೂರಿಗೆ ಕಳುಹಿಸಿರುವುದು ಸಮಾಜದ ಏಳ್ಗೆಗಾಗಿ. ಅದನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಇದ್ದುದ್ದನ್ನು ಇದ್ದಂಗೆ ಹೇಳುವ ನನಗೆ, ಬಣ್ಣ ಬಣ್ಣದ ಮಾತು ಆಡಲು ಬರುವುದಿಲ್ಲ. ಬಸವಣ್ಣನವರ ಕಾಯಕವೇ ಕೈಲಾಸ ಎನ್ನುವ ತತ್ವದ ಮೇಲೆ ಕಾರ್ಯನಿರ್ವಹಿಸುತ್ತಿದ್ದೇನೆ. ಜನರು ಪ್ರಬುದ್ಧತೆ ಹೊಂದಿದರೆ ಮಾತ್ರ ತಾಲೂಕಿನ ಏಳ್ಗೆಯಾಗಲು ಸಾಧ್ಯ ಎಂದು ಹೇಳಿದರು.

ಪ್ರವಾಸೋದ್ಯಮ ಖಾತೆ ಸಚಿವನಾಗಿದ್ದಾಗ ನಿಜಶರಣ ಅಂಬಿಗರ ಚೌಡಯ್ಯನವರ ಜನ್ಮಸ್ಥಳ ಚೌಡದಾನಪುರಕ್ಕೆ ಏಳು ಕೋಟಿ ರೂ. ನೀಡಿದ್ದೆ. ಮುಗುಳನಾಗಾವ ಸಿದ್ದಲಿಂಗೇಶ್ವರ ಮಠ, ಜೇಮಸಿಂಗ್‌ ಮಹಾರಾಜ ಮಠಕ್ಕೆ ಒಂದು ಕೋಟಿ ರೂ. ನೀಡಲಾಗಿದ್ದು, ನಾಲವಾರ ಮಠಕ್ಕೆ ಅನುದಾನ ನೀಡಲಾಗಿದೆ. ಅಲ್ಲದೇ, ಕಲಬುರಗಿ ಖ್ವಾಜಾ ಬಂದೆ ನವಾಜ ದರ್ಗಾಕ್ಕೆ ಒಂದು ಕೋಟಿ ರೂ. ನೀಡಲಾಗಿದೆ. ಕೇವಲ ಜನರ ಆಶೀರ್ವಾದದಿಂದ ಚಿತ್ತಾಪುರ ಪ್ರಗತಿಗೆ 2,700 ಕೋಟಿ ರೂ. ಅನುದಾನ ತರಲು ಸಾಧ್ಯವಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಚಿತ್ತಾಪುರ ಕಂಬಳೇಶ್ವರ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯರು ಆಶೀರ್ವಚನ ನೀಡಿ, ಚಿತ್ತಾಪುರ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಹಣ ತಂದಿರುವ ಕೀರ್ತಿ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಸಲ್ಲುತ್ತದೆ. ತೊನಸನಳ್ಳಿ ಮಠಕ್ಕೆ ಒಂದು ಕೋಟಿ ರೂ. ಅನುದಾನ ತಂದು ಕಟ್ಟಡ ನಿರ್ಮಿಸಿದ್ದು, ನುಡಿದಂತೆ ನಡೆದ ಶಾಸಕರಾಗಿದ್ದಾರೆ ಎಂದು ಹೇಳಿದರು.

ಮುಗುಳನಾಗಾವದ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಮಲ್ಲಣ್ಣಪ್ಪ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿದರು. ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಬೆಳ್ಳಿ ಕಿರೀಟ ತೊಡಿಸಿ ಸತ್ಕರಿಸಲಾಯಿತು. ಯರಗೋಳ ಸಂಗಮೇಶ ದೇವರು, ಚಟ್ನಳ್ಳಿ ಪೂಜ್ಯರು ಸಾನ್ನಿಧ್ಯ ವಹಿಸಿದ್ದರು. ಕಾಂಗ್ರೆಸ್‌ ಮುಖಂಡ ವಿಜಯಕುಮಾರ ಜಿ.ಆರ್‌., ಜಿ.ಪಂ ಪ್ರತಿ ಪಕ್ಷದ ನಾಯಕ ಶಿವಾನಂದ ಪಾಟೀಲ, ಸದಸ್ಯ ಶಿವರುದ್ರ ಭೇಣಿ, ತಾ.ಪಂ ಅಧ್ಯಕ್ಷ ಜಗನ್ನಾಥರೆಡ್ಡಿ ರಾಮತೀರ್ಥ, ಶಹಾಬಾದ ಬಿಸಿಸಿ ಅಧ್ಯಕ್ಷ ಡಾ| ಎಂ.ಎ. ರಶೀದ್‌, ವಾಡಿ ಬಿಸಿಸಿ ಅಧ್ಯಕ್ಷ ಮಹಿಮೂದ್‌ ಸಾಹೇಬ, ಚಿತ್ತಾಪುರ ಬಿಸಿಸಿ ಅಧ್ಯಕ್ಷ ಭೀಮಣ್ಣ ಸಾಲಿ, ಜಿ.ಪಂ ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ ಬಾಗೋಡಿ, ನಾಗರೆಡ್ಡಿ ಕರದಾಳ, ಅಣವೀರ ಇಂಗಿನಶೆಟ್ಟಿ, ಗಿರೀಶ ಕಂಬಾನೂರ, ಮಹಾಂತೇಶ ಪೂಜಾರಿ, ಶರಣಬಸಪ್ಪ ಧನ್ನಾ, ತಾ.ಪಂ ಮಾಜಿ ಸದಸ್ಯ ನಿಂಗಣ್ಣ ಹುಳಗೋಳ, ಗ್ರಾ.ಪಂ ಅಧ್ಯಕ್ಷ ವಿಜಯಾನಂದ ಮಾಣಿಕ ಮತ್ತಿತರರು ಪಾಲ್ಗೊಂಡಿದ್ದರು. ಬಸವರಾಜ ಹೇರೂರ ನಿರೂಪಿಸಿದರು.

ಟಾಪ್ ನ್ಯೂಸ್

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.