ಅರಿಶಿನಗೇರಿ ಶಾಸನಕ್ಕಿದೆ ಅಪಾರ ಮಹತ್ವ


Team Udayavani, Oct 21, 2019, 4:13 PM IST

21-October-20

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಅರಿಶಿನಗೇರಿ ಗ್ರಾಮದಲ್ಲಿ ಇತ್ತೀಚೆಗೆ 17ನೇ ಶತಮಾನದ ಅಪ್ರಕಟಿತ ಶಿಲಾ ಶಾಸನವೊಂದು ಪತ್ತೆಯಾಗಿದ್ದು ಸರ್ಕಾರದ ಸೇವೆಯಲ್ಲಿದ್ದ ಓರ್ವ ನೌಕರನಿಗೆ ಭೂಮಿ ದಾನ ಮಾಡಿದ ವಿಷಯ ಮಹತ್ವದ್ದಾಗಿದೆ ಎಂದು ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ|ಬಾಲಕೃಷ್ಣ ಹೆಗಡೆ ತಿಳಿಸಿದರು.

ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿ ವತಿಯಿಂದ ಆಯೋಜಿಸಿದ್ದ 33ನೇ ವಾರ್ಷಿಕ ಸಮ್ಮೇಳನ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ “ಅರಿಶಿಣಗೇರಿಯಲ್ಲಿ ಇತ್ತೀಚೆಗೆ ದೊರೆತ ಅಪ್ರಕಟಿತ ಶಿಲಾ ಶಾಸನ’ ಎನ್ನುವ ತಮ್ಮ ಸಂಶೋಧನಾ ಪ್ರಬಂಧ ಮಂಡಿಸಿ ಅವರು ಮಾತನಾಡಿದರು.

ತಮ್ಮ ಕ್ಷೇತ್ರ ಕಾರ್ಯ ಸಂದರ್ಭದಲ್ಲಿ ಅರಿಶಿಣಗೇರಿಯ ವೀರೇಂದ್ರ ಪಾಟೀಲ್‌ ಎಂಬುವರ ಮನೆಯ ಮುಂದಿನ ಅಂಗಳದ ಅಂಚಿನಲ್ಲಿ ಈ ಶಾಸನವನ್ನು ಸನಿಹದ ಬೇರೆ ಎಲ್ಲಿಂದಲೋ ತಂದು ಇಲ್ಲಿ ನಿಲ್ಲಿಸಿದಂತೆ ಕಾಣುತ್ತದೆ ಎಂದ ಅವರು, 95 ಸೆಂಮೀ ಎತ್ತರದ ಗ್ರಾನೈಟ್‌ ಶಿಲೆಯಲ್ಲಿ ಶಾಸನವನ್ನು ಖಂಡರಿಸಲಾಗಿದೆ. 30 ಸೆಂಮೀ ಅಗಲವಿರುವ ಈ ಶಾಸನ ಸುಮಾರು 8 ಇಂಚು ದಪ್ಪ ಇದೆ. ಎರಡು ಪಟ್ಟಿಕೆಯಲ್ಲಿ ತಲಾ ಮೂರು ಸಾಲಿನಂತೆ ಒಟ್ಟು ಆರು ಸಾಲುಗಳ ಶಾಸನವನ್ನು ಕೊರೆಯಲಾಗಿದೆ. ಮೇಲಿನಿಂದ ಕೆಳಕ್ಕೆ ಬಂದಂತೆ ಅಗಲದ ಪ್ರಮಾಣದಲ್ಲಿ ಕಡಿಮೆಯಾಗುತ್ತ ಬಂದಿದೆ ಎಂದು ಅವರು ವಿವರಿಸಿದರು.

