ಶಂಕಿತ ಬಾಂಗ್ಲಾ ವಲಸಿಗ ವಶಕ್ಕೆ
Team Udayavani, Oct 22, 2019, 3:00 AM IST
ಹಾಸನ: ಸಕಲೇಶಪುರ ತಾಲೂಕಿನಲ್ಲಿ ರೈಲ್ವೆ ಹಳಿಗಳ ಮೇಲೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಶಂಕಿತ ಬಾಂಗ್ಲಾ ವಲಸಿಗನನ್ನು ರೈಲ್ವೆ ಪೊಲೀಸರು ಸೋಮವಾರ ಸಂಜೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಭಾರೀ ಮಳೆಯಾಗುತ್ತಿರುವುದರಿಂದ ಭೂ ಕುಸಿತವಾಗಬಹುದೆಂಬ ಹಿನ್ನೆಲೆಯಲ್ಲಿ ಸಕಲೇಶಪುರ -ಆಲುವಳ್ಳಿ ನಡುವೆ ರೈಲ್ವೆ ಗ್ಯಾಂಗ್ಮನ್ಗಳು ಮತ್ತು ಎಂಜಿನಿಯರುಗಳು ರೈಲ್ವೆ ಮಾರ್ಗದ ಮೇಲೆ ಗಸ್ತು ತಿರುಗುತ್ತಿದ್ದಾಗ ಸುಮಾರು 18 ರಿಂದ 19 ವಯಸ್ಸಿನ ಯುವಕನೊಬ್ಬ ಅನುಮಾನಾಸ್ಪದವಾಗಿ ರೈಲ್ವೆ ಹಳಿಗಳ ಮೇಲೆ ಹೋಗುತ್ತಿದ್ದ. ಆತನನ್ನು ವಿಚಾರಿಸಿದಾಗ ಅತ ಸ್ಪಷ್ಟ ಮಾಹಿತಿ ನೀಡಲಿಲ್ಲ.
ಹಾಗಾಗಿ ಆತನನ್ನು ಸಕಲೇಶಪುರದ ರೈಲ್ವೆ ಪೊಲೀಸರಿಗೆ ತಂದು ಒಪ್ಪಿಸಿದ್ದಾರೆ. ರೈಲ್ವೆ ಪೊಲೀಸರು ಹಿರಿಯ ರೈಲ್ವೆ ಪೊಲೀಸರ ವಶಕ್ಕೆ ಆತನನ್ನು ಒಪ್ಪಿಸಿದ್ದು, ಆತ ಹಿಂದಿ ಮಿಶ್ರಿತ ಭಾಷೆ ಮಾತನಾಡುತ್ತಿದ್ದು, ಒಮ್ಮೆಮ್ಮೆ ಬಂಗಾಳಿ ಮಾತನಾಡುತ್ತಾನೆಂದು ರೈಲ್ವೆ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ರೈಲ್ವೆ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ರಾಜ್ಯ ಪೊಲೀಸರ ವಶಕ್ಕೆ ಒಪ್ಪಿಸಲು ನಿರ್ಧರಿಸಿರು ವುದಾಗಿ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು