ರಾಜ್ಯ ಹೆದ್ದಾರಿಯಲ್ಲೊಂದು ಅಗಲ ಕಿರಿದಾದ ಸೇತುವೆ


Team Udayavani, Oct 22, 2019, 5:37 AM IST

e-18

 ಅಪಾಯಕ್ಕೆ ಆಹ್ವಾನ; ಪೇರಡ್ಕ ಸಮೀಪ ರಸ್ತೆ ವಿಸ್ತರಣೆಗೆ ನೂಜಿಬಾಳ್ತಿಲ ಗ್ರಾಮಸ್ಥರ ಆಗ್ರಹ

ಕಲ್ಲುಗುಡ್ಡೆ: ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾದು ಹೋಗುತ್ತಿರುವ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ರೆಂಜಿಲಾಡಿ ಗ್ರಾಮದ ಪೇರಡ್ಕ ಬಳಿಯ ಕಾಜರಕಟ್ಟೆ ಸೇತುವೆ ಅಗಲ ಕಿರಿದಾಗಿದ್ದು, ಅಪಘಾತವಾಗುವ ಸಂಭವವಿರುವುದರಿಂದ ಸೇತುವೆಯನ್ನು ವಿಸ್ತರಣೆ ಅಥವಾ ಹೊಸ ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹ ವ್ಯಕ್ತವಾಗಿದೆ.

ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದೇವಸ್ಥಾನಗಳನ್ನು ಸಂಪರ್ಕಿಸುವ ಸುಬ್ರಹ್ಮಣ್ಯ – ಮರ್ದಾಳ – ಪೆರಿಯಶಾಂತಿ – ಧರ್ಮಸ್ಥಳ ರಾಜ್ಯ ಹೆದ್ದಾರಿ ಡಾಮರು ಕಾಮಗಾರಿ ನಡೆದಿದ್ದು, ಪೇರಡ್ಕ ಬಳಿಯ ಕಾಜರಕಟ್ಟೆ ಸೇತುವೆ ಅಗಲ ಕಿರಿದಾಗಿದೆ. ತಡೆಗೋಡೆಗಳೂ ಶಿಥಿಲಾವಸ್ಥೆಯಿಂದ ಕೂಡಿವೆ. ಪ್ರಸಕ್ತ ಒಂದು ವಾಹನ ಮಾತ್ರ ಸಂಚರಿಸಲು ಸಾಧ್ಯವಾಗಿದ್ದು, ಇದು ವಾಹನ ಸವಾರರಿಗೂ, ಪಾದಚಾರಿಗಳಿಗೂ ಅಪಾಯಕಾರಿ.

ಅಧಿಕ ಸಂಚಾರ
ಇಚ್ಲಂಪಾಡಿಯಲ್ಲಿ ಗುಂಡ್ಯ ಹೊಳೆಗೆ ಸೇತುವೆ ನಿರ್ಮಾಣಗೊಂಡು ಹೆದ್ದಾರಿ ಅಭಿವೃದ್ಧಿಯಾದ ಬಳಿಕ ಪೆರಿಯಶಾಂತಿ – ಮರ್ದಾಳ ರಸ್ತೆಯಲ್ಲಿ ಸುಬ್ರಹ್ಮಣ್ಯ, ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಗೆ ಭೇಟಿ ಕೊಡುವ ಭಕ್ತರು ಇಲ್ಲಿಂದಲೇ ಪ್ರಯಾಣಿಸುತ್ತಿದ್ದು, ದಿನಂಪ್ರತಿ 500ಕ್ಕೂ ಅಧಿಕ ವಾಹನಗಳು, ಹಲವು ಕೆಎಸ್‌ಆರ್‌ಟಿಸಿ ಬಸ್ಸುಗಳು ಸಂಚರಿಸುತ್ತಿದ್ದು, ವಾಹನ ದಟ್ಟನೆಯೂ ಈ ರಸ್ತೆಯಲ್ಲಿ ಹೆಚ್ಚುತ್ತಿದೆ.

ಈ ರಸ್ತೆಯಲ್ಲಿ ಅಧಿಕ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಹೊರ ಜಿಲ್ಲೆ, ರಾಜ್ಯದ ಪ್ರಯಾಣಿಕರಿಗೆ ಇಲ್ಲಿ ಅಗಲ ಕಿರಿದಾದ ಸೇತುವೆ ಇರುವುದು ತತ್‌ಕ್ಷಣಕ್ಕೆ ಗಮನಕ್ಕೆ ಬಾರದಿರುವುದರಿಂದ ಅಪಾಯದ ಭೀತಿಯನ್ನು ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ. ವಿಸ್ತರಣೆಗೆ ಆಗ್ರಹ ವ್ಯಕ್ತವಾಗಿದೆ.

