ತಿಪ್ಪೆ ಕೊಂಪೆಯಲ್ಲಿ ವಾಚನಾಲಯ!


Team Udayavani, Oct 21, 2019, 2:55 PM IST

GADAGA-TDY-2

ರೋಣ: ಬಯಲು ಶೌಚದ ದುರ್ವಾಸನೆ, ಮುರಿದ ಕುರ್ಚಿಗಳು, ಕಿಟಕಿಗೆ ದನ-ಕರುಗಳನ್ನು ಕಟ್ಟುವ ಪರಿಸ್ಥಿತಿ, ಕೊಳೆಯುತ್ತ ಬಿದ್ದಿರುವ ಪುಸ್ತಕಗಳು, ಪಕ್ಕದಲ್ಲಿ ಬಿದ್ದ ಸಾರಾಯಿ ಬಾಟಲಿ ಡಬ್ಬಿಗಳು.. ಇದು ಬದಾಮಿ ಬನಶಂಕರಿ ದೇವಿ ತವರೂರಾದ ಮಾಡಲಗೇರಿ ಗ್ರಾಮದ ಸಾರ್ವಜನಿಕ ಗ್ರಂಥಾಲಯದ ದುಸ್ಥಿತಿ.

ಗ್ರಂಥಾಲಯ ಪಕ್ಕದಲ್ಲಿ ಗಿಡಗಂಟಿಗಳು ಬೆಳೆದು ಓದಲು ಪ್ರಶಾಂತವಾದ ವಾತಾವರಣವಿಲ್ಲ. ಇದರಿಂದ ಓದುಗರು ತುಂಬ ಕಿರಿಕಿರಿ ಅನುಭವಿಸುತ್ತಿದ್ದಾರೆ. 2006ರಲ್ಲಿ ಅಂದಿನ ರಾಜ್ಯಸಭಾ ಸದಸ್ಯ ವಿಜಯ ಮಲ್ಯ ವಿಶೇಷ ಕಾಳಜಿ ವಹಿಸಿ ಮಾಡಲಗೇರಿ ಗ್ರಾಮದ ಗ್ರಂಥಾಲಯಕ್ಕೆ 2 ಲಕ್ಷ ರೂ. ಹಣ ಖರ್ಚು ಮಾಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ ಅಲ್ಲಿ ಓದುಗರಿಗೆ ಪ್ರಶಾಂತ ವಾತಾವರಣವಿಲ್ಲದಿರುವುದು ನೋವಿನ ಸಂಗತಿ.

ಪುಸ್ತಕಗಳಿಗಿಲ್ಲ ಕಿಮ್ಮತ್ತು :  ಗ್ರಂಥಾಲಯದಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದ ಮಂಜೂರಾಗಿ ಬಂದ ಪುಸ್ತಕಗಳು ಕೊಳೆತು (ಗೊರಲಿ ಹತ್ತಿವೆ) ಹೋಗಿವೆ. ಪುಸ್ತಕವಿರುವ ಕೊಠಡಿ ಬಾಗಿಲು ಒಮ್ಮೆಯೂ ತೆರೆದಿಲ್ಲ ಎನ್ನುತ್ತಾರೆ ಗ್ರಾಮದ ಯುವಕರು. ಈ ವಾಚನಾಲಯಕ್ಕೆ ವಾರ ಪತ್ರಿಕೆಗಳು, ಮಾಸ ಪತ್ರಿಕೆಗಳು ಒಂದು ಬರುತ್ತಿಲ್ಲ. ದಿನ ಪತ್ರಿಕೆಗಳ ಬಿಲ್‌ನ್ನು ಸಹ ಪಾವತಿಸುವುದಿಲ್ಲವಂತೆ. ಇಷ್ಟಾದರೂ ಕೆಲವು ಬುದ್ಧಿ ಜೀವಿಗಳು ತಮಗೆ ಬೇಕಾದ ಮೂರ್‍ನಾಲ್ಕು ದಿನ ಪತ್ರಿಕೆಗಳನ್ನು ತಾವೇ ಹಣ ಕೊಟ್ಟು ಗ್ರಂಥಾಲಯಕ್ಕೆ ಬರುವ ಓದುಗರಿಗೆ ಅನುಕೂಲ ಮಾಡಿದ್ದಾರೆ.

