ವಿದೇಶಿ ಹಾಲು ಬಂದರೆ ಮಹಿಳೆಯರೂ ಆತ್ಮಹತ್ಯೆ


Team Udayavani, Oct 24, 2019, 3:00 AM IST

videshi-haalu

ಮೈಸೂರು: ಮುಕ್ತ ವ್ಯಾಪಾರಕ್ಕೆ ಭಾರತ ಹೆಬ್ಬೆಟ್ಟು ಒತ್ತಿದರೆ, ನ್ಯೂಜಿಲೆಂಡ್‌ ಮತ್ತು ಆಸ್ಟ್ರೇಲಿಯಾಗಳ ಹಾಲು ಮತ್ತು ಹಾಲಿನ ಉತ್ಪನ್ನಗಳು ಭಾರತಕ್ಕೆ ದಾಳಿ ಮಾಡಲಿದ್ದು, ಈ ಹಾಲಿನ ಯುದ್ಧದಲ್ಲಿ ಭಾರತದಲ್ಲಿ ಹಾಲನ್ನೇ ಜೀವನಾಧಾರ ಮಾಡಿಕೊಂಡವರ ಬದುಕು ನಾಶವಾಗಿ, ಮಹಿಳೆಯರೂ ಆತ್ಮಹತ್ಯೆಗೆ ಶರಣಾಗತೊಡಗುತ್ತಾರೆ ಎಂದು ಸಾಹಿತಿ ದೇವನೂರ ಮಹಾದೇವ ಆತಂಕ ವ್ಯಕ್ತಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷರು ಮಾತ್ರ ಯಾಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲವಲ್ಲ ಎಂದು ಸರ್ಕಾರ ಚಿಂತಿಸಿ ಈ ಒಪ್ಪಂದಕ್ಕೆ ಸಹಿ ಹಾಕುತ್ತಿರಬಹುದೇ ಎಂದು ಪ್ರಶ್ನಿಸಿದರು.

ಆರ್ಥಿಕತೆ ಕುಸಿತ: ಮನುಷ್ಯನ ಕೃತ್ಯದ ಹವಾಮಾನ ವೈಪರೀತ್ಯದಿಂದಾಗಿ ಪ್ರಕೃತಿ ಕುಪಿತಗೊಂಡು ನೆರೆ, ಪ್ರವಾಹದಿಂದ ಜನರ ಬದುಕು ಮುಳುಗಡೆಯಾಗುತ್ತಿದೆ. ಪಕ್ಕದಲ್ಲೇ ಮಳೆ ಇಲ್ಲದೆ ಬೆಳೆ, ಜನ ಒಣಗಿ ಹೋಗುತ್ತಿದ್ದಾರೆ, ಸಾಯುತ್ತಿದ್ದಾರೆ. ಜೊತೆಗೆ ಭಾರತದ ಆರ್ಥಿಕತೆ ಕುಸಿಯುತ್ತಿದೆ.

ಉದ್ಯೋಗಗಳು ಕುಸಿಯುತ್ತಿವೆ. ಈ ಕುಸಿಯುತ್ತಿರುವ ಭಾರತದ ಮೇಲೆ ಮೋದಿ-ಶಾ ದ್ವಯರು ಪೂತನಿ ಬಂಡವಾಳಶಾಯಿ ಜೊತೆಗೂಡಿಕೊಂಡು ಕುಣಿದು ಕುಪ್ಪಳಿಸಿ ತುಳಿದು ಕುಸಿತವನ್ನು ಪಾತಾಳ ಕಾಣುವಂತೆ ಮಾಡುತ್ತಿದ್ದಾರೆ. ಸಾರ್ವಜನಿಕ ಸಂಪತ್ತನ್ನು ಖಾಸಗಿಗೆ ಮಾರಾಟ ಮಾಡಿಕೊಂಡು ಸರ್ಕಾರದ ಜೀವನ ಸಾಗಿಸುವುದು ಹೆಚ್ಚುತ್ತಿದೆ. ಇದರಿಂದಲೂ ಉದ್ಯೋಗ ಉದುರಿ ಹೋಗುತ್ತಿದೆ. ಆತ್ಮಹತ್ಯೆ ಹೆಚ್ಚುತ್ತಿದೆ.

ಕೇಂದ್ರ ಸರ್ಕಾರ 16 ದೇಶಗಳ ನಡುವೆ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರಕ್ಕೆ ಹೆಬ್ಬೆಟ್ಟು ಒತ್ತಲು ಸಿದ್ಧವಾಗಿದೆ. ಸಂಸತ್ತಿನ ಮುಂದೆ ಇಡದೆ, ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಗುಟ್ಟಾಗಿ ಈ ಕೊಲೆ ಸಂಚು ಜರುಗುತ್ತಿದೆ. ಭಾರತದಲ್ಲಿ ಸಣ್ಣ ಸಣ್ಣ ರೈತರು ಮತ್ತು ಕೆಲವು ಜನರು ಹಾಲು ಉತ್ಪಾದನೆಯಲ್ಲಿ ತೊಡಗಿ ಇದನ್ನೆ ತಮ್ಮ ಜೀವನಧಾರ ಮಾಡಿಕೊಂಡಿದ್ದಾರೆ. ಹೆಚ್ಚಾಗಿ ಮಹಿಳೆಯರ ಬದುಕು ಇದನ್ನು ಅವಲಂಬಿಸಿಯೇ ಉಸಿರಾಡುತ್ತಿದೆ ಎಂದರು.

