ಬಾಂಬೆ ಬ್ಲಡ್ ನೀಡಿದ ಸಾಗರದ ವಿದ್ಯಾರ್ಥಿ
Team Udayavani, Oct 22, 2019, 3:01 PM IST
ಸಾಗರ: ಅಪರೂಪವಾದ ಬಾಂಬೆ ಬ್ಲಡ್ ಗ್ರೂಪ್ ಹೊಂದಿರುವ ನಗರದ ಎಲ್.ಬಿ. ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಉದಯಕುಮಾರ್ ಅವರು ಅಗತ್ಯವಿರುವ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರಕ್ತದಾನ ಮಾಡಿದ ಘಟನೆ ಸೋಮವಾರ ನಡೆದಿದೆ.
ಈಚೆಗೆ ಎಲ್ಬಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆದ ಸಂದರ್ಭ ವಿದ್ಯಾರ್ಥಿ ಉದಯಕುಮಾರ ಅವರ ರಕ್ತದ ಗುಂಪು ಬಹಳ ಅಪರೂಪದ್ದು ಎಂಬ ಮಾಹಿತಿ ಇಲ್ಲಿನ ರಕ್ತನಿಧಿ ಕೇಂದ್ರಕ್ಕೆ ಲಭ್ಯವಾಗಿದೆ. ಉದಯಕುಮಾರ ಮೂಲತಃ ಸಿದ್ದಾಪುರ ತಾಲೂಕಿನ ಆಡುಕಟ್ಟಾ ಸಮೀಪದ ಕೊರ್ಲಕೈ ಗ್ರಾಮದವರಾಗಿದ್ದು, ಎಲ್ಬಿ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಾರೆ.
ಇಲ್ಲಿನ ರಕ್ತನಿ ಧಿ ಕೇಂದ್ರದಲ್ಲಿ ಬಾಂಬೆ ಬ್ಲಿಡ್ ಗ್ರೂಪ್ನ ರಕ್ತ ಲಭ್ಯವಿದೆ ಎಂಬ ಮಾಹಿತಿಯನ್ನು ಕೇಂದ್ರದವರು ಸಂಕಲ್ಪ ಇಂಡಿಯನ್ ಎಂಬ ಆನ್ ಲೈನ್ ಮಾಹಿತಿ ಮೂಲಕ ಪೋಸ್ಟ್ ಮಾಡಿದ್ದರು. ಈ ಗ್ರೂಪ್ ಅಗತ್ಯವಿರುವ ಬೆಂಗಳೂರು ಮೂಲದ ವ್ಯಕ್ತಿ ಮತ್ತವರ ಕುಟುಂಬದವರು ರಕ್ತನಿಧಿ ಕೇಂದ್ರ ಸಂಪರ್ಕಿಸಿ ಸೋಮವಾರ ಇಲ್ಲಿಗೆ ಬಂದಿದ್ದಾರೆ.
ಇಲ್ಲಿನ ಸುಮುಖ ಆಸ್ಪತ್ರೆಯಲ್ಲಿ ಸೂಕ್ತ ಪರಿಶೀಲನೆ ನಂತರ ರಕ್ತ ನೀಡಲಾಗಿದೆ. ರಕ್ತವನ್ನು ಪಡೆದುಕೊಂಡವರಿಂದ ಯಾವುದೇ ಶುಲ್ಕ ಪಡೆದುಕೊಳ್ಳದೆ ಉಚಿತವಾಗಿ ಬಾಂಬೆ ಬ್ಲಿಡ್ ಗ್ರೂಪ್ ನೀಡುವ ಮೂಲಕ ರೋಟರಿ ರಕ್ತ ನಿಧಿ ಕೇಂದ್ರ ಮಾನವೀಯತೆ ಮೆರೆದಿದೆ. ಕೇಂದ್ರದ ಡಾ.ಎಚ್.ಎಂ.ಶಿವಕುಮಾರ, ಡಾ. ಬಿ.ಜಿ.ಸಂಗಂ, ಡಾ.ಅರುಣ್ಕುಮಾರ್, ಟೆಕ್ನಿಶಿಯನ್ ಹರೀಶ್, ಸಿಬ್ಬಂದಿ
ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