ಶ್ರೀರಾಮುಲು ನಡೆಗೆ ಮಾಜಿ ಶಾಸಕ ಗೋವಿಂದಪ್ಪ ಅಸಮಾಧಾನ
Team Udayavani, Oct 24, 2019, 5:31 PM IST
ಚಿತ್ರದುರ್ಗ: ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ವಿರುದ್ಧ ಹೊಸದುರ್ಗ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಪ್ರವಾಸದ ಪಟ್ಟಿಯಂತೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡದೇ ಅರ್ಧದಿಂದ ವಾಪಾಸು ತೆರಳಿದ ರಾಮುಲು ನಡೆಯನ್ನು ಖಂಡಿಸಿದ್ದಾರೆ.
ತಾಲೂಕಿನ ಜನ ಸಚಿವರಿಂದ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಂತ್ರಸ್ತರ ನೋವು ಆಲಿಸದೆ ಅರ್ಧಕ್ಕೆ ಬಂದು ಹೋಗಿರುವುದು ಅವರಿಗಿರುವ ಜವಾಬ್ದಾರಿ ತೋರಿಸುತ್ತದೆ ಎಂದಿದ್ದಾರೆ.
ಮನೆ ಹಾನಿ , ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡದೆ ತೆರಳಿದ್ದು ದುರಂತ.ನೊಂದ ಗ್ರಾಮೀಣ ಜನರಿಗೆ ಪರಿಹಾರದ ಭರವಸೆಯೂ ನೀಡಿಲ್ಲ ಎಂದು ಗೋವಿಂದಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಸಿಎಂ ಸಭೆ ನಡೆಸಿ ಸೂಚಿಸಿದರೂ ಈವರೆಗೆ ನೊಂದವರಿಗೆ ಪರಿಹಾರ ಸಿಕ್ಕಿಲ್ಲ. ಶಾಸಕರು, ಸಂಸದರೂ ನಮ್ಮ ತಾಲೂಕಿನ ಜನರ ಸಮಸ್ಯೆಗೆ ಸ್ಪಂದಿಸಿಲ್ಲ.
ಪ್ರವಾಹ ಪೀಡಿತ ಜನರ ಸಮಸ್ಯೆ ಬಗ್ಗೆ ಸಚಿವರಿಗೆ ತಿಳಿಸಲು ಬಂದಿದ್ದೆ. ಆದರೆ, ಶ್ರೀರಾಮುಲು ಅರ್ಧಕ್ಕೆ ಪ್ರವಾಹ ಪೀಡಿತ ಪ್ರದೇಶ ಭೇಟಿ ಮೊಟಕುಗೊಳಿಸಿ ತೆರಳಿದ್ದಾರೆ ಎಂದರು.
ನಿನ್ನೆ ಶ್ರೀರಾಮುಲು ಆಪ್ತ ಕಾರ್ಯದರ್ಶಿಗಳು ಕಳಿಸಿದ್ದ ಪ್ರವಾಸದ ಪಟ್ಟಿಯ ಪ್ರಕಾರ ರಾಮಗಿರಿ ಬಳಿ ಇರುವ ಸುಡುಗಾಡು ಸಿದ್ದರ ಕಾಲೋನಿ ಹಾಗೂ ಕೆಲ್ಲೋಡು ಬಳಿ ಭೇಟಿ ನೀಡಬೇಕಾಗಿತ್ತು. ಆದರೆ, ಲೋಕದೊಳಲು, ನೀರಗುಂದ ಭೇಟಿ ನಂತರ ಸಾಣೇಹಳ್ಳಿ ಮಠಕ್ಕೆ ಭೇಟಿ ನೀಡಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದು ವಾಪಾಸಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