ಮಾನವೀಯ ಸ್ಪಂದನೆ: ಇಥಿಯೋಪಿಯಾದ ಪ್ರಧಾನಿ ಅಹಮದ್‌, ಹಸಿವಿನಿಂದ ಎಲುಬಿನ ಗೂಡಾಗಿದ್ದ ದೇಶವನ್ನು ಎರಡೇ ವರ್ಷದಲ್ಲಿ ಯುದ್ಧವಿಲ್ಲದೆ ಎಲ್ಲವನ್ನು, ಎಲ್ಲರನ್ನೂ ಗೆದ್ದುಕೊಳ್ಳುತ್ತಾರೆೆ. ಇದಕ್ಕೆ 52 ಇಂಚಿನ ಎದೆಯಲ್ಲ, ಆ ಎದೆ ಒಳಗಿರುವ ಹೃದಯದೊಳಗೆ ಮಾನವೀಯ ಸ್ಪಂದನೆಗಳು ಬೇಕು ಅಷ್ಟೇ ಎಂದು ಹೇಳಿದರು.

ಆಹಾರ ಭದ್ರತೆ ಮೇಲೆ ಪರಿಣಾಮ: ಜನಾಂದೋಲನ ಮಹಾ ಮೈತ್ರಿಯ ಎಸ್‌.ಆರ್‌.ಹಿರೇಮಠ ಮಾತನಾಡಿ, ಮುಕ್ತ ವ್ಯಾಪಾರ ಒಪ್ಪಂದದಿಂದ ದೇಶದ ಕೈಗಾರಿಕಾ ವಲಯ, ಆಹಾರ ಭದ್ರತೆ ಮೇಲೆ ಪರಿಣಾಮ ಬೀರುತ್ತದೆ. ಪ್ರಧಾನಿ ನರೇಂದ್ರ ಮೋದಿ, ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಈ ವಿಷಯದಲ್ಲಿ ಸಮಗ್ರ ಪರಿಕಲ್ಪನೆ ಮೂಡಿದಂತಿಲ್ಲ ಎಂದರು.

ಅನುಮಾನಾಸ್ಪದ ನಡೆ: ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಮುಕ್ತ ವ್ಯಾಪಾರವನ್ನು ಅಂತಾರಾಷ್ಟ್ರೀಯ ಒಪ್ಪಂದವನ್ನು ಸಂಸತ್ತಿನಲ್ಲಿ ಚರ್ಚೆ ಮಾಡದೆ ಕಂಪನಿ ವ್ಯವಹಾರದಂತೆ ಮಾಡಿಕೊಳ್ಳುತ್ತಿರುವುದು ಪ್ರಜಾತಾಂತ್ರಿಕ ನಡೆಯಲ್ಲ. ಆರೆಸ್ಸೆಸ್‌, ಸ್ವದೇಶಿ ಜಾಗರಣ ಮಂಚ್‌ನವರು ಈ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಅನುಮಾನ ಮೂಡಿಸಿದೆ. ಅವರಿಗೆ ನಿಜವಾದ ಕಾಳಜಿ ಇದ್ದಲ್ಲಿ ಬೀದಿಗಿಳಿದು ಹೋರಾಡಬೇಕಿತ್ತು ಎಂದರು.
ಎಐಡಿವೈಒನ ಚಂದ್ರಶೇಖರ ಮೇಟಿ, ರೈತಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಅಭಿರುಚಿ ಗಣೇಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಇಂದು ದನಗಳ ನೇತೃತ್ವದಲ್ಲಿ ಪ್ರತಿಭಟನೆ
ಮೈಸೂರು: ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಗುರುವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದನಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಮೈಸೂರಿನಲ್ಲಿ ಬೆಳಗ್ಗೆ 11ಗಂಟೆಗೆ ನಗರದ ರಾಮಸ್ವಾಮಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ದನಗಳ ಮೆರವಣಿಗೆ ನಡೆಸಿ ಪ್ರತಿಭಟನಾ ಸತ್ಯಾಗ್ರಹ ನಡೆಸಲಾಗುವುದು, ನಮ್ಮ ಈ ಹೋರಾಟಕ್ಕೆ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಕೂಡ ಕೈಜೋಡಿಸಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.