ಮಿತಿ ಮೀರಿದ ನೀರು; ಜನರ ಕಣ್ಣೀರು


Team Udayavani, Oct 24, 2019, 3:06 AM IST

mitimirida

ಹುಬ್ಬಳ್ಳಿ: ಮಳೆರಾಯನ ಆರ್ಭಟ ಮುಂದುವರಿದಿದ್ದು, ನದಿಗಳ ನೀರಿನ ಮಟ್ಟ ಏರುತ್ತಲೇ ಇದೆ. ತೀರ ಪ್ರದೇಶದಲ್ಲಿ ಪ್ರವಾಹ ಮಿತಿ ಮೀರಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮತ್ತೆ ಐವರು ಮೃತಪಟ್ಟಿದ್ದು, ಅಪಾರ ಪ್ರಮಾಣ ಆಸ್ತಿ ಪಾಸ್ತಿ ಹಾನಿಯಾಗಿದೆ.

ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ, ದೂಧಗಂಗಾ, ತುಂಗಭದ್ರಾ, ವರದಾ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಬೆಳಗಾವಿ, ಬಾಗಲ ಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳು ಅಕ್ಷರಶಃ ತತ್ತರಿಸಿ ಹೋಗಿವೆ. ಲಕ್ಷಾಂತರ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ಬಳಿ ಬಿದರಕೆರೆ ಗ್ರಾಪಂ ವ್ಯಾಪ್ತಿಯ ನೀರು ಗಂಟಿ ಬಸವರಾಜಪ್ಪ (36) ಹಳ್ಳದಲ್ಲಿ ಕೊಚ್ಚಿ ಹೋಗಿ ದ್ದಾನೆ. ಶಿವಮೊಗ್ಗದ ಕೊಪ್ಪದಕೆರೆಯಲ್ಲಿ ಕೊಚ್ಚಿ ಹೋಗಿದ್ದ ಎಮ್ಮೆಹಟ್ಟಿ ಗ್ರಾಮದ ರವಿ (40) ಮೃತ ದೇಹ ಭದ್ರಾ ನದಿ ತೀರದಲ್ಲಿ ಪತ್ತೆಯಾಗಿದೆ.

ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ರಾವಿಹಾಳ ಗ್ರಾಮದ ವಿನೋದ್‌ ಕುಮಾರ್‌ (25) ಗರ್ಜಿಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಾಲಕ ಸಂತೋಷ ಮೃತ ದೇಹ ಮುದುಗೋಟ ಗ್ರಾಮದ ಬಳಿ ಪತ್ತೆಯಾಗಿದೆ.

ಸವದತ್ತಿ ತಾಲೂಕು ಮುನವಳ್ಳಿ ಬಳಿ ಮಲಪ್ರಭಾ ನದಿಯಲ್ಲಿ ಆದಿಲ್‌ ಹುಸೇನ್‌ ಸಾಬ್‌(38) ಶವ ಪತ್ತೆಯಾಗಿದೆ. ಬೆಳಗಾವಿಯಲ್ಲಿ ಮಳೆ ಕಡಿಮೆ ಯಾಗಿದ್ದರೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಗೆ ಕೃಷ್ಣಾ ನದಿಗೆ ಅಪಾರ ಪ್ರಮಾಣ ನೀರು ಹರಿದು ಬರುತ್ತಿದ್ದು, ಚಿಕ್ಕೋಡಿ ಉಪವಿಭಾಗದ 6 ಸೇತುವೆ ಗಳು ಮುಳುಗಡೆಯಾಗಿವೆ. ನಿಪ್ಪಾಣಿ, ರಾಮ ದುರ್ಗ, ಮೂಡಲಗಿ, ಗೋಕಾಕ ತಾಲೂಕುಗಳಲ್ಲಿ ಭಾರೀ ಹಾನಿಯಾಗಿದೆ.

ಕೂಡಲಸಂಗಮ ದೇಗುಲ ಮತ್ತೆ ಜಲಾವೃತ
ಬಾಗಲಕೋಟೆ: ಐತಿಹಾಸಿಕ ಕೂಡಲಸಂಗಮದ ಸಂಗಮೇಶ್ವರ ದೇವಾಲಯ ಮಲಪ್ರಭಾ, ಕೃಷ್ಣಾ ಹಾಗೂ ಘಟಪ್ರಭಾ ನದಿ ನೀರಿನಿಂದ ಜಲಾವೃತಗೊಂಡಿದ್ದು, ದೇವಸ್ಥಾನದ ಭಕ್ತರ ಭೇಟಿ ಸ್ಥಗಿತಗೊಳಿಸಲಾಗಿದೆ. ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿ ಸಂಗಮಗೊಳ್ಳಲಿದ್ದು, ದೇವಸ್ಥಾನದ ಮೆಟ್ಟಿಲುಗಳು ನೀರಿನಲ್ಲಿ ಮುಳುಗಿವೆ. ದೇವಸ್ಥಾನದ ಒಳಗೆ ಸುಮಾರು ಎರಡು ಅಡಿಗೂ ಹೆಚ್ಚು ನೀರು ಬಂದಿದ್ದು, ಇಡೀ ದೇವಸ್ಥಾನದ ಸುತ್ತ ಅಪಾರ ನೀರು ಆವರಿಸಿಕೊಂಡಿದೆ.

109 ಗ್ರಾಮಗಳಲ್ಲಿ ನೆರೆ: ಬಾಗಲಕೋಟೆ ಜಿಲ್ಲೆಯಲ್ಲಿ 109 ಗ್ರಾಮಗಳು ಬಾಧಿತಗೊಂಡಿದ್ದು, 17 ಜಾನುವಾರುಗಳು ಮೃತಪಟ್ಟಿವೆ. 888 ಮನೆಗಳು ಬಿದ್ದಿದ್ದು, ಆರು ಪರಿಹಾರ ಕೇಂದ್ರ ತೆರೆಯಲಾಗಿದೆ. ಹುನಗುಂದ ತಾಲೂಕಿನ 3404 ಜನರಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ರಾಜೇಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.