ಕಾರಿಬೈಲು ಕಿ.ಪ್ರಾ. ಶಾಲೆ: ಮಕ್ಕಳಿದ್ದರೂ ರಸ್ತೆ ಸೌಕರ್ಯವಿಲ್ಲ


Team Udayavani, Oct 24, 2019, 5:54 AM IST

karibailu

ಹಳ್ಳಿಹೊಳೆ: ಇದು ಕೆರಾಡಿ ಗ್ರಾಮದಲ್ಲಿರುವ ಕಿರಿಯ ಪ್ರಾಥಮಿಕ ಶಾಲೆ. ಆದರೆ ಇಲ್ಲಿಗೆ ಬರುವ ಮಕ್ಕಳು ಕೆರಾಡಿ ಮಾತ್ರವಲ್ಲದೆ ಹಳ್ಳಿಹೊಳೆಯಿಂದಲೂ ಬರುತ್ತಾರೆ. ಕಿ.ಪ್ರಾ. ಶಾಲೆಯಾದರೂ ಇಲ್ಲಿ ಈಗ 31 ಮಕ್ಕಳಿದ್ದಾರೆ. ಆದರೆ ಇಲ್ಲಿನ ಮುಖ್ಯ ಸಮಸ್ಯೆಯೆಂದರೆ ಈ ಶಾಲೆಗೆ ಬರಲು ಸರಿಯಾದ ರಸ್ತೆ ಸೌಕರ್ಯವೇ ಇಲ್ಲ. ಇದರಿಂದ ಇಲ್ಲಿಗೆ ಮಕ್ಕಳು ಬರಲು ಹಿಂದೇಟು ಹಾಕುತ್ತಿದ್ದು, ಬೇರೆಡೆ ಹೋಗುತ್ತಿದ್ದಾರೆ.

ಇದು ಕೆರಾಡಿ ಗ್ರಾಮದ ಕಾರಿಬೈಲು ಕಿ.ಪ್ರಾ. ಶಾಲೆಯ ದುಸ್ಥಿತಿ. ಎಲ್ಲ ಗ್ರಾಮೀಣ ಭಾಗದ ಶಾಲೆಗಳ ಸಮಸ್ಯೆಯೆಂದರೆ ಮಕ್ಕಳ ಸಂಖ್ಯೆ ಕಡಿಮೆಯಿರುವುದು. ಇಲ್ಲಿ ತರಗತಿಗೆ ಇಂತಿಷ್ಟಾದರೂ ಮಕ್ಕಳಿದ್ದಾರೆ. ಆದರೆ ಇಲ್ಲಿಗೆ ಬರಲು ರಸ್ತೆಯೇ ಇಲ್ಲ. ಈಗಿರುವುದು ಮಣ್ಣಿನ ರಸ್ತೆ. ಆದರೆ ಮಳೆ ನೀರು ಹರಿದು ಹೋಗುತ್ತಿರುವುದರಿಂದ ಈ ರಸ್ತೆಯಲ್ಲಿ ವಾಹನ ಬಿಡಿ, ನಡೆದುಕೊಂಡು ಹೋಗುವುದು ಕಷ್ಟ.

ಶಾಲೆ ಬಗ್ಗೆ ಮಾಹಿತಿ
ಇದು ಕಿ.ಪ್ರಾ. ಶಾಲೆಯಾಗಿದ್ದು, 22 ವರ್ಷಗಳ ಹಿಂದೆ ಆರಂಭಗೊಂಡಿದೆ. ಈ ವರ್ಷ 1ನೇ ತರಗತಿಗೆ 8 ಮಂದಿ ದಾಖಲಾತಿ ಮಾಡಿಕೊಂಡಿದ್ದಾರೆ. ಇದಕ್ಕೂ ಹಿಂದಿನ ವರ್ಷಗಳಲ್ಲಿ ಹೆಚ್ಚಿನ ದಾಖಲಾತಿಗಳು ಆಗುತ್ತಿತ್ತು. ಆದರೆ ಇಲ್ಲಿಗ ರಸ್ತೆ ದುಸ್ಥಿತಿ ಕಂಡು, ಪೋಷಕರೇ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಈಗ 1 ರಿಂದ 5 ನೇ ತರಗತಿಯವರೆಗೆ ಒಟ್ಟು 31 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ವರ್ಷ 33 ಮಕ್ಕಳಿದ್ದರು.

ಈ ಶಾಲೆ ಕೆರಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುತ್ತದೆ. ಆದರೆ ಈಗಿರುವ ಮಣ್ಣಿನ ರಸ್ತೆಯಿರುವ ಹೆಚ್ಚಿನ ಭಾಗ ಹಳ್ಳಿಹೊಳೆ ಗ್ರಾ.ಪಂ.ಗೆ ಸೇರಿದೆ. ಇದೇ ಈ ರಸ್ತೆ ಅಭಿವೃದ್ಧಿ ಕಾಣದಿರಲು ಕಾರಣವಾಗಿದೆ. ಕೆರಾಡಿಯಿಂದ ಕಾರಿಬೈಲು, ಕುಂದಲಬೈಲುವರೆಗಿನ ಸುಮಾರು 10 ಕಿ.ಮೀ. ರಸ್ತೆಗೆ ಡಾಮರೀಕರಣವಾದರೆ ಈ ಭಾಗದ ಶಾಲೆ ಮಾತ್ರವಲ್ಲದೆ ಜನರಿಗೂ ಸಾಕಷ್ಟು ಅನುಕೂಲವಾಗಲಿದೆ ಎನ್ನುವುದು ಇಲ್ಲಿನ ಜನರ ಅಭಿಪ್ರಾಯ.