ಕ್ರಿ.ಶ.6-7ನೇ ಶತಮಾನದ ಶಾಸನಗಳಲ್ಲಿ ಉಲ್ಲೇಖೀತವಾದ “ಗೌಜ’ ಎಂಬ ಹೆಸರಿನ ಗ್ರಾಮವೇ ಸಾಗರ ತಾಲೂಕಿನ ಈಗಿನ “ಗೌತಮಪುರ’ವಾಗಿದೆ. ಒಂದು ಕಾಲದಲ್ಲಿ ಈ ಪ್ರದೇಶ ದೊಡ್ಡ ಶೈವ ಕೇಂದ್ರವಾಗಿತ್ತು. ಅಲ್ಲದೆ ಇದೇ ಗ್ರಾಮದಲ್ಲಿ ದೊರೆತ ಕ್ರಿಶ 8ನೇ ಶತಮಾನದ ಶಾಸನವೊಂದರಲ್ಲಿ 100ಕ್ಕೂ ಹೆಚ್ಚು ಜನರಿಗೆ “ದಾನ ಮಾಡಿದ’ ವಿಷಯ ಹಾಗೂ “ಇಂಥಹ ಗೋತ್ರದವರಿಗೆ ಬಿಟ್ಟಿದ್ದು’ ಎಂಬ ಉಲ್ಲೇಖವನ್ನೂ ಕಾಣಬಹುದು ಎಂದು ಅವರು ತಿಳಿಸಿದರು.

ಕಾಲಾನಂತರದಲ್ಲಿ ಅನೇಕ ಶೈವ ದೇವಾಲಯಗಳು ನಾಶವಾಗಿ ವೈಷ್ಣವ- ಶ್ರೀವೈಷ್ಣವ ಪಂಥಗಳು ಪ್ರವರ್ಧಮಾನಕ್ಕೆ ಬಂದವು ಎಂದು ಅವರು ತಿಳಿಸಿ, ಈ ಶಾಸನದಲ್ಲಿ ಉಲ್ಲೇಖೀತವಾಗಿರುವ “ವಲಿಕಾ ರನ ಗದ್ದೆ’ ಅಂದರೆ ಬಹುಷ ಓರ್ವ “ವಾಲಿಕಾರನ’ ಎಂದಾಗಿರಬೇಕು. “ವಾಲಿಕಾರ’ ಎಂದರೆ ಅರಸನು ಅಕ್ಕ ಪಕ್ಕದ ಗ್ರಾಮಗಳಿಗೆ ಕಳುಹಿಸುವ ಸುದ್ದಿ, ಪತ್ರ, ದಾಖಲೆ ಇತ್ಯಾದಿಗಳನ್ನು ಕೊಂಡೊಯ್ಯುವ “ಸಂದೇಶ’ ತಲುಪಿಸುವಾತ ಎಂದರ್ಥ.

ಅದ್ದರಿಂದ ಓರ್ವ “ವಾಲಿಕಾರನಿ’ಗೆ ಒಂದಷ್ಟು ಭೂಮಿಯನ್ನು ಓರ್ವ ಆಡಳಿತಗಾರ ದಾನವಾಗಿ ನೀಡಿದ್ದಿರಬಹುದು ಎಂದು ಅವರು ತಿಳಿಸಿದರು. ಶಾಸನ ಓದುವಲ್ಲಿ ಸಹಕರಿಸಿದ ಡಾ| ಜಗದೀಶ ಎ. ಹಾಗೂ ಖ್ಯಾತ ಪುರಾತತ್ವ ಶಾಸ್ತ್ರಜ್ಞ ಪ್ರೊ| ಎ.ಸುಂದರ ಅವರಿಗೆ ಡಾ| ಹೆಗಡೆ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.

ಡಾ| ಪಿ. ನಂಜುಡಸ್ವಾಮಿ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ದತ್ತಪ್ರಸನ್ನ ಪಾಟೀಲ್‌, ಡಾ| ದೇವರ ಕೊಂಡಾರೆಡ್ಡಿ, ಸೀತಾಲಕ್ಷ್ಮೀ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.