ಐಟಿಬಿಪಿಗೆ ಹೆಚ್ಚಿನ ಸಿಬಂದಿ: ಕೇಂದ್ರ ಸಂಪುಟ ನಿರ್ಣಯ
Team Udayavani, Oct 24, 2019, 12:03 AM IST
ಹೊಸದಿಲ್ಲಿ: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಗೆ
(ಐಟಿಬಿಪಿ) ಹೆಚ್ಚಿನ ಸಿಬಂದಿ ನಿಯೋ ಜನೆ, ಚೀನಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ಅವರನ್ನು ನಿಯೋಜನೆ ಮಾಡುವ ಉದ್ದೇಶದಿಂದ 2 ಹೊಸ ಘಟಕ ಸ್ಥಾಪನೆಗಳ ನಿಟ್ಟಿನಲ್ಲಿ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್ 2001ರ ಬಳಿಕ ಇದೇ ಮೊದಲ ಬಾರಿಗೆ ಸಿಬಂದಿ ಪರಿಷ್ಕರಣೆ ಮಾಡುವ ಚಿಂತನೆ ನಡೆಸಲಾಗಿದೆ ಎಂದಿದ್ದಾರೆ. ಗ್ರೂಪ್ ಎ ಸಾಮಾನ್ಯ ಕರ್ತವ್ಯ ವಿಭಾಗದಲ್ಲಿ ಸಿಬಂದಿ ಸಂಖ್ಯೆ ಹೆಚ್ಚು ಮಾಡುವ ನಿರ್ಧಾರದಿಂದಾಗಿ 3 ಸಾವಿರ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುತ್ತದೆ.
ಚೀನಕ್ಕೆ ಹೊಂದಿಕೊಂಡು ಇರುವ 3, 488 ಕಿಮೀ ದೂರದ ಗಡಿ ಪ್ರದೇಶದಲ್ಲಿ ಕಾವಲು ಮತ್ತು ಭದ್ರತೆ ನೀಡುವ ನಿಟ್ಟಿನಲ್ಲಿ 2 ಹೆಚ್ಚುವರಿ ಘಟಕಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಚಂಡೀಗಢ ಮತ್ತು ಗುವಾಹಟಿಯಲ್ಲಿ ಅವುಗಳ ಕೇಂದ್ರ ಕಚೇರಿ ಇರಲಿದೆ. ಒಂದೂವರೆ ವರ್ಷಗಳಿಂದ ಈ ಪ್ರಸ್ತಾವ ಅನುಮೋದನೆಗಾಗಿ ಕೇಂದ್ರ ಸಂಪುಟದ ಮುಂದೆ ಇತ್ತು.
ಗೃಹ ಉಸ್ತುವಾರಿ ಬೇಡ: ಅಸ್ಸಾಂ ರೈಫಲ್ಸ್ ಅತೃಪ್ತಿ
185 ವರ್ಷಗಳಷ್ಟು ಇತಿಹಾಸ ಹೊಂದಿರುವ ಅರೆಸೇನಾ ಪಡೆಯಾದ ಅಸ್ಸಾಂ ರೈಫಲ್ಸ್ ಅನ್ನು ಕೇಂದ್ರ ಗೃಹ ಇಲಾಖೆಯ ಸುಪರ್ದಿಗೆ ತರಲು ನಡೆಸಲಾಗುತ್ತಿರುವ ಪ್ರಯತ್ನಗಳ ಬಗ್ಗೆ ಆ ಪಡೆಯ ಹಿರಿಯ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಸ್ಸಾಂ ರೈಫಲ್ಸ್, ಈಗಿರುವಂತೆ ಭಾರತೀಯ ಸೇನೆಯ ಅಧೀನದಲ್ಲೇ ಮುಂದುವರಿಯಬೇಕು. ಹಾಗೊಂದು ವೇಳೆ ಈ ಪಡೆಯನ್ನು ಗೃಹ ಇಲಾಖೆಯ ವ್ಯಾಪ್ತಿಗೆ ತಂದರೆ, ಭಾರತ-ಚೀನ ಗಡಿಯಲ್ಲಿ ಆ ಪಡೆ ನಿರ್ವಹಿಸುತ್ತಿರುವ ಕಾರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ವಿಚಾರವನ್ನು ಮುಂದಿನವಾರ ಗೃಹ ಇಲಾಖೆಗೆ ಮನವಿ ಮಾಡಿಕೊಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
MUST WATCH
ಹೊಸ ಸೇರ್ಪಡೆ
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Rachana inder: ಮರ್ಡರ್ ಮಿಸ್ಟರಿ 4 ಎನ್ 6