ಬಜಗೋಳಿ ಪೇಟೆ: ಅವೈಜ್ಞಾನಿಕ ರಸ್ತೆ ವಿಭಾಜಕ


Team Udayavani, Oct 22, 2019, 5:30 AM IST

2010PALLI01A

ಬಜಗೋಳಿ: ಬೆಳೆಯುತ್ತಿರುವ ಬಜಗೋಳಿ ಪೇಟೆಯಲ್ಲಿ ಅವೈಜ್ಞಾನಿಕ ರಸ್ತೆ ವಿಭಾಜಕದಿಂದ ವಾಹನ ಸವಾರರು ಸಂಕಷ್ಟಕೀಡಾಗಿದ್ದಾರೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಕಾರ್ಕಳ ಬೈಪಾಸ್‌ ಬಳಿಯಿಂದ ಬಜಗೋಳಿ ಮೂಲಕ ಹೊಸ್ಮಾರುವರೆಗೆ 22 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೊಂಡಿತ್ತು. ಆ ಸಂದರ್ಭ ಬಜಗೋಳಿ ಕಂಬಳ ಕ್ರಾಸ್‌ ಬಳಿಯಿಂದ ಆರ್‌.ಕೆ. ನಗರದವರೆಗೆ ಹಾಗೂ ಬಜಗೋಳಿ ಪೇಟೆಯ ಮತ್ತೂಂದು ಪಾರ್ಶ್ವದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ರಸ್ತೆ ವಿಭಾಜಕ ಅಳವಡಿಸಲಾಗಿತ್ತು.

ಬಜಗೋಳಿ ಪೇಟೆಯ ಆರ್‌.ಕೆ. ನಗರದ ಆರಂಭದಲ್ಲಿ ರಸ್ತೆ ವಿಭಾಜಕ ನಿರ್ಮಿಸದೆ ಇರುವುದರಿಂದ ಪ್ರವಾಸಿ ವಾಹನ ಸವಾರರು ರಸ್ತೆ ವಿಭಾಜಕದ ಅರಿವಿಲ್ಲದೆ ಸಂಚರಿಸುವುದರಿಂದ ಮತ್ತೂಂದು ಪಾರ್ಶ್ವದ ರಸ್ತೆ ವಿಭಾಜಗ‌ಕ್ಕೆ ಢಿಕ್ಕಿ ಹೊಡೆಯುವಂತಾಗಿದೆ. ಮಳೆ ಸುರಿಯುವ ಸಂದರ್ಭ, ರಾತ್ರಿ ಹೊತ್ತು ವಾಹನ ಸವಾರರಿಗೆ ಇದು ಗಮನಕ್ಕೆ ಬಾರದೆ ತೊಂದರೆಯುಂಟಾಗುತ್ತಿದೆ.

ರಸ್ತೆ ಉಬ್ಬು ಅಳವಡಿಕೆ ಅಗತ್ಯ
ಶೃಂಗೇರಿ, ಧರ್ಮಸ್ಥಳ ಕಡೆಗೆ ಸಂಚರಿಸುವ ವಾಹನಗಳು ಅತಿ ವೇಗವಾಗಿ ಬಜಗೋಳಿ ಪೇಟೆಯ ಬಸ್‌ ತಂಗುದಾಣ ಮಾರ್ಗವಾಗಿಯೇ ಸಂಚರಿಸುವುದರಿಂದ ಇಲ್ಲಿ ರಸ್ತೆ ಉಬ್ಬು ಅಳವಡಿಸಬೇಕಾಗಿರುವುದು ಅತ್ಯವಶ್ಯ ಎಂಬುದು ಸ್ಥಳೀಯರ ಅಭಿಪ್ರಾಯ. ರಸ್ತೆ ದಾಟಲು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ರಸ್ತೆ ಉಬ್ಬು ನಿರ್ಮಿಸಿದಲ್ಲಿ ವೇಗಕ್ಕೆ ಕಡಿವಾಣ ಹಾಕುವುದರ ಜತೆಗೆ ಸಂಭವನೀಯ ಅವಘಡವನ್ನೂ ತಪ್ಪಿಸಬಹುದು ಎನ್ನುತ್ತಾರೆ ಸ್ಥಳೀಯರು.