ಪಕ್ಕದಲ್ಲಿಯೇ ಅಕ್ರಮ ಸಾರಾಯಿ : ಗ್ರಾಮದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಅಕ್ರಮ ಸಾರಾಯಿ ಮಾರಾಟ ಮಾಡುವುದು ಒಂದೆಡೆಯಾದರೆ ಗ್ರಂಥಾಲಯ ಪಕ್ಕದಲ್ಲಿಯೇ ಅಕ್ರಮ ಸಾರಾಯಿ ಮಾರುವುದು ಕಂಡುಬರುತ್ತಿದೆ. ಬೆಳಗ್ಗೆ ಗ್ರಂಥಾಲಯದೊಂದಿಗೆ ಇಲ್ಲಿನ ಅಕ್ರಮ ಸಾರಾಯಿ ಮಾರಾಟವೂ ಪ್ರಾರಂಭವಾಗುತ್ತದೆ. ಇದರಿಂದ ಓದಲು ಬರುವ ಯುವಕರಿಗೆ ಈ ದೃಶ್ಯ ಬೆಳ್ಳಂ ಬೆಳಗ್ಗೆ ಎದುರಾಗುತ್ತಿರುವುದು ದುರಂತ. ಜೊತೆಗೆ ಇಲ್ಲಿಯೇ ತಿಪ್ಪೆಗಳನ್ನು ಹಾಕಿದ್ದರಿಂದ ದುರ್ವಾಸನೆ ಓದುಗರಿಗೆ ತುಂಬ ತೊಂದರೆಯಾಗುತ್ತಿದೆ ಎನ್ನುತ್ತಾರೆ ಓದುಗರು. ಗ್ರಂಥಾಲಯ ಕಿಟಕಿಗೆ ಜಾನುವಾರುಗಳನ್ನು ಕಟ್ಟುವುದು ಸರ್ವೇ ಸಾಮಾನ್ಯವಾಗಿದೆ. ಮಾಡಲಗೇರಿ ಗ್ರಾಮೀಣ ಪ್ರದೇಶ ಜೊತೆಗೆ ಕೃಷಿಯೇ ಪ್ರಧಾನ ಉದ್ಯೋಗ. ಹೀಗಾಗಿ ಎತ್ತು, ಎಮ್ಮೆ ಸೇರಿದಂತೆ ಸಾಕು ಪ್ರಾಣಿಗಳಿರುವುದು ಸಹಜ. ಗ್ರಂಥಾಲಯ ಹತ್ತಿರದ ರೈತರು ಜಾನುವಾರುಗಳನ್ನು ಕಿಟಕಿಗಳಿಗೆ ಕಟ್ಟುತ್ತಿದ್ದು ಹಾಳು ಕೊಂಪೆ ಎನಿಸಿದೆ. ಇಲ್ಲಿ ಮೇಲ್ವಿಚಾರಕರು ಸರಿಯಾಗಿ ಬಂದು ಕೆಲಸ ಮಾಡಿದರೆ ಮಾತ್ರ ರೈತರಿಗೆ ತಿಳಿ ಹೇಳಲು ಸಾಧ್ಯ ಎನ್ನುತ್ತಾರೆ ಓದುಗರು

ಸಾಯಂಕಾಲ ಬಂದ್‌ :  ಬೆಳಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಕಾರ್ಯನಿರ್ವಹಿಸಬೇಕು. ನಂತರ ಸಾಯಂಕಾಲ 4 ರಿಂದ 6 ರ ಗಂಟೆಯವರೆಗೆ ಬಾಗಿಲು ತೆರೆಯಬೇಕು. ಆದರೆ ಇಲ್ಲಿನ ಗ್ರಂಥಪಾಲಕ ಒಮ್ಮೆಯೂ ಸಾಯಂಕಾಲ ಗ್ರಂಥಾಲಯದ ಬಾಗಿಲು ತೆರೆದಿಲ್ಲ. ಇದರ ಮೇಲುಸ್ತುವರಿ ಮಾಡುವ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸದಿರುವುದು ವಿಪರ್ಯಾಸ.

ಮೇಲ್ವಿಚಾರಕರು ಎರಡೇ ದಿನ ಪತ್ರಿಕೆಗಳನ್ನು ತರಿಸುತ್ತಾರೆ. ಇಲಾಖೆ ಇನ್ನಷ್ಟು ಅನುದಾನ ನೀಡಿ, ಇನ್ನೊಂದು ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆ ಕಳುಹಿಸಿದರೆ ಓದುಗರು, ಸ್ಫರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. -ಕುಮಾರ ಅಸೂಟಿ, ಯುವಕ

 

-ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.