ಗಡಿನಾಡ ಲವ್ ಸ್ಟೋರಿ

ಮರಾಠಿ ಹುಡುಗಿ ಕನ್ನಡ ಹುಡುಗ

Team Udayavani, Oct 25, 2019, 5:38 AM IST

q-77

ಕನ್ನಡದ ಅನೇಕ ಚಿತ್ರಗಳಲ್ಲಿ ನಾಡಿನ ಸಮಸ್ಯೆ ಕುರಿತ ವಿಷಯಗಳು ಬಂದಿವೆ. ಅದಕ್ಕೆ ತಕ್ಕ ಪರಿಹಾರವನ್ನೂ ಆ ಸಿನಿಮಾದಲ್ಲೇ ಸೂಚಿಸುವ ಪ್ರಯತ್ನವೂ ಆಗಿದೆ. ಈಗ ಆ ಸಾಲಿಗೆ ಗಡಿನಾಡ ಭಾಗದಲ್ಲಿರುವ ಸಮಸ್ಯೆಗಳ ಬಗ್ಗೆ ಹೇಳುವ ಮತ್ತು ತೋರಿಸುವ ಸಿನಿಮಾವೊಂದು ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿದೆ. ಅಂದಹಾಗೆ, ಆ ಚಿತ್ರದ ಹೆಸರು “ಗಡಿನಾಡು’. ಈ ಹಿಂದೆ “ಗುಣ’ ಹಾಗೂ “ನಿರುದ್ಯೋಗಿ’ ಚಿತ್ರಗಳನ್ನು ನಿರ್ದೇಶಿಸಿದ್ದ ನಾಗ್‌ ಹುಣಸೋಡು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯೂ ಅವರದೇ. ಇನ್ನು, ವಸಂತ್‌ ಮುರಾರಿ ದಳವಾಯಿ ನಿರ್ಮಾಪಕರು. ಚಿತ್ರಕ್ಕೆ ಪ್ರಭು ಸೂರ್ಯ ಹೀರೋ. ಅವರಿಗೆ ಸಂಚಿತಾ ಪಡುಕೋಣೆ ನಾಯಕಿ. ತಮ್ಮ ಚಿತ್ರದ ಅನುಭವ ಹೇಳಲೆಂದೇ ಅವರು ಪತ್ರಕರ್ತರ ಮುಂದೆ ಬಂದಿದ್ದರು.

ನಿರ್ದೇಶಕ ನಾಗ್‌ ಹುಣಸೋಡು ಮಾತಿಗಿಳಿದು, “ಕಥೆ ಮಾಡಿಕೊಂಡ ಬಳಿಕ ಶೀರ್ಷಿಕೆ ಬಗ್ಗೆ ಸಾಕಷ್ಟು ಚರ್ಚೆಯಾಯ್ತು. ಇದು ನಾಡಿನ ಗಡಿಭಾಗದ ಸಮಸ್ಯೆ ಕುರಿತಾದ ಸಿನಿಮಾ ಆಗಿರುವುದರಿಂದ “ಗಡಿನಾಡು’ ಟೈಟಲ್‌ ಸೂಕ್ತವೆನಿಸಿ, ಅದನ್ನು ಪಕ್ಕಾ ಮಾಡಿದೆವು. ಹಲವು ಹೀರೋಗಳನ್ನು ಅಪ್ರೋಚ್‌ ಮಾಡಲಾಯಿತು. ಆದರೆ, ಯಾರೊಬ್ಬರೂ ಸರಿಯೆನಿಸಲಿಲ್ಲ. ಕೊನೆಗೆ ಪ್ರಭುಸೂರ್ಯ ಆಯ್ಕೆಯಾಯಿತು. “ಗಡಿನಾಡು’ ಅಂದರೆ, ಅದೊಂದು ಸಮಸ್ಯೆ ಬಗ್ಗೆ ಹೇಳಹೊರಟಿರುವ ಚಿತ್ರ. ಬೆಳಗಾವಿಯಲ್ಲಿ ಇಂದು ಸಮಸ್ಯೆಗಳು ಸಾಕಷ್ಟಿವೆ. ಅದು ಭಾಷೆ ಸಮಸ್ಯೆ ಇರಬಹುದು, ಗಡಿ ಸಮಸ್ಯೆ ಇರಬಹುದು ಹೀಗೆ ಹಲವು ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದರ ಜೊತೆಯಲ್ಲಿ ಪರಿಹಾರವನ್ನೂ ಸೂಚಿಸುವ ಪ್ರಯತ್ನ ಮಾಡಲಾಗಿದೆ. ಇದರೊಂದಿಗೆ ಮರಾಠಿ ಹುಡುಗಿ ಜೊತೆ ಕನ್ನಡ ಹುಡುಗನ ಪ್ರೀತಿ ಶುರುವಾಗುತ್ತೆ. ಅದು ಇನ್ನೊಂದು ಸಮಸ್ಯೆಗೂ ಕಾರಣವಾಗುತ್ತೆ. ಆಮೇಲೆ ಏನೆಲ್ಲಾ ನಡೆದುಹೋಗುತ್ತೆ ಎಂಬುದು ಕಥೆ’ ಎಂಬುದು ನಿರ್ದೇಶಕರ ವಿವರ.

