ಭದ್ರೆಯಿಂದ ಜಲಕ್ಷಾಮ ದೂರ: ಶಿಮುಶ

ವಾಣಿವಿಲಾಸ ಸಾಗರದಲ್ಲಿ 5 ರಿಂದ 6 ಟಿಎಂಸಿ ಅಡಿ ನೀರು ಸಂಗ್ರಹ ಅಧಿಕಾರಿಗಳ ಕಾರ್ಯಕ್ಕೆ ಶ್ಲಾಘನೆ

Team Udayavani, Oct 21, 2019, 4:00 PM IST

21-October-19

ಅಜ್ಜಂಪುರ: ಪ್ರಾಯೋಗಿಕವಾಗಿ ಭದ್ರೆಯ ನೀರು ವಾಣಿವಿಲಾಸ ಸಾಗರಕ್ಕೆ ಹರಿದು ಬಂದಿದೆ. ಇದು ಭವಿಷ್ಯದಲ್ಲಿ ಜಿಲ್ಲೆಯ ಜಲಕ್ಷಾಮ ನಿವಾರಿಸುವ ಆಶಾವಾದ ಮೂಡಿಸಿದೆ ಎಂದು ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿ ಹೇಳಿದರು.

ಅಜ್ಜಂಪುರ ಸಮೀಪ ಬೆಟ್ಟದಾವರೆ ಕೆರೆಯಲ್ಲಿ ಭಾನುವಾರ ಭದ್ರಾ ಮೇಲ್ದಂಡೆ ಯೋಜನೆಯ ನೀರೆತ್ತುವ ಪಂಪಿಂಗ್‌ ಮೋಟಾರು ಇರಿಸಿದ ಸ್ಥಳದಲ್ಲಿ “ಜಲವೀಲ್ಯೆ ‘ ನೀಡಿ ಮಾತನಾಡಿದ ಅವರು, ಭದ್ರೆಯ ನೀರು ಜಿಲ್ಲೆಗೆ ಹರಿಯುತ್ತಿರುವುದು ಸಂತಸ ತರಿಸಿದ್ದರೂ, ತುಂಗೆಯ ನೀರು ಜಿಲ್ಲೆಗೆ ಹರಿಯದಿರುವುದು ಅಷ್ಟೇ ಪ್ರಮಾಣದ ಬೇಸರ ಮೂಡಿಸಿದೆ. ತುಂಗಾ-ಭದ್ರೆ ಎರಡೂ ಜಿಲ್ಲೆಗೆ ಹರಿದಾಗ ಮಾತ್ರ ಜಲಕ್ಷಾಮ ನಿವಾರಣೆ ಆಗಲಿದೆ. ಜಿಲ್ಲೆಯ ಕೆರೆ-ಕಟ್ಟೆ-ಜಲಾಶಗಳು ತುಂಬಲಿವೆ. ಜಲ ಸಂವೃದ್ಧಿಗೊಳ್ಳಲಿದೆ ಎಂದರು.

ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನೀರು ಜೀವಜಲ. ಅದು ಒಬ್ಬರ ಸ್ವತ್ತಲ್ಲ. ಅದರ ಮೇಲೆ ಜಗತ್ತಿನ ಎಲ್ಲ ಜೀವಸಂಕುಲಕ್ಕೂ ಹಕ್ಕಿದೆ. ಆ ಹಕ್ಕನ್ನು ಅನುಭವಿಸುವ ಮೊದಲು, ನೀರನ್ನು ವ್ಯರ್ಥವಾಗಿ ಬಳಸುವುದನ್ನು ತಡೆಯುವ ಕರ್ತವ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಇದ್ದ ನೀರನ್ನು ಮಿತವಾಗಿ ಬಳಸುವುದನ್ನು ಮೊದಲು ಕಲಿಯಬೇಕು ಎಂದು ಸಲಹೆ ನೀಡಿದರು.

ನೀರಾವರಿ ಹೋರಾಟ ಸಮಿತಿ ಪ್ರಧಾನ ಸಂಚಲಕ ಬಂಜಗೆರೆ ಜಯಪ್ರಕಾಶ್‌ ಮಾತನಾಡಿ, ಎಲ್ಲ ಮುಖ್ಯಮಂತ್ರಿಗಳೂ ಯೋಜನೆ ಪೂರ್ಣಕ್ಕೆ ತ್ವರಿತಗತಿಯಲ್ಲಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಅಧಿಕಾರಿಗಳೂ ಸಮನ್ವಯತೆಯಿಂದ ಕೆಲಸ ನಿರ್ವಹಿಸಿದ್ದಾರೆ. ಅದರಿಂದಲೇ ಮಹತ್ವಾಕಾಂಕ್ಷಿ ಯೋಜನೆ ಸಾಫಲ್ಯತೆಯತ್ತ ಸಾಗಿತು ಎಂದರು. ವಿಶ್ವೇಶ್ವರಯ್ಯ ಜಲ ನಿಗಮದ ತಾಂತ್ರಿಕ ಸಲಹೆಗಾರ ಚೆಲ್ವರಾಜ್‌, ಭದ್ರೆಯಿಂದ ಅಜ್ಜಂಪುರದವರೆಗೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಂಡಿದೆ. ಪ್ರತಿದಿನ 500-600 ಕ್ಯೂಸೆಕ್‌ ನೀರು ವಾಣಿವಿಲಾಸ ಸಾಗರ ತಲುಪುತ್ತಿದೆ. ನೀರು ಹರಿಸುವಿಕೆಗೆ ಅಕ್ಟೋಬರ್‌ವರೆಗೆ ಮಾತ್ರ ಅವಕಾಶವಿದೆ. ಆದರೆ ವಿಶೇಷ ಪ್ರಕರಣ ಆಗಿರುವುದರಿಂದ ಬರುವ
ಮಾರ್ಚ್‌ವರೆಗೂ ನೀರು ಹರಿಸಲಾಗುವುದು. ಹಾಗೆ ಮಾಡಿದರೆ ವಾಣಿವಿಲಾಸ ಸಾಗರದಲ್ಲಿ 5 ರಿಂದ 6 ಟಿಎಂಸಿ ಅಡಿ ನೀರು ಸಂಗ್ರಹಗೊಳ್ಳಲಿದೆ ಎಂದು ತಿಳಿಸಿದರು.

ಹೊಸದುರ್ಗ ಕನಕ ಪೀಠದ ಪುರುಷೋತ್ತಮನಾಂದ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಸಂಸ್ಥಾನದ ಶಾಂತವೀರಸ್ವಾಮೀಜಿ, ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ, ಎಇಇ ರವಿಕುಮಾರ್‌, ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಜಯಣ್ಣ, ರೈತ ಸಂಘದ ಕಾರ್ಯದರ್ಶಿ ಎಂ.ಶಂಕರಪ್ಪ, ಮುಖಂಡ ಎ.ಸಿ. ಚಂದ್ರಪ್ಪ ಮತ್ತಿತರರಿದ್ದರು. ಸ್ಥಳ ವೀಕ್ಷಿಸಲು ಚಿತ್ರದುರ್ಗ ಜಿಲ್ಲೆಯ ನೂರಾರು ರೈತರು, ರೈತ ಮಹಿಳೆಯರು, ರಾಜಕೀಯ ಮುಖಂಡರು ಹಾಜರಿದ್ದರು .

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.