ವಿಸ್ತರಣೆ ಕಷ್ಟಕರ?
ಪೇರಡ್ಕ ಕಾಜರಕಟ್ಟೆ ಸೇತುವೆಯನ್ನು ವಿಸ್ತರಣೆ ಮಾಡುವುದು ಕಷ್ಟಕರವಾಗಬಹುದು. ಜತೆಗೆ ಕಾಮಗಾರಿ ನಡೆಸಲೂ ಸಮಸ್ಯೆಯಿದೆ. ಬದಲಿ ಬೃಹತ್‌ ಸೇತುವೆ ನಿರ್ಮಿಸು ವುದು ಸೂಕ್ತ ಎನ್ನುವುದು ಸಾರ್ವಜನಿಕರ ಮಾತು. ಕೈಕಂಬ ಕೋಟೆ ಹೊಳೆ ಸೇತುವೆ ಮೇಲ್ದರ್ಜೆಗೇರಿಸಿದಲ್ಲಿ ಈ ಭಾಗದಲ್ಲಿ ಮುಳುಗು ಸೇತುವೆಗಳಿಗೆ ಅಂತ್ಯ ಸಿಗಲಿದೆ ಎಂದು ಸ್ಥಳೀಯರು ಅಭಿಪ್ರಾಯಿಸಿದ್ದಾರೆ.
ಕಿರಿದಾದ ಸೇತುವೆ

ಮರ್ದಾಳ – ಪೆರಿಯಶಾಂತಿ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರುವ ಮೊದಲು 30 ವರ್ಷಗಳ ಹಿಂದೆ ಪೇರಡ್ಕ ಕಾಜರಕಟ್ಟೆ ಎಂಬಲ್ಲಿ ತೋಡಿಗೆ ಸೇತುವೆ ನಿರ್ಮಿಸಿದ್ದು, ಬಳಿಕ ರಸ್ತೆ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿ ಅಭಿವೃದ್ಧಿಗೊಂಡು, ವಿಸ್ತರಣೆಯಾದರೂ ಈ ಸೇತುವೆಯನ್ನು ವಿಸ್ತರಿಸದ ಕಾರಣ ಸೇತುವೆ ಕಿರಿದಾಗಿದೆ. ಒಂದು ವಾಹನ ಸಂಚಾರ ಮಾತ್ರ ಸಾಧ್ಯವಾಗುತ್ತಿದ್ದು, ರಾತ್ರಿ ಹೊತ್ತು ಸೇತುವೆ ಬಹಳ ಅಪಾಯಕಾರಿ. ಮುಂದೆ ತಿರುವು ಇರುವುದರಿಂದಲೂ ಅಪಘಾತ ವಾಗುವ ಸಂಭವವನ್ನು ಅಲ್ಲ ಗೆಳೆಯುವಂತಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

 ಪ್ರಸ್ತಾವನೆ ಸಲ್ಲಿಕೆ
ಧರ್ಮಸ್ಥಳ – ಮರ್ದಾಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿರುವ ಪೇರಡ್ಕದ ಅಗಲ ಕಿರಿದಾದ ಸೇತುವೆಯನ್ನು ವಿಸ್ತರಣೆಗೆ ಕೆಆರ್‌ಡಿಸಿಎಲ್‌ ಅವರಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಜತೆಗೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಸೇತುವೆಯನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಸುಳ್ಯ ಶಾಸಕ ಎಸ್‌. ಅಂಗಾರ ಅವರೂ ಈ ಬಗ್ಗೆ ಸೂಚನೆ ನೀಡಿದ್ದಾರೆ.
– ಪ್ರಮೋದ್‌ , ಎಂಜಿನಿಯರ್‌, ಪಿಡಬ್ಲೂಡಿ ಪುತ್ತೂರು

ಅಪಾಯಕಾರಿ
ಪೇರಡ್ಕ ಹೆದ್ದಾರಿಯಲ್ಲಿರುವ ಕಿರಿದಾದ ಸೇತುವೆ ವಾಹನ ಸವಾರರಿಗೆ, ಪಾದಚಾರಿಗಳಿಗೂ ಅಪಾಯಕಾರಿ ಯಾಗಿದ್ದು, ಸೇತುವೆ ವಿಸ್ತರಣೆ ಅಥವಾ ಬೃಹತ್‌ ಸೇತುವೆಗೆ ಇಲಾಖೆ ಕೂಡಲೇ ಮುಂದಾಗಲಿ.
– ವಸಂತ ಕುಬುಲಾಡಿ, ಕಡಬ ತಾ| ಸಂಚಾಲಕರು, ದಸಂಸ (ಅಂಬೇಡ್ಕರ್‌ ವಾದ)

  ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.