“ಇಲ್ಲಿಯೂ ಒಂದಷ್ಟು ನೈಜ ಘಟನೆಗಳಿವೆ. ಬೆಳಗಾವಿಯಲ್ಲಿ ಚಿತ್ರೀಕರಣ ಶುರುಮಾಡಿದಾಗಲೇ, ನನಗೆ ಮರಾಠ ಸಂಘದಿಂದ ಬೆದರಿಕೆ ಕರೆ ಬಂದಿದ್ದವು. “ಗಡಿನಾಡು’ ಟೈಟಲ್‌ ಯಾಕೆ, ಏನಿದೆ ಎಂಬೆಲ್ಲಾ ಮಾತುಗಳು ಜೋರಾಗಿದ್ದವು. ಅದು ಸಚಿವರೊಬ್ಬರ ತನಕವೂ ಹೋಗಿ, ವಿಧಾನಸಭೆಯಲ್ಲಿ “ಗಡಿನಾಡು’ ಸಿನ್ಮಾ ಮೂಲಕ ಭಾಷೆ, ಜಾತಿ ಕುರಿತಂತೆ ಸಮಸ್ಯೆ ಸೃಷ್ಟಿಸಲಾಗುತ್ತೆ. ಕೂಡಲೇ ಆ ಸಿನಿಮಾ ನಿಲ್ಲಿಸಬೇಕು ಅಂತಾನೂ ಒತ್ತಡಗಳಿದ್ದವು. ಕೊನೆಗೆ, ನಾನು ಸಂಬಂಧಿಸಿದವರಿಗೆ ಸಿನಿಮಾ ಕಥೆ ಸಾರಾಂಶ ಹೇಳಿದ ಮೇಲೆ ಎಲ್ಲವೂ ತಣ್ಣಗಾಯಿತು’ ಎಂದು ಹೇಳಿದರು.

ಹೀರೋ ಪ್ರಭುಸೂರ್ಯ ಅವರಿಗೆ ಇದು ಎರಡನೇ ಸಿನಿಮಾ. ಚಿತ್ರದಲ್ಲಿ ಹೀರೋ ಬೆಂಗಳೂರಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಳಗಾವಿಗೆ ಹೋಗುತ್ತಾನೆ. ಅಲ್ಲಿ ಗಡಿ ಸಮಸ್ಯೆಗಳನ್ನು ಕಂಡು, ಒಂದು ಸೇನೆ ಕಟ್ಟುತ್ತಾನೆ. ಅಲ್ಲೊಂದಷ್ಟು ಖಳಟನರು ಎದುರಾಗುತ್ತಾರೆ. ಅದು ಗಲಾಟೆಗೆ ತಿರುಗುತ್ತದೆ. ಆಮೇಲೆ ಏನಾಗುತ್ತೆ ಎಂಬುದು ಕಥೆ’ ಎಂದರು ಪ್ರಭು ಸೂರ್ಯ. ನಾಯಕಿ ಸಂಚಿತಾ ಪಡುಕೋಣೆ ಇಲ್ಲಿ ದಿಶಾ ಎಂಬ ಮರಾಠ ಹುಡುಗಿಯಾಗಿ ನಟಿಸಿದ್ದಾರಂತೆ. ಹೊಸಬರ ಚಿತ್ರದಲ್ಲಿ ಹೊಸತನ ಹೆಚ್ಚಾಗಿದೆ. ಇದೊಂದು ಬೇರೆ ಕಥೆ ಇರುವ, ಸಮಸ್ಯೆಗೆ ಪರಿಹಾರ ಸೂಚಿಸುವ ಸಿನಿಮಾ ಎಂದರು ಸಂಚಿತಾ.

ನಿರ್ಮಾಪಕ ವಸಂತ್‌ ಮುರಾರಿ ದಳವಾಯಿ ಅವರು ಮೂಲತಃ ಬೆಳಗಾವಿಯವರು. ಅವರಿಗೆ ಕಥೆ ಇಷ್ಟವಾಗಿದ್ದರಿಂದ ಸಿನಿಮಾ ಮಾಡುವ ಮನಸ್ಸು ಮಾಡಿದ್ದಾರೆ. ಗಡಿನಾಡಲ್ಲಿರುವ ಹಲವು ಸಮಸ್ಯೆಗಳನ್ನು ಇಲ್ಲಿ ತೋರಿಸಲಾಗಿದೆ. ಆದರೆ, ಎಲ್ಲೂ ವಿನಾಕಾರಣ ಕಾಂಟ್ರವರ್ಸಿ ಆಗುವಂತಹ ವಿಷಯ ಇಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ವಿನ್‌ ಜೋಶ್ವ ಅವರಿಗೆ ಇದು 11 ನೇ ಚಿತ್ರವಂತೆ. ಇಲ್ಲೊಂದು ಕನ್ನಡ ಮೇಲೆ ಹಾಡು ಮಾಡಿದ್ದಾರಂತೆ. ಹಾಡುಗಳು ಕೇಳುಗರಿಗೆ ಇಷ್ಟವಾಗುತ್ತವೆ ಎಂಬ ವಿಶ್ವಾಸ ಅವರದು. ಗೌರಿ ವೆಂಕಟೇಶ್‌, ರವಿ ಸುವರ್ಣ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಚರಣ್‌ರಾಜ್‌, ದೀಪಕ್‌ ಶೆಟ್ಟಿ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.