ಮುಳುಗಿದ ಬದುಕು

ಕೃಷ್ಣಾ , ಮಲಪ್ರಭಾ, ಘಟಪ್ರಭಾ, ತುಂಗಭದ್ರಾ, ವರದಾ, ವೇದಗಂಗಾ ಆರ್ಭಟ: 6 ಮಂದಿ ಸಾವು

Team Udayavani, Oct 23, 2019, 6:00 AM IST

t-39

ಪ್ರವಾಹದಿಂದಾಗಿ ಚಿಕ್ಕೋಡಿಯ ದತ್ತಮಂದಿರ ಮುಳುಗಿದೆ.

ಹುಬ್ಬಳ್ಳಿ: ಉತ್ತರ ಕರ್ನಾಟಕ, ಮಲೆನಾಡು ಹಾಗೂ ಮಧ್ಯ ಕರ್ನಾಟಕದಲ್ಲಿ ವರುಣಾಘಾತ ಮುಂದುವರಿದಿದ್ದು, ಮತ್ತೆ ಆರು ಮಂದಿ ಸಾವಿಗೀಡಾಗಿದ್ದಾರೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ, ತುಂಗಭದ್ರಾ, ವರದಾ, ವೇದಗಂಗಾ, ದೂಧಗಂಗಾ ನದಿ, ಬೆಣ್ಣಿ ಮತ್ತು ದೋಣಿ ಹಳ್ಳದ ಒಡಲು ಉಕ್ಕೇರಿದ್ದು, ತೀರ ಪ್ರದೇಶದ ಜನರ ಬದುಕನ್ನೇ ಆಪೋಶನ ತೆಗೆದುಕೊಂಡಿವೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಆಲಮಟ್ಟಿಯಿಂದ 2.50 ಲಕ್ಷ ಕ್ಯುಸೆಕ್‌, ನಾರಾಯಣ ಪುರದಿಂದ 2.57 ಲಕ್ಷ ಕ್ಯುಸೆಕ್‌, ಟಿ.ಬಿ ಡ್ಯಾಂನಿಂದ 1.75 ಲಕ್ಷ ಕ್ಯುಸೆಕ್‌, ನವಿಲುತೀರ್ಥ ಜಲಾಶಯದಿಂದ 8,700 ಕ್ಯುಸೆಕ್‌, ಮಹಾರಾಷ್ಟ್ರದ ರಾಜಾಪುರ ಬ್ಯಾರೇಜಿನಿಂದ 1.15 ಲಕ್ಷ ಕ್ಯುಸೆಕ್‌ ನೀರು ನದಿಗೆ ಬಿಡಲಾಗುತ್ತಿದ್ದು, ತೀರ ಪ್ರದೇಶ ದಲ್ಲಿ ಜಲಪ್ರಳಯವೇ ಉಂಟಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಗೆ ಜನ ಜೀವನ ನಲುಗಿ ಹೋಗಿದೆ. ಶಿವಮೊಗ್ಗದಲ್ಲಿ ಮಳೆ ಆರ್ಭಟ ಕೊಂಚ ಕಡಿಮೆಯಾಗಿದೆ.

ಇತಿಹಾಸ ಪ್ರಸಿದ್ಧ ಯಲ್ಲಮ್ಮದೇವಿ ದೇವಸ್ಥಾನದ ಆವರಣ ಭಾರೀ ಮಳೆಯಿಂದ ಜಲಾವೃತವಾಗಿದೆ. ಕೃಷ್ಣಾ ಮತ್ತು ಉಪನದಿಗಳ ಪ್ರವಾಹದಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಆರು ಸೇತುವೆಗಳು ಜಲಾವೃತವಾಗಿ ಸಂಚಾರ ಕಡಿತಗೊಂಡಿದೆ. ಕೊಲ್ಲಾಪುರ ಜಿಲ್ಲೆ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತ ಮಂದಿರ ಇದೇ ವರ್ಷದಲ್ಲಿ ನಾಲ್ಕನೆ ಬಾರಿಗೆ ಮುಳುಗಡೆಯಾಗಿದೆ.

ಬಂಡೆ ಕುಸಿತ ಭೀತಿ
ಗೋಕಾಕ ಪಟ್ಟಣದಲ್ಲಿ ಧಾರಾಕಾರ ಮಳೆಗೆ ಮಲ್ಲಿಕಾರ್ಜುನ ಬೆಟ್ಟದಲ್ಲಿನ ದೊಡ್ಡ ಗಾತ್ರದ ಬಂಡೆಗಳು ಕುಸಿ ಯುವ ಭೀತಿ ಎದುರಾಗಿದೆ. ಇದರಿಂದ ಕೆಳಗಿನ ಪ್ರದೇಶ ದಲ್ಲಿ ಇರುವ ಜನರಿಗೆ ಆತಂಕ ಉಂಟಾಗಿದೆ. ಬಂಡೆ ಗಳನ್ನು ತೆರವುಗೊಳಿಸಲು ಎನ್‌ಡಿಆರ್‌ಎಫ್‌ ತಂಡವನ್ನು ಕರೆಸಲಾಗಿದೆ.

ಐಹೊಳೆ, ಪಟ್ಟದಕಲ್ಲು ಮುಳುಗಡೆ
ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳ ಅಬ್ಬರದಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಮೂರನೇ ಬಾರಿ ನೆರೆ ಬಂದಿದೆ. ಪಟ್ಟಣದಕಲ್ಲು , ಐಹೊಳೆಯ ಪಾರಂಪರಿಕ ದೇವಸ್ಥಾನಗಳಿಗೆ ನೀರು ನುಗ್ಗಿದೆ.

ಮಧ್ಯ ಕರ್ನಾಟಕದಲ್ಲೂ ಮಳೆ ಅಬ್ಬರ
ಚಿತ್ರದುರ್ಗ, ದಾವಣಗೆರೆ ಸಹಿತ ಮಧ್ಯ ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದ್ದು, ಹೊಸದುರ್ಗ, ಚಿತ್ರದುರ್ಗ, ಹಿರಿಯೂರು ಮತ್ತು ಹೊಳಲ್ಕೆರೆ ತಾಲೂಕುಗಳು ತತ್ತರಿಸಿವೆ.
ಚಿಕ್ಕಮಗಳೂರು ಜಿಲ್ಲೆಯಿಂದ ಚಿತ್ರದುರ್ಗಕ್ಕೆ ಹರಿಯುವ ವೇದಾವತಿ ನದಿ ಮೈದುಂಬಿ ಹರಿಯುತ್ತಿದ್ದು, ವಾಣಿವಿಲಾಸ ಸಾಗರಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಚಿತ್ರದುರ್ಗ ತಾಲೂಕಿನ ಜಾನಕಲ್‌ ಬಳಿ ಕಾರೊಂದು ನೀರಿಗೆ ಸಿಲುಕಿ ಕೊಚ್ಚಿ ಹೋಗಿದೆ.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.