ಈ ರಸ್ತೆಯಲ್ಲಿ ರಿಫ್ಲೆಕ್ಟರ್‌ ಹಾಗೂ ಯಾತ್ರಾರ್ಥಿಗಳಿಗೆ ಸೂಕ್ತ ನಿರ್ದೇಶನ ನೀಡುವ ಸೂಚನ ಫ‌ಲಕಗಳಿಲ್ಲದ ಕಾರಣ ವಾಹನ ಸವಾರರು ರಾತ್ರಿ ವೇಳೆಯಲ್ಲಿ ಗೊಂದಲಕ್ಕೆ ಈಡಾಗುವ ಘಟನೆಗಳು ನಡೆದಿವೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂಬುದು ನಾಗರಿಕರ ಆಗ್ರಹ.

ದಾರಿದೀಪ ವ್ಯವಸ್ಥೆಗೆ ಕ್ರಮ
ಇತ್ತೀಚೆಗಿನ ದಿನಗಳಲ್ಲಿ ಬಜಗೋಳಿ ಪೇಟೆಯಲ್ಲಿ ಅಪಘಾತಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ರಿಫ್ಲೆಕ್ಟರ್‌ ಅಳವಡಿಸುವ ಜತೆಗೆ ಇಲಾಖೆಯ ವತಿಯಿಂದ ದಾರಿದೀಪ ವ್ಯವಸ್ಥೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಸೋಮ್‌ಶೇಖರ್‌, ಸಹಾಯಕ ಇಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಕಾರ್ಕಳ

ದಾರಿ ದೀಪ ಇಲ್ಲ
ಪೇಟೆಯಲ್ಲಿರುವ ರಸ್ತೆ ವಿಭಾಜಕಕ್ಕೆ ದಾರಿದೀಪ ಅಳವಡಿಸದೆ ಇರುವುದರಿಂದ ವಾಹನ ಸವಾರರಿಗೆ ಇದರ ಅರಿಲ್ಲದೆ ನಿರಂತರ ಅವಘಡ ಸಂಭವಿಸುವಂತಾಗಿದೆ. ರಸ್ತೆ ವಿಸ್ತರಣೆ ಸಂದರ್ಭ ಇದ್ದ ಕೆಲ ದಾರಿದೀಪಗಳನ್ನು ತೆರವುಗೊಳಿಸಲಾಗಿದ್ದು, ಪೇಟೆಯ ನಡುವೆ ಹಾದುಹೋಗಿರುವ ಎಲ್ಲ ರಸ್ತೆ ವಿಭಾಜಕದ ಭಾಗಗಳಲ್ಲಿ ದಾರಿದೀಪ ಅತ್ಯವಶ್ಯಕವಾಗಿದೆ. ಅಲ್ಲದೆ ಇದಕ್ಕೆ ಬಣ್ಣ ಬಳಿಯುವುದೂ ಅತ್ಯವಶ್ಯಕ.

ರಿಫ್ಲೆಕ್ಟರ್‌ ಅಳವಡಿಸಿ
ಬಜಗೋಳಿ ಪೇಟೆಯಲ್ಲಿ ದಾರಿದೀಪದ ವ್ಯವಸ್ಥೆ ಅತ್ಯಗತ್ಯವಾಗಿದ್ದು, ಇದರ ಜತೆಗೆ ರಸ್ತೆ ವಿಭಾಜಕಗಳಿಗೆ ಸೂಕ್ತ ರಿಫ್ಲೆಕ್ಟರ್‌ ಅಳವಡಿಸಿ ಅಪಘಾತ ತಪ್ಪಿಸಬಹುದಾಗಿದೆ.
-ಜಿತೇಶ್‌ ಪೂಜಾರಿ, ಬಜಗೋಳಿ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.