ಸ್ಥಳೀಯ ಸಂಸ್ಥೆ ಚುನಾವಣೆ ಶಕ್ತಿ ಇರುವ ಕಡೆ ಸ್ಪರ್ಧೆ
Team Udayavani, Oct 23, 2019, 3:05 AM IST
ಬೆಂಗಳೂರು: “ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಕ್ತಿ ಇರುವ ಕಡೆ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪ್ರಸ್ತುತ ಜೆಡಿಎಸ್ನ ಓರ್ವ ಸದಸ್ಯ ಇದ್ದು ಐದು ಕಡೆ ಗೆಲ್ಲುವ ಅವಕಾಶವಿದೆ. ಪರಿಷತ್ ಸದಸ್ಯ ಬಿ.ಎಂ.ಫರೂಕ್ ಅವರಿಗೆ ಅಲ್ಲಿನ ಉಸ್ತುವಾರಿ ನೀಡಲಾಗುವುದು.
ಅದೇ ರೀತಿ ದಾವಣಗೆರೆ ಮಹಾ ನಗರ ಪಾಲಿಕೆಗೆ ಅಭ್ಯರ್ಥಿ ಗಳ ಆಯ್ಕೆ ಉಸ್ತುವಾರಿ ವಿಧಾನಪರಿಷತ್ನ ಮಾಜಿ ಸದಸ್ಯರೂ ಆದ ಶಿವಶಂಕರ್ಗೆ ವಹಿಸಲಾಗುವುದು ಎಂದು ಹೇಳಿದರು. ಕೋಲಾರ, ಚಿಕ್ಕಬಳ್ಳಾಪುರ, ಕನಕಪುರ, ಮಾಗಡಿಯಲ್ಲಿ ಪಕ್ಷದ ವತಿಯಿಂದ ಯುವಕರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಸೋಲು-ಗೆಲುವು ಬೇರೆ ವಿಚಾರ. ಆದರೆ, ಸ್ಪರ್ಧೆ ಮಾಡಿ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಯಾದಗಿರಿಯಲ್ಲಿ ನಮ್ಮ ಪಕ್ಷದ ಯುವ ಜಿಲ್ಲಾಧ್ಯಕ್ಷ ಸೇರಿ ಹಲವು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶಾಸಕ ನಾಗನಗೌಡ ಕುಂದಕೂರ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ದ್ದಾಗ ನೀಡಿದ್ದ ಅನುದಾನ ರದ್ದು ಮಾಡಿದ್ದಕ್ಕೆ ಮುಖ್ಯಮಂತ್ರಿಯವರ ಕಾರು ತಡೆದು ಪ್ರತಿಭಟನೆ ಮಾಡಿದ್ದಕ್ಕೆ ಬಂಧಿಸಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದರೂ ನಿತ್ಯ ಕರೆದು ಹಿಂಸೆ ನೀಡುತ್ತಿದ್ದಾರೆ. ನಾನು ಬುಧವಾರ ಅಲ್ಲಿಗೆ ಹೋಗುತ್ತಿದ್ದೇನೆ. ನಮ್ಮ ಕಾರ್ಯಕರ್ತರಿಗೆ ತೊಂದರೆಯಾದರೆ ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