ಪ್ರವಾಹಕ್ಕೆ ಚಿತ್ತರಗಿ ತಲ್ಲಣ

ವಿಜಯ ಮಹಾಂತೇಶ್ವರ ಮೂಲ ಮಠ, ಗ್ರಾಪಂ ಕಟ್ಟಡ ಜಲಾವೃತ

Team Udayavani, Oct 24, 2019, 3:27 PM IST

24-October-17

ಅಮೀನಗಡ: ಮಲಪ್ರಭಾ ನದಿ ಪ್ರವಾಹಕ್ಕೆ ಸಮೀಪದ ಚಿತ್ತರಗಿ ಗ್ರಾಮದ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ. ಕಳೆದ ಆಗಸ್ಟ್‌ ತಿಂಗಳಲ್ಲಿ ಮಲಪ್ರಭಾ ನದಿ ಭೀಕರ ಪ್ರವಾಹದಿಂದ ತಲ್ಲಣಗೊಂಡಿದ್ದ ಚಿತ್ತರಗಿ ಗ್ರಾಮದ ಜನ ಈಗ ಮತ್ತೂಮ್ಮೆ ಗ್ರಾಮಕ್ಕೆ ಪ್ರವಾಹದ ನೀರು ನುಗ್ಗಿದ್ದರಿಂದ ಭಯಭೀತರಾಗಿದ್ದಾರೆ.

ಮಂಗಳವಾರ ಸಂಜೆವರೆಗೆ ಗ್ರಾಮದಲ್ಲಿ ಕ್ಷಣಕ್ಕೊಮ್ಮೆ ನೀರು ಹೆಚ್ಚಾಗುತ್ತ ಹೋಗಿದೆ. ಆದರೆ ರಾತ್ರಿ ಪ್ರವಾಹ ನೀರು ಬರುವುದಿಲ್ಲ ಎಂದು ತಿಳಿದಿದ್ದ ಗ್ರಾಮಸ್ಥರಿಗೆ ರಾತ್ರಿಯಿಂದಲೇ ಬುಧವಾರ ಬೆಳಗಿನವರೆಗೂ ಬಂದ ಪ್ರವಾಹ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಪಂ ಕಟ್ಟಡ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ. ವಿವಿಧ ಮಳಿಗೆಗೆಳು, ಬಸ್‌ ನಿಲ್ದಾಣ, ಸರ್ಕಾರಿ ಪ್ರಾಥಮಿಕ
ಆರೋಗ್ಯ ಕೇಂದ್ರ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಹಾಸ್ಟೆಲ್‌, ವಿವಿಧ ಬ್ಯಾಂಕುಗಳು ಪ್ರವಾಹ ನೀರಿನಿಂದ ಜಲಾವೃತಗೊಂಡಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಹಬ್ಬದ ಸಂಭ್ರಮ ಕಸಿದ ಪ್ರವಾಹ: ದೀಪಾವಳಿ ಹಬ್ಬದ ತಯಾರಿಯಲ್ಲಿದ್ದ ಗ್ರಾಮಸ್ಥರಿಗೆ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನವರೆಗೂ ಹರಿದ ಪ್ರವಾಹದ ಭೋರ್ಗರತೆ ನೀರು, ಆಗಸ್ಟ್‌ ತಿಂಗಳಿನಲ್ಲಿ ಬಂದು ಹೋದ ಪ್ರವಾಹದ ಕಹಿ ಘಟನೆ ಮತ್ತೆ ಮರುಕಳಿಸಿದೆ. ಇದರಿಂದ ಗ್ರಾಮದಲ್ಲಿ ಗಂಜಿಕೇಂದ್ರ ಸ್ಥಾಪಿಸಲಾಗಿದ್ದು, ಜನ ಗಂಜಿಕೇಂದ್ರದತ್ತ ಮುಖ ಮಾಡಿದ್ದಾರೆ.

ಈಗಾಗಲೇ 30ಕ್ಕೂ ಹೆಚ್ಚು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ನೂರಾರು ಕುಟುಂಬಗಳು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಸ್ಥಳಕ್ಕೆ ಎಸಿ ಭೇಟಿ: ಬುಧವಾರ ಬೆಳಗ್ಗೆ ಬಾಗಲಕೋಟೆ ಉಪವಿಭಾಗಾಧಿ ಕಾರಿ ಎಂ.ಗಂಗಪ್ಪ, ತಹಶೀಲ್ದಾರ್‌ ಆನಂದ ಕೋಲಾರ ಚಿತ್ತರಗಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದಾರೆ.

ಸಂಚಾರ ಬಂದ್‌: ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನವರೆಗೂ ಹರಿದ ಪ್ರವಾಹದ ನೀರಿನಿಂದ ಚಿತ್ತರಗಿಯಿಂದ ಗಂಗೂರ, ಚಿತ್ತರಗಿಯಿಂದ ಕೂಲಸಂಗಮ ರಸ್ತೆ ಜಲಾವೃತವಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಹೊರ ವಲಯಗಳಿಗೆ ಸಾರ್ವಜನಿಕರು ಪ್ರಯಾಣಿಸುವ ಎಲ್ಲ ಹೆದ್ದಾರಿ ಬಂದ್‌ ಆಗಿವೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.