ಜಾಗೀರನಂದಿಹಾಳ ಜನರಿಗೆ ಬಸಿ ನೀರಿನ ಬಿಸಿ!


Team Udayavani, Oct 22, 2019, 3:30 PM IST

rc-tdy-1

ಲಿಂಗಸುಗೂರು: ತಾಲೂಕಿನ ಜಾಗೀರ ನಂದಿಹಾಳ ಗ್ರಾಮದಲ್ಲಿ ಬಸಿ ನೀರಿನಿಂದಾಗಿ ಗ್ರಾಮಸ್ಥರು ನೂರೆಂಟು ಸಮಸ್ಯೆ ಎದುರಿಸುವಂತಾಗಿದೆ.

ಚಿತ್ತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಗೀರ ನಂದಿಹಾಳ ಗ್ರಾಮ ತಗ್ಗು ಪ್ರದೇಶದಲ್ಲಿದೆ. ಗ್ರಾಮದಲ್ಲಿ 170ಕ್ಕೂ ಹೆಚ್ಚು ಮನೆಗಳಿವೆ. ಈ ಪೈಕಿ ಸುಮಾರು 90ಕ್ಕೂ ಅಧಿಕ ಮನೆಗಳಲ್ಲಿ ನೀರು ಬಸಿಯುತ್ತತ್ತಿದ್ದು, ಗ್ರಾಮಸ್ಥರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ.

ಗ್ರಾಮಕ್ಕೆ ಹೊಂದಿಕೊಂಡು ಹಳ್ಳವಿದೆ. ಅಲ್ಲದೇ ರಾಂಪುರ ಏತ ನೀರಾವರಿ ಯೋಜನೆಯ ನಾಲೆ ನಿರ್ಮಿಸಲಾಗಿದೆ. ನಾಲೆಯಲ್ಲಿ ನೀರಿದ್ದಾಗ ಮತ್ತು ನಿರಂತರ ಮಳೆ ಸುರಿಯಲು ಆರಂಭಿಸಿದರೆ ಗ್ರಾಮದ 90ಕ್ಕೂ ಹೆಚ್ಚು ಮನೆಗಳ ಗೋಡೆಗಳಿಂದ ನೀರು ಚಿಮ್ಮುತ್ತಿದೆ. ಇದರಿಂದ ಮನೆ ಒಳಗೆ ಮತ್ತು ಅಂಗಳದಲ್ಲಿ ನೀರು ನಿಲ್ಲುತ್ತದೆ. ಮನೆಯೊಳಗೆ ಎರಡು ಅಡಿವರೆಗೂ ನೀರು ಸಂಗ್ರಹವಾಗುತ್ತದೆ. ನಿವಾಸಿಗಳು ಈ ನೀರನ್ನು ಮೋಟಾರ್‌ ಇಲ್ಲವೇ ಬಕೆಟ್‌ ನಿಂದ ತುಂಬಿ ಹೊರಚೆಲ್ಲುವುದು ನಿತ್ಯ ಕಾಯಕವಾಗಿದೆ.

ಮನೆಯ ಗೋಡೆಗಳು ಕನಿಷ್ಠವೆಂದರೂ ಮೂರು ಅಡಿ ಎತ್ತರದವರೆಗೆ ತೇವಾಂಶ ಹೊಂದಿರುತ್ತವೆ. ಹೀಗಾಗಿ ಅನೇಕ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡು ನೆಲಕ್ಕುರುಳಿವೆ. ಸ್ವಂತ ಮನೆ ಬಿಟ್ಟು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ ಬಸಿ ನೀರಿನಿಂದ ಬಾಧಿತರಾದ ಗ್ರಾಮಸ್ಥರು. ಮನೆಗಳಲ್ಲಿ ನಿಲ್ಲುವ ನೀರನ್ನು ನಿವಾಸಿಗಳು ಹೊರ ಚೆಲ್ಲುವುದರಿಂದ ಮತ್ತು ರಸ್ತೆಗಳಲ್ಲೂ ಬಸಿ ನೀರು ನಿಲ್ಲುವುದರಿಂದ ರಸ್ತೆಗಳು ಕೆಸರುಗದ್ದೆಯಂತಾಗಿದೆ.  ಜನ, ವಾಹನ ಸಂಚಾರಕ್ಕೆ ಪರದಾಡುವಂತಾಗಿದೆ.

ಇನ್ನು ಗ್ರಾಮದಲ್ಲಿನ ಚರಂಡಿ ಸ್ವತ್ಛ ಮಾಡದ್ದರಿಂದ ರಸ್ತೆಗಳಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆ ಹಾವಳಿ ಹೆಚ್ಚಿದೆ. ಡೆಂಘೀ, ಚಿಕೂನ್‌ ಗುನ್ಯಾ ಸೇರಿ ವಿವಿಧ ಸಾಂಕ್ರಾಮಿಕ ರೋಗ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಸದಾ ತೇವಾಂಶದಿಂದಾಗಿ ಗ್ರಾಮಸ್ಥರಿಗೆ ಚರ್ಮರೋಗ ಕೂಡ ಕಾಡುತ್ತಿದೆ. ಇಷ್ಟೆಲ್ಲ ಸಮಸ್ಯೆಯಿದ್ದರೂ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಗ್ರಾಮವನ್ನು ತಾತ್ಸಾರದಿಂದ ಕಾಣುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಬಸಿ ನೀರಿನ ಸಮಸ್ಯೆ ಇಂದು, ನಿನ್ನೆಯದಲ್ಲಾ ಇದು ರಾಂಪುರ ಏತ ನೀರಾವರಿ ಯೋಜನೆ ಪ್ರಾರಂಭವಾದಾಗಿನಿಂದ ಗ್ರಾಮಸ್ಥರನ್ನು ಕಾಡುತ್ತಿದೆ. ತಾಲೂಕು ಕೇಂದ್ರದಿಂದ 16 ಕಿ.ಮೀ. ದೂರವಿರುವ ಈ ಗ್ರಾಮದ ಸಮಸ್ಯೆ ಪರಿಹರಿಸುವಲ್ಲಿ ತಾಲೂಕು ಆಡಳಿತವೂ ನಿರ್ಲಕ್ಷ ವಹಿಸಿದೆ ಎನ್ನುತ್ತಾರೆ ಗ್ರಾಮಸ್ಥರು.

 

-ಶಿವರಾಜ ಕೆಂಬಾವಿ

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.