ಶಿಕ್ಷಕರ ಬೇಡಿಕೆ
ಸದ್ಯಕ್ಕೆ ಈ ಶಾಲೆಯಲ್ಲಿ ಇಬ್ಬರು ಖಾಯಂ ಶಿಕ್ಷಕರಿದ್ದಾರೆ. ಒಬ್ಬರು ಬ್ರಹ್ಮಾವರ, ಮತ್ತೂಬ್ಬರು ಕೋಟೇಶ್ವರದಿಂದ ನಿತ್ಯ ಇಲ್ಲಿಗೆ ಹೋಗಿ ಬರುತ್ತಾರೆ. ಮತ್ತೂಬ್ಬರು ಗೌರವ ಶಿಕ್ಷಕರಿದ್ದು, ಅವರಿಗೆ ಪೋಷಕರೇ ಗೌರವ ಧನ ಸಂಗ್ರಹಿಸಿ ನೀಡುತ್ತಿದ್ದಾರೆ. ಇಷ್ಟೊಂದು ಮಕ್ಕಳಿದ್ದರೂ, ಕನಿಷ್ಠ ಇನ್ನೊಬ್ಬರು ಶಿಕ್ಷಕರನ್ನು ಕೊಟ್ಟರೆ ಪ್ರಯೋಜನವಾಗುತ್ತದೆ ಎನ್ನುವುದು ಹೆತ್ತವರ ಬೇಡಿಕೆಯಾಗಿದೆ.

ಎಲ್ಲರಿಗೂ ಮನವಿ ಕೊಟ್ಟಾಯಿತು..
ಕೆರಾಡಿಯಿಂದ ಕುಂದಲಬೈಲುವರೆಗಿನ ಸುಮಾರು 10 ಕಿ.ಮೀ. ರಸ್ತೆ ಡಾಮರೀಕರಣ ಮಾಡಿ ಅಂತ ಸಂಸದರು, ಶಾಸಕರು, ಜಿ.ಪಂ., ತಾ.ಪಂ., ಗ್ರಾ.ಪಂ. ಸಹಿತ ಎಲ್ಲರಿಗೂ ಅನೇಕ ಬಾರಿ ಮನವಿ ಕೊಟ್ಟಾಗಿದೆ. ಆದರೆ ಇಲ್ಲಿಯವರೆಗೆ ಯಾರೂ ಇತ್ತ ಗಮನವೇ ಹರಿಸಿಲ್ಲ. ಈ ಶಾಲೆಗೆ ಬರುವ ಮಕ್ಕಳು ಮಳೆಗೆ ಮಣ್ಣಿನ ರಸ್ತೆಯಲ್ಲಿ ಕಷ್ಟಪಟ್ಟು ನಡೆದುಕೊಂಡು ಬರುತ್ತಿದ್ದಾರೆ. ಇದಲ್ಲದೆ ಇಲ್ಲಿನ ಸುಮಾರು 40 ಮನೆಗಳ ಜನರಿಗೆ ಪಡಿತರ ತರಲು ಕೆರಾಡಿ ಪೇಟೆಗೆ ಹೋಗಬೇಕು. ಪಡಿತರಕ್ಕಿಂತ ಹೆಚ್ಚಿನ ಹಣವನ್ನು ಬಾಡಿಗೆಗೆ ನೀಡಬೇಕು.
-ಅರುಣ್‌ ಭಟ್‌, ಸ್ಥಳೀಯರು

ರಸ್ತೆಗೆ ಅನುದಾನ ಇಡಲಾಗುವುದು
ಬೈಂದೂರು ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ 250 ಕೋ.ರೂ. ಅನುದಾನವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದು, ಆ ಪೈಕಿ ಈ ಕೆರಾಡಿಯಿಂದ ಕುಂದಲಬೈಲುವರೆಗಿನ ರಸ್ತೆಯ ಅಭಿವೃದ್ಧಿಗೂ ಅನುದಾನ ಮೀಸಲಿರಿಸಿ, ಆದಷ್ಟು ಶೀಘ್ರ ಡಾಮರೀಕರಣ ಮಾಡಲಾಗುವುದು. ಈ ಶಾಲೆಗೂ ಅನುಕೂಲವಾಗುವುದರಿಂದ ಆದ್ಯತೆ ನೆಲೆಯಲ್ಲಿ ಈ ಬಗ್ಗೆ ಗಮನಹರಿಸಲಾಗುವುದು. ಇನ್ನೂ ಶಿಕ್ಷಕರ ಬೇಡಿಕೆ ಬಗ್ಗೆ ಶಿಕ್ಷಣಾಧಿಕಾರಿಗಳ ಜತೆಗೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ.
-ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.